ಗದಗ: ಅವಳಿ ನಗರದಲ್ಲಿ ಮೂತ್ರಾಲಯ ಸಮಸ್ಯೆ

ರೋಗಿಗಳು, ಮಹಿಳೆಯರು, ವೃದ್ಧರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

Team Udayavani, Jul 6, 2022, 6:24 PM IST

ಗದಗ: ಅವಳಿ ನಗರದಲ್ಲಿ ಮೂತ್ರಾಲಯ ಸಮಸ್ಯೆ

ಗದಗ: ಗದಗ ಜಿಲ್ಲೆಯಾಗಿ 25 ವರ್ಷಗಳು ಗತಿಸುತ್ತ ಬಂದರೂ ಸಮಸ್ಯೆಗಳ ನಂಟು ಬಗೆಹರಿದಿಲ್ಲ. ಕಳೆದ ಹಲವು ದಶಕಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಾರ್ವಜನಿಕ ಮೂತ್ರಾಲಯ ಹಾಗೂ ಶೌಚಾಲಯಗಳ ಸಮಸ್ಯೆ ಪ್ರಮುಖವಾಗಿದ್ದು, ಅವುಗಳ ಪರಿಹಾರಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಅನ್ನೋ ಆರೋಪ ಸಾರ್ವಜನಿಕ ವಲಯದಲ್ಲಿದೆ.

ಗದಗ-ಬೆಟಗೇರಿ ಅವಳಿ ನಗರಕ್ಕೆ ದಿನನಿತ್ಯ ಸಾವಿರಾರು ಜನರು ತಾಲೂಕು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸುತ್ತಾರೆ. ಆದರೆ, ಜಿಲ್ಲಾ ಕೇಂದ್ರವಾಗಿರುವ ಗದಗ ನಗರದಲ್ಲಿ ಸಾರ್ವಜನಿಕ ಮೂತ್ರಾಲಯ ಹಾಗೂ ಶೌಚಾಲಯಗಳಿಲ್ಲದ ಕಾರಣ ನಗರಕ್ಕೆ ಕಾಲಿಡುವ ಮುಂಚೆಯೇ ಜಲಬಾಧೆ ತೀರಿಸಿಕೊಂಡು ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಗದಗ ನಗರದ ಮಹಾತ್ಮಾ ಗಾಂಧಿ ವೃತ್ತ, ಮುಳಗುಂದ ನಾಕಾ, ಗ್ರೇನ್‌ ಮಾರುಕಟ್ಟೆ, ಹಳೆ ಜಿಲ್ಲಾಧಿಕಾರಿ ಕಚೇರಿ ಸರ್ಕಲ್‌, ಡಂಬಳ ನಾಕಾ, ಹಾತಲಗೇರಿ ನಾಕಾ, ಹೆಲ್ತ್‌ ಕ್ಯಾಂಪ್‌, ಟಾಂಗಾಕೂಟ ಸೇರಿ ಪ್ರಮುಖ ವೃತ್ತ ಹಾಗೂ ಸ್ಥಳಗಳಲ್ಲಿ ಮೂತ್ರಾಲಯ ಹಾಗೂ ಶೌಚಾಲಯಗಳಿಲ್ಲದ ಕಾರಣ ಪುರುಷರು ಸೇರಿ ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ.

ಮೂತ್ರಾಲಯಗಳ ತೆರವು: ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ನಗರದ ಮಹಾತ್ಮಾ ಗಾಂಧಿ ವೃತ್ತ, ಹೆಲ್ತ್‌ಕ್ಯಾಂಪ್‌ ಹಾಗೂ ಮುಳಗುಂದ ನಾಕಾದಲ್ಲಿನ ಮೂತ್ರಾಲಯಗಳನ್ನು ತೆರವುಗೊಳಿಸಲಾಗಿದೆ. ಆದರೆ, ಸೂಕ್ತ ಜಾಗ ಗುರುತಿಸಿ ಅವುಗಳ ಪುನರ್‌ ನಿರ್ಮಾಣಕ್ಕೆ ನಗರಸಭೆ ಮುಂದಾಗುತ್ತಿಲ್ಲ. ನಗರದ ರೋಟರಿ ಸರ್ಕಲ್‌ ಬಳಿ ಮೂತ್ರಾಲಯವಿದ್ದು, ನಿರ್ವಹಣೆ ಕೊರತೆಯಿಂದಾಗಿ ಸಾರ್ವಜನಿಕರು ಉಪಯೋಗಿಸದಂತಾಗಿದೆ.

ನಗರದ ಮಾರುಕಟ್ಟೆ ಪ್ರದೇಶ ಸೇರಿ ಬಹುತೇಕ ಕಡೆಗಳಲ್ಲಿ ಮೂತ್ರಾಲಯ ಹಾಗೂ ಶೌಚಾಲಯಗಳು ಇಲ್ಲದ ಕಾರಣ ವ್ಯಾಪಾರಸ್ಥರು, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕರು, ರೋಗಿಗಳು, ಮಹಿಳೆಯರು, ವೃದ್ಧರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಕೆಲವರು ಅನಿವಾರ್ಯವಾಗಿ ಖಾಲಿ ಹಾಗೂ ಪಾಳುಬಿದ್ದ ಸ್ಥಳಗಳಲ್ಲಿ ಜಲಬಾಧೆ ತೀರಿಸಿಕೊಳ್ಳುತ್ತಿದ್ದಾರೆ. ಆದರೆ, ಮಹಿಳೆಯರಿಗೆ ಮುಜುಗರದ ಸಂಗತಿಯಾಗಿದ್ದು, ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ನಗರದೊಳಗೆ ಕಾಲಿಡುವ ಮೊದಲೇ ಜಲಬಾಧೆ ತೀರಿಸಿಕೊಳ್ಳಬೇಕು ಎನ್ನುವ ಅನಿವಾರ್ಯತೆ ಸೃಷ್ಟಿಯಾಗಿದೆ.

ನಗರದ ಮಹತ್ಮಾ ಗಾಂಧಿ ವೃತ್ತ, ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತ, ಮುಳಗುಂದ ನಾಕಾ, ಹಾಲತಗೇರಿ ನಾಕಾ, ಗ್ರೇನ್‌ ಮಾರುಕಟ್ಟೆ, ಸರಾಫ್‌ ಬಜಾರ್‌ ಪ್ರದೇಶಗಳಲ್ಲಿ ದಿನನಿತ್ಯ ಸಾವಿರಾರು ಜನರು ಸಂಚರಿಸುವ ಸ್ಥಳವಾಗಿದ್ದರಿಂದ ಮೂತ್ರಾಲಯ ಹಾಗೂ ಶೌಚಾಲಯದ ಅಗತ್ಯತೆ ಹೆಚ್ಚಿದೆ.

ಜನಸಾಮಾನ್ಯರಿಂದ ಛೀಮಾರಿ: ಸರ್ಕಾರ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮದಂತಹ ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಆದರೆ, ನಗರ ಪ್ರದೇಶಗಳಲ್ಲಿಯೇ ಮೂತ್ರ ವಿಸರ್ಜನೆಗೆ ತೊಂದರೆ ಉಂಟಾದರೆ ಸರ್ಕಾರ, ಜಿಲ್ಲಾಡಳಿತ ಹಾಗೂ ನಗರಾಡಳಿತಗಳು ಕಣ್ಣುಮುಚ್ಚಿ ಕುಳಿತಿವೆ ಎಂದು ಜನಸಾಮಾನ್ಯರು ಛೀಮಾರಿ ಹಾಕುತ್ತಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೂತ್ರಾಲಯಗಳ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈಗಾಗಲೇ ಮುನ್ಸಿಪಲ್‌ ಮೈದಾನದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಾಣವಾಗಲಿದೆ. ಗ್ರೇನ್‌ ಮಾರುಕಟ್ಟೆಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಾಣಕ್ಕೆ ಟೆಂಡರ್‌ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಳ ಪರಿಶೀಲಿಸಿ ಶೌಚಾಲಯ ನಿರ್ಮಾಣಕ್ಕೆ ಪೂರಕ ಯೋಜನೆ ರೂಪಿಸಲಾಗುವುದು.
ಉಷಾ ದಾಸರ, ಅಧ್ಯಕ್ಷೆ, ಗದಗ-ಬೆಟಗೇರಿ ನಗರಸಭೆ

ಪುರುಷರು ಒಂದಿಲ್ಲೊಂದು ಸ್ಥಳ ಹುಡುಕಿಕೊಂಡು ಜಲಬಾಧೆ ತೀರಿಸಿಕೊಳ್ಳುತ್ತಾರೆ. ಆದರೆ, ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ. ಕಳೆದ ದಶಕಗಳಿಂದ ಅವಳಿ ನಗರದಲ್ಲಿ ಮೂತ್ರಾಲಯ ಹಾಗೂ ಶೌಚಾಲಯಗಳ ಸಮಸ್ಯೆ ಬಗೆಹರಿದಿಲ್ಲ.
ರಾಹುಲ್‌ ಮೆಣಸಿನಕಾಯಿ,
ಗದಗ ನಿವಾಸಿ

*ಅರುಣಕುಮಾರ ಹಿರೇಮಮಠ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.