ಬೆಳೆ ಸ್ಥಿತಿ ಅರಿಯಲು ಆ್ಯಪ್‌ ಬಳಕೆ

•ಸುಳ್ಳು ಮಾಹಿತಿ ನೀಡಿ ಬೆಳೆ ವಿಮೆ ಪಡೆಯುವುದಕ್ಕೆ ಕಡಿವಾಣ ಹಾಕಿದ ಸರ್ಕಾರ

Team Udayavani, Aug 6, 2019, 12:46 PM IST

gadaga-tdy-1

ನರೇಗಲ್ಲ: ಮೊಬೈಲ್ ಆ್ಯಪ್‌ಯೊಂದರ ಮೂಲಕ ಬೆಳೆ ಸಮೀಕ್ಷೆಗೆ ಸರ್ಕಾರ ಮುಂದಾಗಿದ್ದು, ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಭರದಿಂದ ನಡೆದಿದೆ. ಸುಳ್ಳು ಮಾಹಿತಿ ನೀಡಿ ಬೆಳೆ ವಿಮೆ ಪಡೆಯಲು ಮುಂದಾಗುವ ಹಾಗೂ ಕೊಡಿಸುವವರಿಗೆ ಕಡಿವಾಣ ಹಾಕಿದಂತಾಗಿದೆ.

ರೈತರಿಗೆ ಅನ್ಯಾಯ ಆಗಬಾರದೆಂದು ಸರ್ಕಾರ ಮೊಬೈಲ್ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಮಾಡುತ್ತಿರುವುದರಿಂದ ಫಲಾನುಭವಿಗೆ ಮೋಸವಾಗಲು ಸಾಧ್ಯವಿಲ್ಲ. ಇದಕ್ಕೆ ಕಡಿವಾಣ ಹಾಕಲೆಂದೇ ಮೊಬೈಲ್ ಆ್ಯಪ್‌ಯೊಂದರ ಮೂಲಕ ಬೆಳೆ ಸಮೀಕ್ಷೆಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸ ಮಾದರಿ ಮೊಬೈಲ್ ಆ್ಯಪ್‌ ಒಂದನ್ನು ಸೃಷ್ಟಿಸಿ ಕಳೆದ ಎರಡು ವರ್ಷಗಳ ಹಿಂದಿಯೇ ಸಮೀಕ್ಷೆಗೆ ಮುಂದಾಗಿತ್ತು. ಒಂದಿಷ್ಟು ಅವಸರದಲ್ಲಿ ವಿವಿಧ ತೊಂದರೆಗಳ ನಡುವೆಯೂ ಗ್ರಾಮಗಳ ಜಮೀನುಗಳಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮೊಬೈಲ್ ಆ್ಯಪ್‌ ಮೂಲಕ ಬೆಳೆ ಹಾಗೂ ರೈತನ ಆಧಾರ್‌ ಕಾರ್ಡ್‌ ಸಂಖ್ಯೆ, ಹೆಸರು, ಪಹಣೆಯಲ್ಲಿರುವ ಸರ್ವೇ ನಂಬರ್‌ ಸೇರಿದಂತೆ ಬೆಳೆಗಳ ಮಾಹಿತಿ ದಾಖಲಿಸಿತ್ತು.

ಅಗತ್ಯ ಮಾಹಿತಿಗಳನ್ನು ಈ ಆ್ಯಪ್‌ ಮೂಲಕ ದಾಖಲಿಸುವ ಕೆಲಸ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಎಂಟು ದಿನಗಳಿಂದ ಭರದಿಂದ ನಡೆದಿದೆ. ಕಂದಾಯ, ಕೃಷಿ ಹಾಗೂ ಪಂಚಾಯತ್‌ ರಾಜ್ಯ ಇಲಾಖೆಯ ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಹೇಗೆ ನಡೆಯುತ್ತದೆ: ಸರ್ಕಾರ ನೀಡಿರುವ, ಇಲ್ಲವೆ ತಮ್ಮ ಮೊಬೈಲಿಗೆ ಹಾಕಿಸಿಕೊಂಡಿರುವ ಆ್ಯಪ್‌ನ ಅಣತಿಯಂತೆ ರೈತನ ಜಮೀನಿನ ಸರ್ವೇ ನಂ, ಅಲ್ಲಿರುವ ಬೆಳೆ, ನೀರಾವರಿ ಇದೆಯೋ ಇಲ್ಲವೋ ಎಂಬೆಲ್ಲ ಮಾಹಿತಿ ಮತ್ತು ಬೆಳೆ ಹಾಗೂ ರೈತರ ಚಿತ್ರ ತೆಗೆದು ಅದನ್ನೆಲ್ಲ ಆಧಾರ್‌ ಸಂಖ್ಯೆಯೊಂದಿಗೆ ದಾಖಲಿಸಿಕೊಳ್ಳುತ್ತಾರೆ. ಆ್ಯಪ್‌ನಲ್ಲಿ ಬಳಸಿಕೊಳ್ಳುತ್ತಿರುವ ಆಧುನಿಕ ತಂತ್ರಜ್ಞಾನ ತಪ್ಪು ಮಾಹಿತಿಗೆ ಅವಕಾಶ ನೀಡುವುದಿಲ್ಲ ಎಂಬುದು ಗಮನಾರ್ಹ ವಿಷಯ.

ಬಿಡುವುಲ್ಲದ ಕೆಲಸ: ಬೆಳೆವಿಮೆ ಸಮೀಕ್ಷೆಗೆ ಅಳವಡಿಸಿಕೊಳ್ಳುತ್ತಿರುವ ಹೊಸ ವಿಧಾನದಿಂದಾಗಿ ಕಂದಾಯ ಇಲಾಖೆಯ ಸಿಬ್ಬಂದಿ ಬೆಳಗ್ಗೆಯಿಂದ ಸಂಜೆಯವರೆಗೂ ತಮ್ಮ ವ್ಯಾಪ್ತಿಯ ಭೂಮಿಗಳಿಗೆ ಧಾವಿಸಿ ಮಾಹಿತಿ ದಾಖಲಿಸಬೇಕಾಗಿದೆ. ಇದರಿಂದ ತಮ್ಮ ನಿತ್ಯ ಕೆಲಸಗಳ ನಡುವೆಯೂ ಕಂದಾಯ, ಕೃಷಿ ಹಾಗೂ ಪಂಚಾಯತ್‌ ರಾಜ್ಯ ಇಲಾಖೆ ಸಿಬ್ಬಂದಿ ಹಾಗೂ ಇಲಾಖೆಗಳ ಮೇಲಧಿಕಾರಿಗಳು ಬೆಳೆ ಸಮೀಕ್ಷೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ರೈತರು ಇವರಿಗೆ ಸಾಥ್‌ ನೀಡುತ್ತಿದ್ದಾರೆ.

ಮೊಬೈಲ್ನಲ್ಲಿ ನೀಡಿರುವ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆಯಿಂದ ರೈತರಿಗೆ ಬಹಳ ರೀತಿಯಲ್ಲಿ ಅನುಕೂಲವಾಗಲಿದೆ. ಸರ್ಕಾರಕ್ಕೂ ವಾಸ್ತವ ಸ್ಥಿತಿ ತಿಳಿಯಲು ಯೋಜನೆ ರೂಪಿಸಲು, ಬೆಳೆ ವಿಮೆ ನೀಡಲು ಸಹಕಾರಿಯಾಗಲಿದೆ. ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಈ ಕೆಲಸ ಭರದಿಂದ ಸಾಗಿದೆ. ಇಲಾಖೆ ಸಿಬ್ಬಂದಿ ಪ್ರಾಮಾಣಿಕವಾಗಿ ಇದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಉಪತಹಶೀಲ್ದಾರ ವೀರಣ್ಣ ಅಡಗತ್ತಿ ತಿಳಿಸಿದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.