ಪಶು ಇಲಾಖೆಯಲ್ಲಿ ಖಾಲಿ ಕುರ್ಚಿ ಸ್ವಾಗತ!

ಪಶು ವೈದ್ಯರು-ಸಿಬ್ಬಂದಿ ಹುದ್ದೆ ಖಾಲಿ ,ಹೈನುಗಾರಿಕೆ ನಂಬಿದವರ ಗತಿ ದೇವರಿಗೇ ಪ್ರೀತಿ

Team Udayavani, Nov 20, 2020, 8:05 PM IST

gadaga-tdy-1

ಸಾಮದರ್ಭಿಕ ಚಿತ್ರ

ಗದಗ: ಪಶು ಇಲಾಖೆಯಲ್ಲಿ ವೈದ್ಯರು ಹಾಗೂ ಇತರೆ ಸಿಬ್ಬಂದಿ ಕೊರತೆಯಿಂದ ಖಾಲಿ ಕುರ್ಚಿಗಳದ್ದೇ ಕಾರುಬಾರು ಎನ್ನುವಂತಾಗಿದೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಡಿ ಜಿಲ್ಲೆಯಲ್ಲಿ 1 ಪಾಲಿಕ್ಲಿನಿಕ್‌, 4 ತಾಲೂಕು ಪಶು ಆಸ್ಪತ್ರೆ, ಹೋಬಳಿ, ಗ್ರಾ.ಪಂ. ಮಟ್ಟದಲ್ಲಿ 62 ಪಶು ಚಿಕಿತ್ಸಾಲಯಗಳು, 8 ಪ್ರಾಥಮಿಕ ಪಶುಚಿಕಿತ್ಸಾ ಕೇಂದ್ರ ಮತ್ತು 5 ಸಂಚಾರಿ ಪಶು ಚಿಕಿತ್ಸಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಗೆ ಮಂಜೂರಾದ ಒಟ್ಟು 382 ಹುದ್ದೆಗಳಲ್ಲಿ 134 ಸ್ಥಾನಗಳು ಭರ್ತಿಯಾಗಿದ್ದು, 250 ಹುದ್ದೆಗಳು ಖಾಲಿ ಉಳಿದಿವೆ.

ವರ್ಷದಲ್ಲಿ ನಾಲ್ಕು ಬಾರಿ ಲಸಿಕೆ ಅಭಿಯಾನ, ಸಭೆಗಳಿಗೆ ಹಾಜರಾಗುವುದು, ಆಕಸ್ಮಿಕವಾಗಿ ಕುರಿ, ಮೇಕೆ, ಜಾನುವಾರು ಮೃತಪಟ್ಟರೆ ಮಹಜರ್‌ ನಡೆಸಿ ವರದಿ ನೀಡುವುದು ಸೇರಿದಂತೆ ವಿಮೆ ದೃಢೀಕರಣ ಕೆಲಸವನ್ನು ವೈದ್ಯರೇ ಮಾಡಬೇಕಿದೆ. ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ಲಸಿಕಾ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹುದ್ದೆಗಳು ಖಾಲಿ ಇರುವುದರಿಂದ ಕಾಲು ಬಾಯಿ ಜ್ವರ ಹಾಗೂ ಇತರೆ ಕಾಯಿಲೆಗಳ ನಿಯಂತ್ರಣ ಸವಾಲಿನ ಕೆಲಸವಾಗಿದೆ. ಜಿಲ್ಲೆಯಲ್ಲಿ ಲಭ್ಯವಿರುವ ಪಶು ವೈದ್ಯರು, ಸಿಬ್ಬಂದಿಗೆ ಎರಡ್ಮೂರು ಪಶು ಆಸ್ಪತ್ರೆಗಳ ಪ್ರಭಾರ ವಹಿಸಲಾಗಿದೆ. ವಾರದಲ್ಲಿ ಎರಡು, ಮೂರು ದಿನಕ್ಕೊಮ್ಮೆ ಆಸ್ಪತ್ರೆಗೆ ಹಾಜರಾಗುತ್ತಿದ್ದಾರೆ. ಇದು ರೈತಾಪಿ ಜನರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಪಶು ಆಸ್ಪತ್ರೆಗೆ ಅಟೆಂಡರ್‌ಗಳೇ ಆಸರೆ: ಇಲಾಖೆಯಲ್ಲಿವೈದ್ಯರು, ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಇಲಾಖೆಯಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು 60 ಜನ ಅಟೆಂಡರ್‌ಗಳನ್ನು ನೇಮಿಸಿಕೊಂಡಿದೆ. ಅವರಿಂದ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ, ಲಸಿಕೆ, ವಿವಿಧ ಚುಚ್ಚುಮದ್ದುಅಭಿಯಾನಗಳ ನಿರ್ವಹಿಸಲಾಗುತ್ತಿದ್ದು, ರೈತರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ಪಶು ವೈದ್ಯರು ಮಾಡಬೇಕಾದ ಕೆಲಸಗಳನ್ನು ಇತರರಿಂದ ನಿರ್ವಹಿಸುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಇಲಾಖೆಗೆ ಪೂರ್ಣಾವ ಧಿ ವೈದ್ಯರು, ಸಿಬ್ಬಂದಿಯನ್ನು ಒದಗಿಸಬೇಕೆಂಬುದು ರೈತರ ಒತ್ತಾಯ.

ಇತರೆ ಇಲಾಖೆಗಳಿಗೆ ಪ್ರಭಾರ ಸೇವೆ : ಜಿಲ್ಲೆಯ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ನೂರಾರು ಹುದ್ದೆಗಳು ಖಾಲಿ ಇದ್ದರೂ ಕೆಲವರು ಇತರೆ ಇಲಾಖೆಗಳಿಗೆ ಪ್ರಭಾರ ಸೇವೆ ಸಲ್ಲಿಸುತ್ತಿದ್ದಾರೆ. ಗದಗ ತಾಲೂಕಿನ ಹೊಂಬಳ ಪಶು ಆಸ್ಪತ್ರೆ ವೈದ್ಯರಾದ ಡಾ| ಜಿನಗಿ, ಶಿರಹಟ್ಟಿಯ ಹೊಳೆ ಇಟಗಿಯ ಪಶು ವೈದ್ಯಾಧಿಕಾರಿ ಡಾ| ಎಂ.ಬಿ. ಓಲೇಕಾರ ಅವರು ಪಶು ವೈದ್ಯಕೀಯ ಇಲಾಖೆಯ ಶಿರಹಟ್ಟಿ ಸಹಾಯಕ ನಿರ್ದೇಶಕರ(ಪ್ರಭಾರಿ) ಹುದ್ದೆಯೊಂದಿಗೆ ಶಿರಹಟ್ಟಿ ತಾಪಂ ಇಒ ಆಗಿದ್ದಾರೆ. ಶಿರಹಟ್ಟಿ ಜಾನುವಾರು ಅಧಿ ಕಾರಿ ಆರ್‌.ವೈ.ಗುರಿಕಾರ ಲಕ್ಷ್ಮೇಶ್ವರ ತಾಪಂ ಇಒ(ಪ್ರಭಾರಿ) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲೇ ಖಾಲಿ ಹುದ್ದೆಗಳಿಂದ ಬಳಲುತ್ತಿರುವ ಪಶು ಇಲಾಖೆ ಅಧಿಕಾರಿಗಳು ಇತರೆ ಇಲಾಖೆಗಳಿಗೆ ತೆರಳಿರುವುದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎನ್ನಲಾಗಿದೆ.

ಎಷ್ಟೇ ಹುದ್ದೆಗಳು ಖಾಲಿ ಇದ್ದರೂ ನಿರೀಕ್ಷೆಗೂ ಮೀರಿ ಸೇವೆ ಒದಗಿಸುತ್ತಿದ್ದೇವೆ. ಇತ್ತೀಚೆಗೆ ಚರ್ಮಗಂಟು ರೋಗ ಉಲ್ಬಣದಿಂದ ಇತರೆ ಜಿಲ್ಲೆಗಳಲ್ಲಿ ಸಮಸ್ಯೆಯಾದರೂ, ನಮ್ಮಲ್ಲಿ ಒಂದೇ ಒಂದು ಜಾನುವಾರು ಸಾವಿಗೀಡಾಗದಂತೆ ಕ್ರಮ ವಹಿಸಿದ್ದೇವೆ. ಈಗಾಗಲೇ ಖಾಲಿ ಹುದ್ದೆಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.  –ಡಾ|ಜಿ.ಪಿ.ಮನಗೂಳಿ, ಉಪ ನಿರ್ದೇಶಕ, ಪಶು ವೈದ್ಯಕೀಯ ಇಲಾಖೆ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.