ತರಕಾರಿ ಬೆಲೆ ಗಗನಕ್ಕೆ
Team Udayavani, May 14, 2019, 1:14 PM IST
ಶಿರಹಟ್ಟಿ: ತಾಲೂಕಿನಲ್ಲಿ ಬರಗಾಲ ಮುಂದುವರೆದಿದ್ದು, ಬಿರು ಬೇಸಿಗೆಯಿಂದ ತಾಪಮಾನ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ತರಕಾರಿ ಬೆಲೆಯೂ ಏರಿಕೆಯಾಗುತ್ತಿವೆ. ಗ್ರಾಹಕರಿಗೆ ಇದರ ಬಿಸಿ ತಟ್ಟಿದೆ.
ತಾಲೂಕು ಬಹುತೇಕ ಕೃಷಿ ಚಟುವಟಿಕೆಯಿಂದ ಕೂಡಿದ್ದು, ಅದರಲ್ಲೂ ಹೆಚ್ಚು ಮಳೆಯಾಶ್ರಿತವಾಗಿದೆ. ಆದರೆ ಸರಕಾರದ ಯೋಜನೆಗಳಾದ ಕೆರೆಗಳಿಗೆ ನದಿ ನೀರು ತುಂಬಿಸುವುದು ಹಾಗೂ ಏತ ನೀರಾವರಿ ಯೋಜನೆ ಅಲ್ಲದೆ ಅನೇಕ ರೈತರು ಕೊಳವೆ ಬಾವಿಗಳ ಮೂಲಕ ನೀರು ಪಡೆದು ತೋಟಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಅತಿ ಹೆಚ್ಚು ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ತಾಲೂಕು ಎಂಬ ಹೆಗ್ಗಳಿಕೆ ಪಡೆದಿರುವ ಹಳೆಯ ಶಿರಹಟ್ಟಿಯಲ್ಲಿ ಒಟ್ಟು 6850 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಇನ್ನೂ ಇದರಲ್ಲಿ ಕೇವಲ 78 ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ತರಕಾರಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಟೊಮೆಟೊ, ಬದನೆಕಾಯಿ, ಹಸಿ ಮೆಣಸಿನಕಾಯಿ, ಈರುಳ್ಳಿ ಮುಂತಾದವುಗಳು ಪ್ರಮುಖ ಬೆಳೆಗಳಾಗಿವೆ.
ಬೆಳೆಗೆ ನೀರಿನ ಸಮಸ್ಯೆ: ಸತತ ಬರಗಾಲ ಹಾಗೂ ವರುಣನ ಅವಕೃಪೆಯಿಂದ ಕೆರೆಗೆ ನೀರು ತುಂಬಿಸಬೇಕಾದ ನದಿಗಳಲ್ಲಿಯೇ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಬಾರಿ ಬೇಸಿಗೆಯಲ್ಲಿ ಜನರು ಗರಿಷ್ಠ 41 ಸೆಲ್ಸಿಯಸ್ನಷ್ಟು ಉಷ್ಣಾಂಶ ಕಂಡಿದ್ದಾರೆ. ಈ ಹೆಚ್ಚಿದ ಉಷ್ಣಾಂಶ ರೈತರಿಗೆ ಆಸರೆಯಾಗಿದ್ದ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿಯಲು ಕಾರಣವಾಗಿದೆ. ನಿತ್ಯ ನೀರು ಹಾಯಿಸಬೇಕಾದ ತರಕಾರಿ ಬೆಳೆಗಳಿಗೆ ನೀರಿನ ಸಮಸ್ಯೆ ಎದುರಾಗಿರುವುದರಿಂದ ಬೆಳೆಗಳು ಬಾಡುತ್ತಿವೆ.
ಇದರ ಪರಿಣಾಮ ಸ್ಥಳೀಯವಾಗಿ ಲಭಿಸುವ ತರಕಾರಿಗಳ ಆವಕ ಕಡಿಮೆಯಾಗುತ್ತಿದೆ ಎನ್ನುತ್ತಾರೆ ವರ್ತಕರು. ಇದರಿಂದ ಸಹಜವಾಗಿ ಬೇರೆಡೆಯಿಂದ ಆಮುದು ಮಾಡಿಕೊಳ್ಳಲಾಗುತ್ತಿದೆ. ಸಾರಿಗೆ ವೆಚ್ಚ, ಹಮಾಲಿ ವೆಚ್ಚಗಳಿಂದಾಗಿ ಕೆಲವಾರು ತರಕಾರಿಗಳ ಬೆಲೆಗಳು ಹೆಚ್ಚಾಗಿವೆ ಎಂಬುವುದು ವರ್ತಕರ ಮಾತು.
ಮಳೆಯಿಲ್ಲದ ಕಾರಣ ಕಳೆದ ಬಾರಿಗೆ ಹೋಲಿಸಿದರೆ ಕೊಂಚ ಬೆಲೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಿಂದ ಕಾಯಿ ಪಲ್ಲೆಗಳನ್ನು ತರಲಾಗುತ್ತಿದೆ. ಸ್ಥಳೀಯವಾಗಿ ಬೆಳೆ ಕಡಿಮೆಯಾಗಿದ್ದು, ಬೇರೆಡೆಯಿಂದ ತರಿಸಲಾಗುತ್ತಿರುವ ಕಾರಣ ಇದು ನೇರವಾಗಿ ಗ್ರಾಹಕರಿಗೆ ಬಿಸಿ ತಟ್ಟುತ್ತಿದೆ.
ಪ್ರಕಾಶ ಶಿ. ಮೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ