ಧರ್ಮ-ಸಂಸ್ಕೃತಿ ರಕ್ಷಣೆಗೆ ವಿಎಚ್ಪಿ ಬದ್ಧ
ಗೋಹತ್ಯೆ ನಿಲ್ಲಬೇಕು. ಗೋವು ಸಾಕುವ ಮೂಲಕ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.
Team Udayavani, Dec 17, 2021, 6:09 PM IST
ನರಗುಂದ: ಸಂಘಟನೆಯಲ್ಲಿ ಶಕ್ತಿಯಿದೆ. ಋಷಿ ಮುನಿಗಳು ಸಂಚರಿಸಿದ ಈ ನಾಡು, ದೇಶ ಮತ್ತು ದೇಶದ ಜನರ ಧರ್ಮ, ಸಂಸ್ಕೃತಿ ರಕ್ಷಣೆಗೆ ವಿಶ್ವ ಹಿಂದೂ
ಪರಿಷತ್ ಮತ್ತು ಭಜರಂಗದಳ ಶ್ರಮಿಸುತ್ತಿವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಘಟನಾ ಮಂತ್ರಿ ಮನೋಹರ ಮಠದ ಹೇಳಿದರು.
ಪಟ್ಟಣದ ಗಾಂಧಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಆಶ್ರಯದಲ್ಲಿ ಶೌರ್ಯ ಸಂಚಲನ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ಮತ್ತು ಅನ್ನದಾತರ ಹೋರಾಟಕ್ಕೆ ಪ್ರೇರಣೆ ನೀಡಿದ ಈ ಬಂಡಾಯ ಭೂಮಿಯಲ್ಲಿ ಗೀತಾ ಜಯಂತಿ ದಿನದಂದು ಶೌರ್ಯ ಯಾತ್ರೆ ಹಮ್ಮಿಕೊಂಡಿದ್ದು ಸಂತಸದ ವಿಷಯ. ದೇಶವನ್ನು ಒಡೆಯುವ, ಸಮಾಜವನ್ನು ಒಡೆಯುವ ಕೆಟ್ಟ ಶಕ್ತಿಯನ್ನು ಮಟ್ಟ ಹಾಕಲು ಈ ಸಂಘಟನೆ ಹುಟ್ಟಿಕೊಂಡಿದೆ. ಜಾತಿ, ಬೇಧ ಮಾಡದೆ ಹಿಂದೂ ಧರ್ಮ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಶ್ರಮಿಸುತ್ತಿದೆ ಎಂದರು.
ಸಾನಿಧ್ಯ ವಹಿಸಿದ್ದ ಪಂಚಗ್ರಹ ಗುಡ್ಡದ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು ಮಾತನಾಡಿ, ಒಂದು ಕಾಲದಲ್ಲಿ ಗೋವುಗಳನ್ನು ಸಾಕಿದವರು ಶ್ರೀಮಂತರು ಎಂದು ಗುರುತಿಸಲಾಗುತ್ತಿತ್ತು. ಆದರೆ ಈಗ ಗೋವು ಮಾಯವಾಗಿವೆ. ಗೋಹತ್ಯೆ ನಿಲ್ಲಬೇಕು. ಗೋವು ಸಾಕುವ ಮೂಲಕ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.
ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಸಮಾಜ, ಮನಸ್ಸು ಒಡೆಯುವುದನ್ನು ತಡೆಯಲು ಮತ್ತು ಜಾಗೃತಿ ಮೂಡಿಸುವ ಕೆಲಸವಾಗಬೇಕು. ದುಶ್ಚಟಗಳನ್ನು ತ್ಯಜಿಸಿ, ಉತ್ತಮ ಸಮಾಜ ನಿರ್ಮಿಸಲು ಮುಂದಾದರೆ ಅದು ಸಾರ್ಥಕವಾಗುತ್ತದೆ. ಯುವಕರಿಂದ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು. ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮಾತನಾಡಿ, ದುರ್ಗಣ, ವ್ಯಸನಗಳನ್ನು ತ್ಯಜಿಸಿ ಧರ್ಮದ ದಿಕ್ಸೂಚಿಯಲ್ಲಿ ನಡೆಯಬೇಕು. ಹನುಮಮಾಲೆ ಧರಿಸುವುದು ಸೇವೆ, ಶ್ರದ್ಧೆಯ ಪ್ರತೀಕವಾಗಿದೆ. ಆಚಾರ ವಿಚಾರ ಪಾಲಕರಾಗಿ ಎಂದರು. ಭಜರಂಗದಳದ ಬಸವರಾಜ ಗಡೇಕಾರ ಇದ್ದರು. ಶ್ರೀನಿವಾಸ ಗುಜಮಾಗಡಿ ಸ್ವಾಗತಿಸಿದರು. ಶಿವರಡ್ಡಿ ಪೆಟ್ಲೂರ ನಿರೂಪಿಸಿ, ವಿಕ್ರಮ್ ಬೆಳದಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ