ಹುಲಕೋಟಿ ಕೃಷಿ ಮೇಳದಲ್ಲಿ ಹಳ್ಳಿ ಚಿತ್ರಣ


Team Udayavani, Jan 29, 2020, 1:22 PM IST

gadaga-tdy-1

ಗದಗ: ಹುಲಕೋಟಿಯ ಕೈಲಾಸ ಆಶ್ರಮದ 28ನೇ ವಾರ್ಷಿಕೋತ್ಸವ ಅಂಗವಾಗಿ ಐಸಿಎಆರ್‌- ಕೆ.ಎಚ್‌.ಪಾಟೀಲ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆಯ ಆತ್ಮಾ ಯೋಜನೆಯಡಿ ಆಶ್ರಮದ ಆವರಣದಲ್ಲಿ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನ ರೈತರು ಹಾಗೂ ಸಾರ್ವಜನಿಕರ ಮನ ಸೆಳೆಯಿತು.

ಕೃಷಿ ಮೇಳದಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಮುಖ ಆಕರ್ಷಣೀಯವಾಗಿತ್ತು. ಸುಮಾರು 10×15 ಅಡಿ ವಿಸ್ತೀರ್ಣದ ಮಾದರಿ ಇಡೀ ಹಳ್ಳಿಯ ಸಮಗ್ರ ಚಿತ್ರಣವನ್ನೇ ಕಟ್ಟಿಕೊಟ್ಟಿತು. ಮಳೆ ನೀರು ನೇರವಾಗಿ ಹರಿದು ಹೋಗದಂತೆ ತಡೆಯಲು ಅಲ್ಲಲ್ಲಿ ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಗಿತ್ತು. ಜೊತೆಗೆ ಬೋರ್‌ ವೆಲ್‌ ಹಾಗೂ ಬಾವಿಗಳಿಗೆ ಜಲ ಮರು ಪೂರಣ, ಕೃಷಿ ಕ್ಷೇತ್ರದ ವಿಸ್ತರಣೆ, ಹನಿ ನೀರಾವರಿ ಪದ್ಧತಿಯಲ್ಲಿ ಕೃಷಿ ಮಾಡುವ ವಿಧಾನ, ಹೈನುಗಾರಿಕೆ, ಮೀನುಗಾರಿಕೆ, ಜನವಸತಿಗಳು, ಜಾನುವಾರುಗಳಿಗೆ ಕುಡಿಯುವ ನೀರು ಲಭ್ಯಗೊಳಿಸುವ ವಿಧಾನ ಮನ ಸೆಳೆಯಿತು. ಅದರೊಂದಿಗೆ ಮೇರವಾಡೆ ಅಗ್ರಿ ಟೆಕ್‌ ಅವರ ಕೃಷಿ ಕ್ರಾಂತಿ ಮಷಿನ್‌ ರೈತರಲ್ಲಿ ಬೆರಗು ಮೂಡಿಸಿತು. ಸುಮಾರು ಐದು ಅಡಿ ಎತ್ತರದ ಈ ಯಂತ್ರವನ್ನು ಎಡಿ ಹೊಡೆಯಲು ಮತ್ತು ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಬಳಸಿಕೊಳ್ಳಬಹುದಾಗಿದೆ. ತ್ರಿಚಕ್ರಗಳನ್ನು ಹೊಂದಿರುವ ಈ ಯಂತ್ರ ಸುಮಾರು ಮೂರ್‍ನಾಲ್ಕು ಅಡಿಯಷ್ಟು ಎತ್ತರವಿರುವ ಬೆಳೆ ಮಧ್ಯೆಯೂ ಎಡೆ ಹೊಡೆಯುಬಹುದಾಗಿದೆ.

ಜೊತೆಗೆ ಕೃಷಿ ಯಂತ್ರೋಪಕರಣಗಳಾದ ಮಿನಿ ಟ್ರ್ಯಾಕ್ಟರ್‌, ರೋಟೋ ವೀಡರ್‌, ಬ್ರಷ್‌ ಕಟ್ಟರ್‌, ಕಳೆ ತೆಗೆಯುವ ಸಾಧನ, ಹಾಲು ಕರೆಯುವ ಯಂತ್ರ, ಕಾಳು ಸ್ವತ್ಛ ಮಾಡುವ ಯಂತ್ರ ಹಾಗೂ ರೈತರನ್ನು ಕೈ ಬೀಸಿ ಕರೆಯುತ್ತಿದ್ದವು. ಮಣ್ಣಿನ ಫಲವತ್ತತೆ ಹಾಗೂ ಸಾವಯವ ಕೃಷಿ ತಾಂತ್ರಿಕತೆಗಳು, ಪಶು ಸಂಗೋಪನೆ ತಂತ್ರಜ್ಞಾನಗಳು, ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧನೆ ಮಳಿಗೆಗಳು ನೋಡುಗರಿಂದ ತುಂಬಿದ್ದವು. ಆಯಾ ಮಳಿಗೆಗಳಲ್ಲಿ ಪರ್ಯಾಯ ಭೂ ಬಳಕೆ ಪದ್ಧತಿಗಳು, ಒಣ ಬೇಸಾಯದಲ್ಲಿ ತೋಟಗಾರಿಕೆ, ತರಕಾರಿ ಹಾಗೂ ಹೂವಿನ ಬೇಸಾಯ, ಸಾವಯವ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಿರಿಧಾನ್ಯಗಳ ಮಹತ್ವ ಹಾಗೂ ಆಹಾರದಲ್ಲಿ ಅವುಗಳ ಉಪಯೋಗ, ಹೈನುಗಾರಿಕೆ ತಂತ್ರಜ್ಞಾನಗಳು, ಶ್ರಮ ಕಡಿಮೆ ಮಾಡುವ ಸಾಧನಗಳು ಮುಂತಾದ ವಿಷಯಗಳ ಕುರಿತ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.

ಕೈಲಾಸ ಆಶ್ರಮದಲ್ಲಿ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನವನ್ನು ಶಾಸಕ ಎಚ್‌.ಕೆ.ಪಾಟೀಲ ಉದ್ಘಾಟಿಸಿದರು. ಜಯೇಂದ್ರಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜ| ತೋಟಂದ ಸಿದ್ದರಾಮ ಸ್ವಾಮೀಜಿ, ಜ| ಅಭಿನವ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ಜ| ಫಕೀರ ಸಿದ್ಧರಾಮ ಸ್ವಾಮೀಜಿ, ಜ| ಅಭಿನವ ಬೂದೀಶ್ವರ ಸ್ವಾಮೀಜಿ ಇದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.