ಜನರ ಸಮಸ್ಯೆ ನಿವಾರಣೆಗೆ ಗ್ರಾಮ ವಾಸ್ತವ್ಯ
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಾ|ಆಶಪ್ಪ ಪೂಜಾರ ಸ್ಪಷ್ಟನೆ
Team Udayavani, Apr 18, 2022, 4:16 PM IST
ಮುಂಡರಗಿ: ಗ್ರಾಮೀಣ ಜನರ ಕುಂದುಕೊರತೆಗಳ ನಿವಾರಣೆಗಾಗಿ ಸರ್ಕಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜಾರಿಗೆ ತಂದಿದೆ. ಆಯಾ ಗ್ರಾಮಗಳ ಸಾರ್ವಜನಿಕರ ಸಮಸ್ಯೆಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲಾಗುವುದು ಎಂದು ತಹಶೀಲ್ದಾರ್ ಡಾ|ಆಶಪ್ಪ ಪೂಜಾರ ಹೇಳಿದರು.
ತಾಲೂಕಿನ ಆಶಾಕಿರಣ(ಕಕ್ಕೂರು ತಾಂಡಾ) ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ನಡೆದ ಎಲ್ಲಾ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಹಾಗೆಯೇ ಆಯಾ ಗ್ರಾಮದ ಸಾರ್ವಜನಿಕರು, ತಮ್ಮ ಸಣ್ಣ ಪುಟ್ಟ ಸಮಸ್ಸೆಗಳ ಕುರಿತು ನೀಡಿದ್ದ ಅರ್ಜಿಗಳಿಗೆ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದರು.
ತಹಶೀಲ್ದಾರ್ ಪೂಜಾರ ಅವರು ಗ್ರಾಮದಲ್ಲಿ ಸಸಿ ನಡುವ ಕಾರ್ಯಕ್ರಮ, ಅಂಗನವಾಡಿ ಕೇಂದ್ರ ಹಾಗೂ ಶಾಲೆಯನ್ನು ವೀಕ್ಷಣೆ ಮಾಡಿದರು. ನಂತರ ಗ್ರಾಮದ ಶುದ್ಧ ನೀರಿನ ಘಟಕ, ಪಶು ಆಸ್ಪತ್ರೆ, ಹಾಲಿನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ಕೆಲವು ರೈತರ ಆಸ್ತಿ ಪೋಡಿ ಸಮಸ್ಯೆ, ಅಂಗವಿಕಲ, ವಿಧವಾ, ವೃದ್ಧಾಪ್ಯ ಸಮಸ್ಯೆಗಳಿವೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸಬೇಕೆಂದು ಮನವಿ ಮಾಡಿಕೊಂಡರು. ತಹಶೀಲ್ದಾರ್ರು ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಸರೂರು ಗ್ರಾಪಂ ಅಧ್ಯಕ್ಷೆ ಲಕ್ಷ್ಮಿಬಾಯಿ ಗುಡಿಮನಿ, ತಾಪಂ ಇಒ ಎಸ್. ಎಸ್. ಕಲ್ಮನಿ, ಬಿ.ಕುಮಾರ, ವಿನಯ ಕುಮಾರ, ಟಿ.ಸಿ.ವೆಂಕಟೇಶಮೂರ್ತಿ, ಟಿ.ಎಂ.ನಾಗರತ್ನಾ, ಡಾ.ಎಸ್.ವ್ಹಿ. ತಿಗರಿಮಠ, ರಾಜು ರಾಠೊಡ, ಡಾ.ಸಂತೋಷಗೌಡ ಪಾಟೀಲ, ಎಚ್. ನಾಗರಾಜ, ಎಚ್.ಎಸ್.ಪಾಟೀಲ, ಲಕ್ಕಾನಾಯಕ್, ಸುವರ್ಣ ಕೋಟಿ, ಐ.ಎಸ್. ಮುಲ್ಲಾ, ಎಲ್.ಬಿ.ದೇಸಾಯಿ, ಎಚ್.ಕೆ.ಕಲ್ಮೇಶ, ಕಸ್ತೂರಿ ಬಳ್ಳೊಳ್ಳಿ, ವೀರಪ್ಪ ಕುಂಬಾರ, ಗ್ರಾಪಂ ಸದಸ್ಯರಾದ ಸೋನಮ್ಮ ನಾಯಕ್, ಮಂಜನಾಥ ಹಳ್ಳಿ, ಬನ್ನಪ್ಪ ಚೂರಿ, ರಂಗನಾಥ ನಾಯಕ, ಗೀತಾ ಮುರುಡಿ, ಹನಮಂತಪ್ಪ ನಾಯಕ್, ಮೈಲಾರಪ್ಪ ಕಲಕೇರಿ, ಸುಭಾಷ ಗುಡಿಮನಿ, ನಾಗರಾಜ ಗುಡಿಮನಿ, ಸುರೇಶ ಹಲವಾಗಲಿ, ಹನುಮರಡ್ಡಿ ಮಾದೂರು ಇತರರಿದ್ದರು.
ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !