ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕ ಭೇಟಿ


Team Udayavani, Aug 19, 2020, 4:15 PM IST

ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕ ಭೇಟಿ

ಲಕ್ಷ್ಮೇಶ್ವರ: ಪಟ್ಟಣದ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಮಂಗಳವಾರ ಗದಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಟಿ.ಎಸ್‌. ರುದ್ರೇಶ ಭೇಟಿ ನೀಡಿ ರಸಗೊಬ್ಬರ, ಕೀಟನಾಶಕಗಳ ಮಾರಾಟ, ದಾಸ್ತಾನುಗಳ ಮಾಹಿತಿ ಪಡೆದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಗಳ ಕೃಷಿ ಪರಕರ ಅಂಗಡಿಗಳಿಗೆ ಭೇಟಿ ನೀಡಿದ ವೇಳೆ ಪಟ್ಟಣಕ್ಕೂ ಆಗಮಿಸಿದ ಅವರು, ಎಲ್ಲ ಅಂಗಡಿಗಳಿಗೆ ಭೇಟಿ ನೀಡಿ ಬಹುತೇಕ ಕೃಷಿ ಪರಿಕರ ಮಾರಾಟಗಾರರನ್ನು ತರಾಟೆಗೆ ತೆಗೆದುಕೊಂಡರು. ರಸಗೊಬ್ಬರವನ್ನು ಪಿಒಎಸ್‌ ಯಂತ್ರದ ಮೂಲಕ ರೈತರಿಂದ ದಾಖಲೆ ಪಡೆದು ಬಿಲ್‌ ನೀಡಿಲ್ಲ. ಬದಲಾಗಿ ಕೆಲವೇ ರೈತರ ಹೆಸರಿನಲ್ಲಿ ಪದೇ ಪದೇಬಿಲ್‌ ಆಗಿವೆ. ಬಿಲ್‌ನಲ್ಲಿ ವ್ಯತ್ಯಾಸವಾದ ಬಗ್ಗೆ ಪರಿಶೀಲಿಸಿ ಸ್ಪಷ್ಟೀಕರಣ ಕೇಳಿ ಎಚ್ಚರಿಕೆ ನೀಡಿದರು.

ಈ ವೇಳೆ ಮಾರಾಟಗಾರು ಕೋವಿಡ್ ಹಿನ್ನೆಲೆ ಮತ್ತು ಯೂರಿಯಾ ಗೊಬ್ಬರಕ್ಕೆ ಏಕಕಾಲಕ್ಕೆ ನೂರಾರು ರೈತರು ಮುಗಿಬೀಳುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಜಾಯಿಸಿ ನೀಡಿದರು. ಸದ್ಯಕ್ಕೆ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು ಇದನ್ನೇ ಬಂಡವಾಳವಾಗಿಸಿಕೊಳ್ಳುವ ನಿಟ್ಟಿನಲ್ಲಿ ಗೊಬ್ಬರ ದಾಸ್ತಾನು ಮಾಡಿಕೊಳ್ಳುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಮುಲಾಜಿಲ್ಲದೇ ಲೈಸೆನ್ಸ್‌ ರದ್ದು ಪಡಿಸಲಾಗುವುದು. ಅಲ್ಲದೇ ಅಂಗಡಿಗಳಲ್ಲಿ ರಸಗೊಬ್ಬರ, ಬೀಜ, ಕೀಟನಾಶಕಗಳ ದಾಸ್ತಾನು, ಮಾರಾಟ ದರದ ಫಲಕ ಕಡ್ಡಾಯವಾಗಿ ಹಾಕಬೇಕು. ನಿಷೇಧಿತ ಮತ್ತು ಅವಧಿ ಮೀರಿದ ಬೀಜ, ಕೀಟನಾಶಕ ಮಾರಾಟ ಮಾಡಬಾರದು. ಕಡ್ಡಾಯವಾಗಿ ರೈತರಿಗೆ ಬಿಲ್‌ ನೀಡಬೇಕು. ಹೆಚ್ಚಿನ ಲಾಭದ ಆಸೆಗೆ ಇಲಾಖೆ ನಿಯಮಾವಳಿ ಮೀರಿದ್ದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ಲೈಸೆನ್ಸ್‌ ರದ್ದು ಪಡಿಸಲಾಗುವುದು. ಈಗಾಗಲೇ ಗದಗ ಜಿಲ್ಲೆಯಲ್ಲಿ ಗದಗ, ಅಂತೂರ-ಬೆಂತೂರ, ಶಿರಹಟ್ಟಿ ತಾಲೂಕಿನ ಇಟಗಿ, ಗಜೇಂದ್ರಗಡ, ರೋಣ ಭಾಗದಲ್ಲಿ ಕೆಲವು ಮಳಿಗೆಗಳ ಲೈಸೆನ್ಸ್‌ ರದ್ದು ಪಡಿಸಲಾಗಿದೆ ಎಂದು ಎಚ್ಚರಿಸಿದರು.

ರೈತರು ತಮಗೇನಾದರೂ ಮಾರಾಟಗಾರರಿಂದ ತೊಂದರೆಯಾದಲ್ಲಿ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದರು. ಈ ವೇಳೆ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರ ನರಸಮ್ಮನವರ, ಕೃಷಿ ಸಹಾಯಕ ಅಧಿಕಾರಿ ಪಿ.ಕೆ. ಹೊನ್ನಪ್ಪನವರ, ಎನ್‌.ಎಚ್‌. ಹಣಗಿ, ಎಸ್‌.ಬಿ. ಲಮಾಣಿ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.