ವಿಠಲಾಪುರದ ರಸಲಿಂಗ 


Team Udayavani, Mar 11, 2021, 9:27 PM IST

gdsgw

ಮುಂಡರಗಿ: ತಾಲೂಕಿನ ವಿಠಲಾಪುರ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚ ಲೋಹದ ರಸಲಿಂಗ (ಶಿವಲಿಂಗ) ಇದೆ. ಈ ರಸಲಿಂಗಕ್ಕೆ ಮಹಾ ಶಿವರಾತ್ರಿಯಂದು ವಿಶೇಷ ಪೂಜೆ ನಡೆಯುತ್ತದೆ.

ಅಂದು ರಸಲಿಂಗವನ್ನು ತೊಳೆದು ಹೂವು, ಬಿಲ್ವಪತ್ರೆಗಳಿಂದ ಮಹಾಪುರುಷ ಕುಟುಂಬದವರು ಪೂಜೆ ನೆರವೇರಿಸುತ್ತಾರೆ. ದಕ್ಷಿಣ ಭಾರತದಲ್ಲಿಯೇ ವಿಶೇಷವಾಗಿರುವ ಈ ರಸಲಿಂಗ ಹಲವು ಕುತೂಹಲಕರ ಸಂಗತಿಗಳಿಂದ ಕೂಡಿದೆ. ರಸಶಾಸ್ತ್ರ ಅಧ್ಯಯನ ಮಾಡಿದ್ದ ಯೋಗ ಗುರುಗಳು ರಸಲಿಂಗ ರಚಿಸಿದ್ದರೆನ್ನುವ ಮಾತು ಜನಜನಿತವಾಗಿದೆ. ವಿಠಲಾಪುರದ ಮಹಾಪುರುಷರ ಕುಟುಂಬದ ಮೂಲ ಪುರುಷರಾದ ಬಿಷ್ಟಪ್ಪಯ್ಯ ಅವರೇ ರಸಲಿಂಗ ರಚನೆ ಮಾಡಿರುವ ಐತಿಹ್ಯವಿದೆ.

ರಸಲಿಂಗದ ರಚನೆ: ವಿಜಯನಗರ ಆಳ್ವಿಕೆ ಸಂದರ್ಭದಲ್ಲಿ ಹದಿನಾರನೇ ಶತಮಾನದ ಪೂರ್ವಾರ್ಧ ಕಾಲ ಘಟ್ಟದಲ್ಲಿ (16608-1698) ಇದ್ದ ಬಿಷ್ಟಪ್ಪಯ್ಯ ಮಹಾಪುರುಷರು ವಿಠಲಾಪುರದಲ್ಲಿ ನೆಲೆ ನಿಂತು ಯೋಗ, ರಸಶಾಸ್ತ್ರ, ಲೋಹಶಾಸ್ತ್ರ, ಖಗೋಳಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ, ಆಗಮಶಾಸ್ತ್ರ ವಿದ್ಯೆ ಪಾರಂಗತ ಮಾಡಿಕೊಂಡಿದ್ದರು.

ಯೋಗ ಮತ್ತು ರಸಶಾಸ್ತ್ರ ವಿದ್ಯೆ ಮೂಲಕ ಪಂಚಲೋಹದಿಂದ ಕೂಡಿದ ರಸಲಿಂಗ ರಚಿಸಿದ್ದರು. ಎರಡರಿಂದ ಮೂರು ಅಡಿ ಎತ್ತರವಿರುವ ಪಂಚಲೋಹದ ರಸಲಿಂಗದ ಟೊಳ್ಳಾಗಿರುವ ಒಳಭಾಗದಲ್ಲಿ ಪಾದರಸ ತುಂಬಲಾಗಿದೆ. ರಸಲಿಂಗವು 30 ಕೆ.ಜಿಯಷ್ಟು ಭಾರವಿದೆ. ಕನಿಷ್ಟ ನಾಲ್ಕು ಶತಮಾನಗಳಷ್ಟು ಪುರಾತನವಾಗಿರುವ ರಸಲಿಂಗವು ದಿನದ ಸೂರ್ಯ ಕಿರಣಗಳ ಏರಿಳಿತಕ್ಕೆ ಅನುಗುಣವಾಗಿ ಮುಂಜಾನೆ ಕೆಂಪು, ಮಧ್ಯಾಹ್ನ ಹಳದಿ, ಸಂಜೆ ಹೊತ್ತು ಬಂಗಾರ ಬಣ್ಣದಲ್ಲಿ ಕಾಣುತ್ತದೆ. ತಾಪಮಾನದಲ್ಲಿ ಏರಿಳಿತ ಉಂಟಾದಾಗ ಈ ರಸಲಿಂಗದಿಂದ ಪಾದರಸ ಹೊರಬರುತ್ತದೆ.

ಮಹಾಪುರುಷ ಕುಟುಂಬದವರು ಪಾದರಸ ಸಂಗ್ರಹಿಸಿಟ್ಟಿದ್ದಾರೆ. ಈ ಪಾದರಸ ಆಯುರ್ವೇದಿಕ್‌ ಔಷಧಿ  ಗಳಲ್ಲಿ ವಿಶೇಷವಾಗಿ ಬಳಸಲಾಗುತ್ತದೆ. ಮುಂಡರಗಿ -ಹೂವಿನಹಡಗಲಿ ಭಾಗದಲ್ಲಿ ಬಿಷ್ಟಪ್ಪಯ್ಯನವರು ಯೋಗ- ರಸಶಾಸ್ತ್ರ ಉಪಯೋಗಿಸಿಕೊಂಡು ಸತ್ಕಾರ್ಯ, ಧರ್ಮದ ದಾರಿಯಲ್ಲಿ ಸೇವೆ ಮಾಡಿರುವುದು ಈ ಎಲ್ಲ ಸಂಗತಿಗಳಿಂದ ತಿಳಿದು ಬರುತ್ತದೆ.

ಹು.ಬಾ. ವಡ್ಡಟ್ಟಿ,

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.