ಹಣ ಕೊಡುತ್ತೇವೆ ಬಾ…!; ಗದಗದಲ್ಲಿ ಪೊಲೀಸರಿಬ್ಬರಿಂದ ವಿದ್ಯಾರ್ಥಿನಿಗೆ ಕಿರುಕುಳ
ರಕ್ಷಕರೇ ಭಕ್ಷಕರಾದರು...!! ನಿರ್ದಾಕ್ಷಿಣ್ಯ ಕ್ರಮ ಎಂದ SP
Team Udayavani, Feb 4, 2024, 4:05 PM IST
ಗದಗ : ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಇಬ್ಬರು ಸಿಬಂದಿಗಳ ಮೇಲೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪಿಎಸ್ಐ ನಿಖಿಲ್ ಕಾಂಬ್ಳೆ ಮತ್ತು ಹೆಡ್ ಕಾನ್ಸ್ ಟೇಬಲ್ ಶಂಕರ್ ನಾಲಕರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.
ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪ ಮಾಡಲಾಗಿದ್ದು, ನರೇಗಲ್ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆ ಬಳಿ ಚುಡಾಯಿಸಿರುವ ಆರೋಪ ಮಾಡಲಾಗಿದೆ. ಬೇರೆ ಯುವತಿಯರನ್ನು ಸಂಪರ್ಕಿಸಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಣ ಕೊಡುತ್ತೇವೆ ಬಾ ಎಂದು ಕರೆದಿದ್ದಾರೆ.
ಎಸ್ ಪಿ ಅವರ ಗಮನಕ್ಕೆ ತರುತ್ತೇನೆ ಎಂದರೂ ನಿರಂತರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲಾಗಿದ್ದು, ನರೇಗಲ್ ಪೊಲೀಸರಿಂದ ಜೀವ ಭಯ ಇದೆ ಎಂದು ವಿದ್ಯಾರ್ಥಿನಿ ಅಳಲು ತೊಡಿಕೊಡಿದ್ದಾಳೆ.
ನಿರ್ದಾಕ್ಷಿಣ್ಯ ಕ್ರಮ
ಎಸ್ ಪಿ ಬಿ.ಎಸ್. ನೇಮಗೌಡ ಅವರು ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ”ಹೆಡ್ ಕಾನ್ಸ್ ಟೇಬಲ್ ಶಂಕರ್ ನಾಲಕರ್ ಈಗಾಗಲೇ ಸಸ್ಪೆಂಡ್ ನಲ್ಲಿದ್ದು, ಇದೀಗ ಮತ್ತೊಂದು ಬಾರಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನ ಸಸ್ಪೆಂಡ್ ಮಾಡಲಾಗುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆದೇಶಿಸುತ್ತೇನೆ. ಪಿಎಸ್ ಐ ನಿಖಿಲ್ ಬಗ್ಗೆಯೂ ದೂರು ಕೇಳಿ ಬಂದಿದ್ದು ಅವರ ವಿರುದ್ದವೂ ತನಿಖೆ ಮಾಡುತ್ತೇವೆ.ತತ್ ಕ್ಷಣ ತನಿಖೆಯ ವರದಿ ಪಡೆದು ಪಿಎಸ್ ಐ ತಪ್ಪಿದ್ದಲ್ಲಿ ಕ್ರಮ ತೆಗೆದುಕೊಳ್ತೇವೆ. ನಿರ್ದಾಕ್ಷಿಣ್ಯ ಕ್ರಮ ತಗೆದುಕೊಳ್ಳುತ್ತೇವೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಅದೇಶಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ