ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸಿದರೆ ತಪ್ಪೇನು: ಸಚಿವ ಸಿ.ಸಿ.ಪಾಟೀಲ್
Team Udayavani, Mar 19, 2022, 4:50 PM IST
ಗದಗ: ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಬದಲಾಗಿ ಬೇರೆ ಧರ್ಮದ ಗ್ರಂಥವನ್ನು ಸೇರಿಸುತ್ತೇವೆಂದು ಹೇಳಿದ್ದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸುತ್ತಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಟಾಂಗ್ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವುದು ಇನ್ನೂ ಚರ್ಚೆಯಲ್ಲಿದ್ದರೂ, ಅದಕ್ಕೆ ಡಿ.ಕೆ.ಶಿವಕುಮಾರ್ ಆಕ್ಷೇಪಿಸಿದ್ದಾರೆ. ಆದರೆ, ಭಗವದ್ಗೀತೆ ಯಾವುದೇ ಧರ್ಮಕ್ಕೆ ಸೀಮಿತವಲ್ಲ. ‘ಕರ್ಮವನ್ನು ನೀ ಮಾಡು, ಅದರ ಫಲವನ್ನು ನನಗೆ ಬಿಡು’ ಎಂದು ಶ್ರೀಕೃಷ್ಣ ಪರಮಾತ್ಮನು ಹೇಳುತ್ತಾನೆ. ಒಬ್ಬ ರಾಜಕಾರಣಿಯಾಗಿ ಜನಪರ ಕಾರ್ಯಕ್ರಮ ನಾನು ಮಾಡಬೇಕು. ಚುನಾವಣಾ ಫಲಿತಾಂಶ ಜನರಿಗೆ ಬಿಡಬೇಕು ಎನ್ನುವುದು ಅದರ ಸಾರ. ಬೇರೆ ಪುಸ್ತಕದಲ್ಲಿ ಹೇಳಿರುವಂತೆ ಮತ್ತೊಬ್ಬರ ಕೈ ಕತ್ತರಿಸಬೇಕು. ಕಾಲು ಕಡಿಯಬೇಕು ಎಂದು ಭಗವದ್ಗೀತೆ ಬೋಧಿಸಿಲ್ಲ ಎಂದು ತಿರುಗೇಟು ನೀಡಿದರು.
ಭಗವದ್ಗೀತೆ ಮೇಲೆ ಕೈ ಇಟ್ಟು ಕೋರ್ಟ್ನಲ್ಲಿ ಸತ್ಯವನ್ನೇ ನುಡಿಯುತ್ತೇನೆ ಎಂದು ಆಣೆ, ಪ್ರಮಾಣ ಮಾಡುತ್ತೇವೆ. ಅಂತಹ ಮಹಾಗ್ರಂಥವನ್ನು ಅಳವಡಿಸಿಕೊಂಡರೆ ತಪ್ಪೇನು ಎಂದು ಖಾರವಾಗಿ ಪ್ರಶ್ನಿಸಿದರು.
ಟೋಲ್ ಗುತ್ತಿಗೆದಾರರಿಂದ ವಾಹನ ಸವಾರರಿಗೆ ಕಿರುಕುಳ ಇರುವುದು ನಿಜ. ಈ ಬಗ್ಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸಂಬಂಧಿಸಿದವರ ಮೂಲಕ ಸೂಚಿಸಲಾಗಿದೆ. ಕೆಲವರು ಸುಧಾರಿಸಿದ್ದಾರೆ. ಯಾರಾದರೂ, ಅದನ್ನೇ ಮುಂದುವರಿಸಿದರೆ, ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
ಇದನ್ನೂ ಓದಿ:ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ: ಸಿ.ಟಿ.ರವಿ ಕಿಡಿ
ಕಾಶ್ಮೀರಿ ಪಂಡಿತರು, ಹಿಂದೂಗಳು ಹಾಗೂ ಹಿಂದೂ ಮಹಿಳೆಯರ ಮೇಲಿನ ದೌಜನ್ಯದ ಇತಿಹಾಸದ ಪುಟಗಳಿಗೆ ‘ದಿ ಕಾಶ್ಮೀರಿ ಫೈಲ್ಸ್’ ಹಿಂದಿ ಚಲನಚಿತ್ರ ಕನ್ನಡಿ ಹಿಡಿದಿದ್ದು, ಪ್ರತಿಯೊಬ್ಬರೂ ನೋಡಲೇಬೇಕಾದ ಚಿತ್ರ. ಗದಗ ನಗರದ ಶಾಂತಿ ಚಿತ್ರಮಂದಿರದಲ್ಲಿ ಮಾ.20 ರಿಂದ 23ರ ವರೆಗೆ ಮಧ್ಯಾಹ್ನ 12 ಮತ್ತು ಮೂರು ಗಂಟೆಯಿಂದ ಆರಂಭಗೊಳ್ಳುವ ಶೋಗಳು ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಪ್ರವೇಶ ಕಲ್ಪಿಸಿದೆ. ಅದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ತಾವೇ ಭರಿಸಿದ್ದಾಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಎಂ.ಎಸ್.ಕರಿಗೌಡ್ರ, ಸಂಗಮೇಶ ದುಂದೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್