ಇಂದಿರಾ ಕ್ಯಾಂಟೀನ್ ಶುರು ಯಾವಾಗ?
Team Udayavani, Jun 26, 2019, 10:44 AM IST
ಶಿರಹಟ್ಟಿ: ಇಂದಿರಾ ಕ್ಯಾಂಟೀನ್ ಆರಂಭವಾಗದೇ ಬೀಗ ಜಡಿದಿರುವುದು.
ಶಿರಹಟ್ಟಿ: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಸಿದ್ಧವಾಗಿ ಆರೇಳು ತಿಂಗಳಾದರೂ ಈವರೆಗೆ ಆರಂಭವಾಗಿಲ್ಲ. ಈ ಕುರಿತು ಯಾರೂ ಕೂಡಾ ವಿಚಾರಿಸಿಲ್ಲ.
ಹಿಂದಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಊಟ-ಉಪಾಹಾರ ಲಭ್ಯವಾಗಬೇಕು ಎನ್ನುವ ಬಯಕೆಯಿಂದ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಮಂಜೂರಾಗಿತ್ತು. ಈಗ ಕಟ್ಟಡ ನಿರ್ಮಾಣ ಮುಗಿದಿದ್ದು, ಆರಂಭ ಯಾವಾಗ ಎನ್ನವುದು ಯಕ್ಷ ಪ್ರಶ್ನೆಯಾಗಿದೆ. ಈ ಕುರಿತು ಪಟ್ಟಣದ ಕಾಂಗ್ರೆಸ್ ಮುಖಂಡರು ಮತ್ತು ಜಿಲ್ಲಾ ಮುಖಂಡರು ಇದರ ಬಗ್ಗೆ ಕಾಳಜಿ ತೋರುತ್ತಿಲ್ಲ. ಜೊತೆಗೆ ಅಧಿಕಾರಿಗಳ ನಿರ್ಲಕ್ಷವೂ ಕೂಡಾ ಎದ್ದು ಕಾಣುತ್ತಿದೆ.
ಈ ಕುರಿತು ಕರವೇ ತಾಲೂಕು ಘಟಕದ ಅಧ್ಯಕ್ಷ ರಫಿಕ್ ಕೆರಿಮನಿ ಪ್ರತಿಕ್ರಿಯಿಸಿ, ಸರಕಾರ ಬಡವರಿಗಾಗಿ ಯೋಜನೆ ರೂಪಿಸಿದ್ದು, ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಕುರಿತು ಸಂಬಂಧಪಟ್ಟವರನ್ನು ವಿಚಾರಿಸಿದಾಗ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ನಿರ್ಲಕ್ಷ್ಯ ಧೋರಣೆ ಮುಂದುವರೆದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ