ಕಡಲೆ ಖರೀದಿ ಕೇಂದ್ರ ಆರಂಭ ಯಾವಾಗ?


Team Udayavani, Feb 10, 2020, 5:02 PM IST

gadaga-tdy-1

ಗದಗ: ಹಲ್ಲು ಇದ್ದವನಿಗೆ ಕಡಲೆ ಇಲ್ಲ. ಕಡಲೆ ಇದ್ದವನಿಗೆ ಹಲ್ಲು ಇಲ್ಲ ಎಂಬಂತಾಗಿದೆ ಜಿಲ್ಲೆಯ ರೈತರ ಪರಿಸ್ಥಿತಿ. ಕಳೆದ ಅಕ್ಟೋಬರ್‌ ನಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದ ಮಧ್ಯೆಯೂ ಕಡಲೆ ಇಳುವರಿ ಉತ್ತಮವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೆಲೆ ದೊರೆಯದೇ ಕಡಲೆ ಬೆಳೆಗಾರರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದ್ದು, ಸರಕಾರ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂಬ ಕೂಗು ಜೋರಾಗಿದೆ.

ಕಳೆದ ಐದಾರು ವರ್ಷಗಳಿಂದ ಸತತವಾಗಿ ಕಾಡಿದ ಬರಗಾಲ ಜಿಲ್ಲೆಯ ರೈತರನ್ನು ಕಂಗೆಡಿಸಿತ್ತು. ಅದರಂತೆ ಕಳೆದ ಅಕ್ಟೋಬರ್‌ನಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹ ಬರದಿಂದ ಬಳಲಿದ್ದ ರೈತರನ್ನು ಮತ್ತಷ್ಟು ಜರ್ಜರಿತವಾಗುವಂತೆ ಮಾಡಿತು. ಆನಂತರ ಬಿತ್ತನೆಯಾದ ಕಡಲೆ ಬೆಳೆ ಭಾರೀ ಅಲ್ಲದಿದ್ದರೂ, ಉತ್ತಮ ಇಳುವರಿ ಬಂದಿದೆ.

1.22 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ: ಕಡಲೆ ಜಿಲ್ಲೆಯಲ್ಲಿ ಪ್ರಮುಖ ಬೆಳೆಯಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಮಳೆ ಆಶ್ರಿತ ಪ್ರದೇಶದಲ್ಲಿ ಅತಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಅದರಂತೆ ಈ ಬಾರಿ ಜಿಲ್ಲೆಯಲ್ಲಿ ಗದಗ ತಾಲೂಕಿನ 32,600 ಹೆಕ್ಟೇರ್‌, ಮುಂಡರಗಿ ತಾಲೂಕಿನಲ್ಲಿ 11,816 ಹೆಕ್ಟೇರ್‌, ನರಗುಂದಲ್ಲಿ 12,700 ಹೆಕ್ಟೇರ್‌, ರೋಣ 55,812 ಹಾಗೂ ಶಿರಹಟ್ಟಿ ತಾಲೂಕಿನಲ್ಲಿ 9315 ಹೆಕ್ಟೇರ್‌ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,22,243 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿದೆ. ಅದರಲ್ಲೂ ನವೆಂಬರ್‌ನಲ್ಲಿ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಬಹುದಿನಗಳ ವರೆಗೆ ಕಾಯ್ದುಕೊಂಡಿದ್ದರಿಂದ ಶೇ.50ರಷ್ಟು ಬೆಳೆ ಉತ್ತಮವಾಗಿದೆ. ಹಲವೆಡೆ ಬಿತ್ತನೆ ವಿಳಂಬವಾಗಿದ್ದರಿಂದ ಕಾಳು ಕಟ್ಟುವಿಕೆ ಹಾಗೂ ಕೊಯ್ಲು ವಿಳಂಬವಾಗಿದೆ.

ಇನ್ನುಳಿದಂತೆ ಕಡಲೆ ಕಟಾವು ಆಗುತ್ತಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು. ಬೆಲೆ ಇಲ್ಲದೇ ರೈತರ ಪರದಾಟ: ಬರ- ನೆರೆ ಮಧ್ಯೆಯೂ ಭೂತಾಯಿ ನಂಬಿರುವ ಅನ್ನದಾತರು ಈ ಬಾರಿ ಹಿಂಗಾರಿನಲ್ಲಿ ಸಾಲ ಮಾಡಿ ಕಡಲೆ ಬಿತ್ತನೆ ಮಾಡಿದ್ದರು. ಸುಮಾರು 4500 ರೂ. ಕ್ವಿಂಟಲ್‌ನಂತೆ ಕಡಲೆ ಬಿತ್ತನೆ ಬೀಜ ಖರೀದಿಸಿ ಬಿತ್ತನೆ ಮಾಡಿದ್ದರು. ಬಳಿಕ ಕಳೆ ತೆಗೆಯುವುದು, ಕ್ರಿಮಿನಾಶಕ ಸಿಂಪರಣೆ ಸೇರಿದಂತೆ ಬೆಳೆ ಕಟಾವು ಆಗಿ, ಮಾರುಕಟ್ಟೆಗೆ ಸಾಗಿಸುವುದರೊಳಗೆ ಸುಮಾರು 13ರಿಂದ 15 ಸಾವಿರ ರೂ. ಖರ್ಚು ಬರುತ್ತದೆ. ಪ್ರತಿ ಎಕರೆಗೆ ಐದರಿಂದ ಆರು ಚೀಲ ಇಳುವರಿ ಬಂದಿದೆ. ಆದರೆ, ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಕನಿಷ್ಠ 3200 ರೂ.ಗಳಿಂದ ಗರಿಷ್ಠ 4000 ರೂ. ಮೀರುತ್ತಿಲ್ಲ. ಅದರಲ್ಲೂ ಬಹುತೇಕ ರೈತರಿಗೆ ಪ್ರತಿ ಕ್ವಿಂಟಲ್‌ಗೆ ಸರಾಸರಿ 3,500 ರೂ. ಕೈಗೆ ಬರುತ್ತಿದ್ದು, ಬೆಳೆಗೆ ಖರ್ಚು ಮಾಡಿದ ಕೂಲಿಯೂ ಮರಳುತ್ತಿಲ್ಲ ಎಂಬುದು ರೈತರ ಅಳಲು.

ಆದರೆ, ಕಳೆದ ಜನವರಿ 1ರಿಂದ ಫೆ. 8ರ ವರೆಗೆ ಜಿಲ್ಲೆಯ ಗದಗ ಮಾರುಕಟ್ಟೆಯೊಂದರಲ್ಲೇ 59,922 ಕ್ವಿಂಟಲ್‌ ಕಡಲೆ ಆವಕವಾಗಿದೆ. ಜಿಲ್ಲೆಯ ವಿವಿಧ ಎಪಿಎಂಸಿಗಳಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಸುಮಾರು 68,449 ಕ್ವಿಂಟಲ್‌ ಆವಕವಾಗಿದೆ. ಆದರೆ ಬೆಲೆಯಲ್ಲಿ ಚೇತರಿಕೆ ಕಂಡಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಕಡಲೆ ಬೆಳೆಗಾರರ ರಕ್ಷಣೆಗಾಗಿ ತಕ್ಷಣವೇ ರಾಜ್ಯ ಸರಕಾರ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ರೈತರ ಒತ್ತಾಯ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.