ರೋಣ ಕಾಲೇಜಿಗೆ ದಾರಿ ಯಾವುದಯ್ಯ!


Team Udayavani, Nov 23, 2019, 2:33 PM IST

gadaga-tdy-2

ರೋಣ: ಪಟ್ಟಣದ ಹೃದಯ ಭಾಗದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣಕ್ಕೆ ಸಾಕಷ್ಟು ಹಣಕಾಸಿನ ನೆರವು ನೀಡಿ ಮೂಲ ಸೌಕರ್ಯ ಒದಗಿಸಲು ಸೂಚಿಸಲಾಗಿದ್ದರೂ ಅದು ಕಾಗದದಲ್ಲಿ ಮಾತ್ರ ಎನ್ನುವುದಕ್ಕೆ ರೋಣ ಸರಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ.

ಕಾಲೇಜಿಗೆ ಹೋಗಲು ಮತ್ತು ಬರಲು ದಾರಿಯಿಲ್ಲ. ಕಳೆದ 28 ವರ್ಷಗಳಿಂದ ದ್ವಾರ ಬಾಗಿಲಿನಿಂದ ಮಕ್ಕಳು ಓಡಾಡುತ್ತಿದ್ದರು. ಈಗ ಏಕಾಏಕಿ ಜಾಗದ ಮಾಲೀಕರು ರಸ್ತೆಗೆ ಬೇಲಿ ಹಾಕಿದ್ದರಿಂದ ಕಾಲೇಜಿನ ವಿದ್ಯಾರ್ಥಿಗಳು ಕಾಂಪೌಂಡ್‌ ಹಾರಿ ಕಾಲೇಜಿಗೆ ಹೋಗುವಂತಾಗಿದೆ. ಗಂಡು ಮಕ್ಕಳು ಹೇಗಾದರೂ ಕಸರತ್ತು ಮಾಡಿಕೊಂಡು ಕಾಲೇಜಿನ ಒಳಗೆ ಹೋಗುತ್ತಾರೆ. ಆದರೆ ಹೆಣ್ಣು ಮಕ್ಕಳಿಗೆ ಏನು ಮಾಡಬೇಕು ಎಂದು ತಿಳಿಯದೇ ಪಕ್ಕದಲ್ಲಿರುವ ನೀರಾವರಿ ಕಚೇರಿಯ ಮುಳ್ಳಿನ ಕಂಟಿಯಲ್ಲಿ ಹಾದು ಹೋಗುತ್ತಾರೆ.

ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ತರಗತಿಯಲ್ಲಿ 161 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸೇರಿ ಒಟ್ಟು 102 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೆ ವಿಜ್ಞಾನದ ವಿಭಾಗ ಶಿಕ್ಷಣವು ಇಲ್ಲಿ ಲಭ್ಯವಿತ್ತು. ಶೂನ್ಯ ದಾಖಲಾತಿಯಿಂದ ಇಲ್ಲಿಗೆ ಮಂಜೂರಾಗಿ ಬಂದಿದ್ದ ಉಪಾನ್ಯಾಸಕರು ಬೇರೆಕಡೆ ವರ್ಗಾವಣೆಯಾಗಿ ಹೋಗಿದ್ದಾರೆ.

ಒಟ್ಟು ಮೂರು ಜನ ಅತಿಥಿ ಉಪನ್ಯಾಸಕರು, 5 ಜನ ಕಾಯಂ ಉಪನ್ಯಾಸಕರು, ಒಬ್ಬರು ಶಿರೋಳ ಕಾಲೇಜಿನಿಂದ ನಿಯೋಜನೆಯ ಮೇಲೆ ರೋಣದಲ್ಲಿ ಮೂರು ದಿನ ಹಾಗೂ ಶಿರೋಳ ಕಾಲೇಜಿನಲ್ಲಿ ಮೂರು ದಿನ ಉಪನ್ಯಾಸ ನೀಡುತ್ತಿದ್ದಾರೆ. ಆದರೆ ಇಷ್ಟೊಂದು ಹಾಜರಾತಿ ಇರುವ ಸರ್ಕಾರಿ ಕಾಲೇಜಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾದಂತೆ ಕಂಡುಬರುತ್ತಿದೆ.

ಹೆಣ್ಣುಮಕ್ಕಳಿಗಿಲ್ಲ ಶೌಚಾಲಯ: ಬಯಲು ಶೌಚಾಲಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದೇವೆ ಎಂದು ಅಂಕಿಅಂಶಗಳಲ್ಲಿ ಹೇಳಿಕೊಳ್ಳುವ ಸರ್ಕಾರದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇಲ್ಲಿನ ಕಾಲೇಜಿನ ಹೆಣ್ಣುಮಕ್ಕಳಿಗೆ ಶೌಚಾಲಯ ನೀಡುವಲ್ಲಿ ವಿಫಲವಾಗಿದೆ. ಹೆಣ್ಣುಮಕ್ಕಳು ಮೂತ್ರ ವಿಸರ್ಜನೆಗೆ ಕಾಲೇಜಿನ ಹಿಂದುಗಡೆ ಬೆಳೆದು ನಿಂತಿರುವ ಜಾಲಿಕಂಟಿಗಳಲ್ಲಿ ಹೋಗಬೇಕಾದ ಸ್ಥಿತಿಯಿದೆ.

ಈ ಹಿಂದೆ ಶಾಸಕರು ಕಾಲೇಜಿಗೆ ಭೇಟಿ ನೀಡಿದ ಸಮಯದಲ್ಲಿ ಶಿಥಿಲಗೊಂಡಿರುವ ಕಟ್ಟಡ ವೀಕ್ಷಣೆ ಮಾಡಿ, ಐದು ಲಕ್ಷ ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಗುತ್ತಿಗೆ ಪಡೆದು ನಿರ್ಮಿತಿ ಕೇಂದ್ರದ ಅಭಿಯಂತರರು ಈ ಅನುದಾನದಲ್ಲಿ ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಮೊತ್ತೂಂದು ಎಸ್ಟಿಮೆಂಟ್‌ ಮಾಡಿ ಇಲಾಖೆಗೆ ನೀಡಿದ್ದಾರೆ. ಇದರಿಂದ ರಿಪೇರಿ ಕಾಮಗಾರಿ ಅಷ್ಟಕ್ಕೇ ನಿಂತಿದೆ. –ಜೆ. ಬಿಕಲ್ಲನಗೌಡ್ರ, ಪ್ರಭಾರಿ ಪ್ರಾಚಾರ್ಯರ

 

-ಯಚ್ಚರಗೌಡ ಗೋವಿಂದಗೌಡ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.