ತೋಳ ಕೊಂದು ಬೈಕ್ಗೆ ಕಟ್ಟಿ ಎಳೆದೊಯ್ದ ಯುವಕರು
Team Udayavani, Oct 18, 2021, 6:43 PM IST
ಲಕ್ಷ್ಮೇಶ್ವರ : ಸೋಗಿವಾಳ ಗ್ರಾಮದಲ್ಲಿ ಮೂವರು ಯುವಕರ ಮೇಲೆ ತೋಳವೊಂದು ದಾಳಿ ಮಾಡಿದೆ. ಇದರಿಂದ ಆಕ್ರೋಶಗೊಂಡ ಯುವಕರು ತೋಳ ಹೊಡೆದು ಸಾಯಿಸಿ ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ಯುತ್ತಿರುವ ಅಮಾನವೀಯ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆ ಅ ಧಿಕಾರಿಗಳು ಯುವಕರ ಪತ್ತೆಗೆ ಜಾಲ ಬೀಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಘಟನೆಯ ವಿವರ: ಸೋಗಿವಾಳ ಗ್ರಾಮದಲ್ಲಿ ಅ.13 ಮತ್ತು 14 ರಂದು ತೋಳವೊಂದು ಗ್ರಾಮಕ್ಕೆ ನುಗ್ಗಿ ಕೆಲವರ ಮೇಲೆ ದಾಳಿ ಮಾಡಿದೆ. ಇದರಿಂದ ರೊಚ್ಚಿಗೆದ್ದ ಕೆಲ ಯುವಕರು ತೋಳವನ್ನು ಕೊಂದು ಅದನ್ನು ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ದು ಬೀಸಾಕಿದ್ದಾರೆ. ಅಲ್ಲದೇ, ಈ ದೃಶ್ಯವನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.
ತೋಳದ ದಾಳಿಗೆ ಗಾಯಗೊಂಡ ಶಿವಾನಂದ ಅತ್ತಿಗೇರಿ ಎಂಬ ಯುವಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ ಚಿಕಿತ್ಸೆಯಿಂದ ಚೇತರಿಸಿಕೊಂಡು ಗ್ರಾಮಕ್ಕೆ ತೆರಳಿದ್ದಾನೆ. ವಿಡಿಯೋದಲ್ಲಿನ ಬೈಕ್ ಹಿಂದಿನ ನಂಬರ್ ಪರೀಕ್ಷಿಸಿದ ಅರಣ್ಯ ಇಲಾಖೆ ಅ ಧಿಕಾರಿಗಳು ಬೈಕ್ ಮಾಲಿಕ ಶಿವರಾಜಕುಮಾರ ಕುರುಬರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಬೈಕ್ ಮಾಲಿಕ ನಾಪತ್ತೆಯಾಗಿದ್ದಾನೆ. ತೋಳಕ್ಕೆ ಹುಚ್ಚು ಹಿಡಿದಿತ್ತೆನ್ನಲಾಗಿದ್ದು, ಸತ್ತಿರುವ ತೋಳದ ಕಳೆಬರಹಕ್ಕಾಗಿ ಅರಣ್ಯ ಸಿಬ್ಬಂದಿ ತಲಾಷ್ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ