ಗ್ರಾಮೀಣ ಮಕ್ಕಳಿಗೆ ವರದಾನ ಮಹಿಳಾ ಹಾಸ್ಟೆಲ್‌

ಜ್ಞಾನ ದಾಹ ನೀಗಿಸಲು ಸರ್ವ ರೀತಿಯಲ್ಲೂ ಸಿದ್ಧವಾದ ಹಾಸ್ಟೆಲ್‌ ; ಸುಸಜ್ಜಿತ ಗ್ರಂಥಾಲಯ

Team Udayavani, Jun 17, 2022, 2:58 PM IST

15

ಗಜೇಂದ್ರಗಡ: ನೂರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಭದ್ರ ಬುನಾದಿಯಾಗಿರುವ ಪಟ್ಟಣದ ವಸತಿ ನಿಲಯ, ಇದೀಗ ಮೇಲ್ವಿಚಾರಕರ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ ತಾಲೂಕಿನಲ್ಲಿಯೇ ಆಕರ್ಷಣೀಯ ಹಾಗೂ ಮಾದರಿ ಮಹಿಳಾ ಹಾಸ್ಟೆಲ್‌ ಆಗಿ ಹೊರಹೊಮ್ಮಿದೆ.

ಹೌದು, ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಮಿಸಿರುವ ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸ್ವಚ್ಛಂದ ವಾತಾವರಣ, ಆಕರ್ಷಕ ಉದ್ಯಾನವನ, ಉತ್ತಮ ಪರಿಸರ, ಸುವ್ಯವಸ್ಥಿತ ಗ್ರಂಥಾಲಯ, ಸುಸಜ್ಜಿತ ಅಡುಗೆ ಕೋಣೆ, ಸಮರ್ಪಕ ಕೊಠಡಿಗಳಿಂದ ಮಾದರಿ ಹಾಸ್ಟೆಲ್‌ ಎಂದು ಬಿರುದು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರತಿಯೊಂದು ಶಾಲೆಯ ಗೋಡೆಗಳ ಮೇಲೆ “ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬಾ’ ಎಂಬ ಘೋಷವಾಕ್ಯಗಳನ್ನು ಕಾಣಬಹುದು.

ಆದರೆ, ಮಾದರಿ ವಸತಿ ನಿಲಯದಲ್ಲಿ ಕಾಲಿಟ್ಟ ತಕ್ಷಣ ಅಲ್ಲಿನ ವಾತಾವರಣ ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ. ವಸತಿ ನಿಲಯದ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ನೆಡಲಾಗಿದ್ದು, ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೋಣೆಗಳು, ವಿವಿಧ ಸರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ದಿನಪತ್ರಿಕೆಗಳು ಓದುವವರಿಗೆ ಉಪಯುಕ್ತವಾಗಿವೆ. ಒಳಾಂಗಣ, ಹೊರಾಂಗಣ ಕ್ರೀಡಾ ಸಾಮಗ್ರಿಗಳನ್ನು ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗಿದೆ.

ವಸತಿ ನಿಲಯದಲ್ಲಿರುವ ಪ್ರತಿಯೊಂದು ಕೊಠಡಿಯಲ್ಲಿ 10 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಡ್‌, ಶುದ್ಧ ಕುಡಿಯುವ ನೀರಿನ ಘಟಕ, 10 ಶೌಚಾಲಯ, 10 ಸ್ನಾನದ ಕೋಣೆಗಳು ಇವೆ.

ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲು ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಸುಸಜ್ಜಿತ ಊಟದ ಕೋಣೆ, ಕೈತೋಟ, ನಿಲಯದ ಸುತ್ತ ಆಸನಗಳ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಸದೃಢ ಮನಸ್ಸು, ಸದೃಢ ದೇಹ ನಿರ್ಮಾಣಕ್ಕಾಗಿ ಬೆಳಗಿನ ಜಾವ 5 ಗಂಟೆಗೆ ಯೋಗಾಸನ, ಶಾಲಾ ಪಠ್ಯದ ವಿಷಯಗಳ ವಿದ್ಯಾರ್ಜನೆ ಮಾಡಿಸುವುದರ ಮೂಲಕ ಮಕ್ಕಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ವಸತಿ ನಿಲಯದಲ್ಲಿ ಆದ್ಯತೆ ಕಲ್ಪಿಸಲಾಗಿದ್ದಾರೆ.

ಅಧಿಕಾರಿಗಳ ಭೇಟಿ

ಸ್ಥಳೀಯ ಮಾದರಿ ವಸತಿ ನಿಲಯಕ್ಕೆ ನಿವೃತ್ತ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸುರೇಶ ಹುಗ್ಗಿ, ಎಚ್‌.ಎಚ್‌. ಪೀರಜಾದಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಸ್‌.ಎಲ್‌. ಉಪ್ಪಾರ ಭೇಟಿ ನೀಡಿ, ವಸತಿ ನಿಲಯದಲ್ಲಿ ಬದಲಾವಣೆ ಕಂಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಎಂ.ಎಸ್‌. ಗೋಡಿ, ಶುಪುತ್ರ ಕುಮಸಗಿ ಇತರರಿದ್ದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನ

ಶೈಕ್ಷಣಿಕ ಕ್ಷೇತ್ರದಲ್ಲಿ ಏನನ್ನಾದರೂ ಸಾಧನೆಗೈಯಬೇಕು ಎನ್ನುವ ಸದುದ್ದೇಶ ಹೊಂದಿದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಗಜೇಂದ್ರಗಡ ಮಹಿಳಾ ವಸತಿ ನಿಲಯ ವರದಾನವಾಗಿದೆ. ಅತ್ಯಾಕರ್ಷಕ ಸೌಲಭ್ಯಗಳನ್ನು ಕಲ್ಪಿಸುವುದಲ್ಲದೇ, ವಿದ್ಯಾರ್ಜನೆಗಾಗಿ ಉತ್ತಮ ವಾತಾವರಣ ಕಲ್ಪಿಸಲಾಗಿದೆ. ಈ ವಸತಿ ನಿಲಯದಲ್ಲಿದ್ದು ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ ಉದಾಹರಣೆಗಳು ಸಾಕಷ್ಟಿವೆ.

ಗಜೇಂದ್ರಗಡದ ಬಾಲಕಿಯರ ವಸತಿ ನಿಲಯದಲ್ಲಿನ ಸೌಲಭ್ಯಗಳು ವಿದ್ಯಾರ್ಥಿನಿಯರ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಉದ್ಯಾನವನ, ಗ್ರಂಥಾಲಯ, ಸುತ್ತಲಿನ ಪರಿಸರ ಮಕ್ಕಳ ಕಲಿತಾಸಕ್ತಿ ಹೆಚ್ಚಲು ಪೂರಕವಾಗಿದೆ. ವಸತಿ ನಿಲಯದ ಸುಂದರ ನಿರ್ವಹಣೆಗೆ ಮೇಲ್ವಿಚಾರಕರ ಜೊತೆಗೆ ಮಕ್ಕಳೂ ಕೈ ಜೋಡಿಸಿ. -ಸುರೇಶ ಹುಗ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಜಿಲ್ಲಾ ಅಧಿಕಾರಿ

ವಿದ್ಯಾರ್ಥಿನಿಯರ ಸಹಕಾರ ಹಾಗೂ ಸಿಬ್ಬಂದಿ ಸಹಭಾಗಿತ್ವದಿಂದಲೇ ಮಾದರಿ ವಸತಿ ನಿಲಯ ಮಾಡಲು ಸಾಧ್ಯವಾಯಿತು. ಇಲ್ಲಿನ ಹಲವಾರು ಸಸ್ಯ ಪ್ರಭೇದಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೇರಣೆ ನೀಡುವಂತಿವೆ. ಇದರ ನಿರ್ವಹಣೆ ನಮ್ಮೆಲ್ಲರದ್ದು. –ಡಿ.ಎಚ್‌. ವಸ್ತಾದ, ವಸತಿ ನಿಲಯದ ಮೇಲ್ವಿಚಾರಕ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.