ಪ್ರವಾಹ: ಮಲಪ್ರಭೆ ಶಾಂತಿಗಾಗಿ ಉಡಿ ತುಂಬಿದ ಮಹಿಳೆಯರು
Team Udayavani, Aug 18, 2020, 4:05 PM IST
ಗದಗ: ಅಬ್ಬರಿಸುತ್ತಿರುವ ಮಲಪ್ರಭೆ ಶಾಂತಳಾಗುವಂತೆ ಪ್ರಾರ್ಥಿಸಿ ನರಗುಂದ ತಾಲೂಕಿನ ಕೊಣ್ಣೂರು ಹಾಗೂ ಕಲ್ಲಾಪುರದ ಜನರು ಹೊಳೆಗೆ ಉಡಿ ತುಂಬುವುದರೊಂದಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರು.
ಕೊಣ್ಣೂರು ಗ್ರಾಮದ ಜಾಡರ ಓಣಿ ಹಾಗೂ ಕಲ್ಲಾಪುರದ ಹತ್ತಾರು ಮಹಿಳೆಯರು ತಂಡೋಪ ತಂಡವಾಗಿ ಬಂದು ಕೊಣ್ಣೂರು ಬ್ರಿಡ್ಜ್ ಬಳಿ ನದಿಗೆ ಪೂಜೆ ಸಲ್ಲಿಸಿದರು.
ಹಣ್ಣು, ಕಾಯಿ, ಸೀರೆ ಹಾಗೂ ದವಸ ಧಾನ್ಯಗಳನ್ನು ಉಡಿ ತುಂಬಿ ಶಾಂತಳಾಗುವಂತೆ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿದರು.
ಕಳೆದ ವರ್ಷವಷ್ಟೇ ಅಬ್ಬರಿಸಿದ್ದ ಮಲಪ್ರಭೆ ಇದೀಗ ಮತ್ತೊಮ್ಮೆ ಬೋರ್ಗರೆಯುತ್ತಿದ್ದಾಳೆ. ನದಿ ಪಾತ್ರದ ಗ್ರಾಮಗಳು ಜಲಾವೃತಗೊಂಡಿದ್ದು, ಜಮೀನುಗಳಲ್ಲಿ ಬೆಳೆದಿದ್ದ ಫಸಲು ನೀರು ಪಾಲಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಬದುಕು ಬೀದಿಗೆ ಬಂದಿದೆ. ತಾಯಿ ಮಲಪ್ರಭೆ ಕೃಪೆ ತೋರಬೇಕು ಎಂದು ಬೇಡಿಕೊಂಡರು.
ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದರಿಂದ ಜಿಲ್ಲೆಯ ಕೊಣ್ಣೂರು ಸಮೀಪದ ಸೇತುವೆ ಮುಳುಗಡೆಯಾಗಿದ್ದು, ಸೊಲ್ಲಾಪುರ – ಹುಬ್ಬಳ್ಳಿ ಸಂಪರ್ಕ ಸ್ಥಗಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ