ಮಹಿಳಾ ಸಹಾಯ ಗೆಳತಿ ಕೇಂದ್ರಕ್ಕೆ ಚಾಲನೆ
Team Udayavani, Jan 27, 2020, 2:08 PM IST
ಗದಗ: ಪೊಲೀಸ್ ಇಲಾಖೆ ನಾಗರಿಕ, ಪರಿಸರ ಸ್ನೇಹಿ ಹಾಗೂ ಜನಸ್ನೇಹಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಲ್ಲಿ, ಅನ್ಯಾಯ ಕ್ಕೊಳಗಾದವರಲ್ಲಿ ನ್ಯಾಯ ದೊರೆಯುವ ಭರವಸೆ ಇಮ್ಮಡಿಗೊಳಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಇಲ್ಲಿನ ಶಹರ ಪೊಲೀಸ್ ಠಾಣಾ ಆವರಣದಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದನೂತನವಾಗಿ ಸ್ಥಾಪಿಸಿರುವ ಮಹಿಳಾ ಸಹಾಯ ಗೆಳತಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರಲ್ಲಿ ಕಾನೂನಿನ ಅರಿವು ಮತ್ತು ಸಂವಿಧಾನ ಬದ್ಧ ಹಕ್ಕುಗಳ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲಾ ಪೊಲೀಸ್ ಇಲಾಖೆ ಪ್ರಾರಂಭಿಸಿರುವ ಈ ಗೆಳತಿ ಕೇಂದ್ರ ಶೋಷಿತ ನೊಂದವರ ಧ್ವನಿಯಾಗಿ ಕಾರ್ಯ ನಿರ್ವಹಿಸಬೇಕು. ಇಲಾಖಾ ಸಿಬ್ಬಂದಿ ಠಾಣೆಗೆ ಬರುವ ಮಹಿಳೆಯರು, ಯುವತಿಯರು ಹಾಗೂ ಸೇರಿದಂಂತೆ ದೂರು ನೋಂದಾಯಿಸಲು ಬಂದ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು . ಆ ಮೂಲಕ ನೊಂದವರ ಮನೋಬಲ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿಇಒ ಡಾ|ಆನಂದ, ಡಿಎಸ್ಪಿ ಪ್ರಲ್ಹಾದ ಎಸ್.ಕೆ., ಆರ್ಪಿಐ ಡಿ.ಎಸ್.ಧನಗರ, ಸಿಪಿಐಗಳಾದ ಆಂಜನೇಯ ಡಿ.ಎಸ್., ಆರ್.ಎಫ್. ದೇಸಾಯಿ, ಟಿ.ಮಹಾಂತೇಶ, ಗೆಳತಿ ಮಹಿಳಾ ಕೇಂದ್ರದ ಕಾನೂನು ಸಲಹೆಗಾರ ಎಸ್.ಆರ್.ಬ್ಯಾಹಟ್ಟಿ, ಪಿಎಸ್ಐಗಳಾದ ಕಮಲಾ ದೊಡ್ಡಮನಿ, ಉಮಾ ವಗ್ಗರ, ಜಿ.ಟಿ. ಜಕ್ಕಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ