ಗದಗ ಜಿಲ್ಲಾದ್ಯಂತ ಸಂಭ್ರಮದ ಯುಗಾದಿ

­ಕೋವಿಡ್ ಭೀತಿಯ ನಡುವೆಯೂ ಹಳ್ಳಿಗಳಲ್ಲಿ ಯುಗಾದಿ ಹಬ್ಬದ ಸಂಭ್ರಮಾಚರಣೆ

Team Udayavani, Apr 15, 2021, 7:48 PM IST

ghdgr

ಲಕ್ಷ್ಮೇಶ್ವರ: ಕೋವಿಡ್ ಭೀತಿಯ ನಡುವೆಯೂ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಾರಿಗೆ ಮುಷ್ಕರದ ನಡುವೆಯೂ ಯುಗಾದಿ ಹಬ್ಬದ ಆಚರಣೆಗಾಗಿ ಗ್ರಾಮೀಣ ಪ್ರದೇಶಗಳ ಜನರು ಖಾಸಗಿ ವಾಹನಗಳಲ್ಲಿ ಆಗಮಿಸಿ ಹಬ್ಬಕ್ಕೆ ಬೇಕಾದ ಎಲ್ಲ ವಸ್ತುಗಳನ್ನು ಖರೀದಿಸಿದರು.

ಮಂಗಳವಾರ ಯುಗಾದಿ ಪಾಡ್ಯದಂದು ಬೆಳಿಗ್ಗೆ ಎಲ್ಲರೂ ಹೊಸ ಉಡುಗೆ ತೊಟ್ಟು ಶ್ರದ್ಧಾಭಕ್ತಿಯಿಂದ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಹಿರಿಯರಿಗೆ ನಮಸ್ಕರಿಸಿ, ಬೇವು-ಬೆಲ್ಲ ಹಂಚಿ ಸವಿದರು. ವಿಶೇಷವಾಗಿ ರೈತರು ನಸುಕಿನಲ್ಲಿಯೇ ತಮ್ಮ ಜೀವನಾಡಿ ಎತ್ತುಗಳ ಮೈತೊಳೆದು, ಶೃಂಗರಿಸಿ, ಹೊಲಕ್ಕೆ ತೆರಳಿ ಭೂಮಿತಾಯಿ, ಕೃಷಿ ಪರಿಕರಗಳಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆಗಳಿಗೆ ಸಾಂಕೇತಿಕ ಚಾಲನೆ ನೀಡಿದರು. ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳಿಗೆ ಪೂಜೆ ಸಲ್ಲಿಸಿದರು. ಕೆಲವರು ಹೊಸ ವ್ಯವಹಾರ ಪ್ರಾರಂಭಿಸಿದರೆ, ಅನೇಕರು ಹೊಸ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ಹೊಸ ವರ್ಷದ ದಿನ ಆಭರಣ, ಬಟ್ಟೆ, ಇಲೆಕ್ಟ್ರಾನಿಕ್‌, ಹೊಸ ವಾಹನ ಖರೀದಿ, ಭೂಮಿ ಪೂಜೆ ಇತರೆಲ್ಲ ಶುಭ ಕಾರ್ಯಗಳನ್ನು ಕೈಗೊಂಡರು. ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಉತ್ಸವ, ಪೂಜೆಗಳು ನಿರ್ವಿಘ್ನವಾಗಿ ನೆರವೇರಿದವು. ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಶ್ರೀಮಠದ ಜಮೀನಿನಲ್ಲಿ ಪೂಜಾ ಕಾರ್ಯ ನೆರವೇರಿಸಿ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಈ ವೇಳೆ ಶುಭಾಶೀರ್ವಾದ ಸಂದೇಶ ನೀಡಿದ ಅವರು, ಈ ವರ್ಷ ಉತ್ತಮ ಮಳೆ, ಬೆಳೆಯಾಗಿ ಜಗತ್ತಿನ ಸಕಲ ಜೀವರಾಶಿಗಳಿಗೆ ಅನ್ನ ನೀಡುವ ಅನ್ನದಾತನ ಬದುಕು ಹಸನಾಗಲಿ. ಕೃಷಿ ನಮ್ಮ ಸಂಸ್ಕೃತಿ. ಈ ಬಗ್ಗೆ ಯಾರಲ್ಲೂ ಕೀಳರಿಮೆ ಬೇಡ. ಕೃಷಿಯಲ್ಲಿ ಹೆಮ್ಮೆಯಿಂದ ತೊಡಗಿಸಿಕೊಳ್ಳಬೇಕು. ಭೂಮಿತಾಯಿ ನಂಬಿ ಬದುಕಿದವರಿಗೆ ಎಂದೂ ಕೇಡಾಗಲ್ಲ. ರೈತರು ಸಾವಯವ ಕೃಷಿಯತ್ತ ಚಿತ್ತ ಹರಿಸಬೇಕು. ಪ್ಲವ ನಾಮ ನವ ಸಂವತ್ಸರ ಎಲ್ಲರ ಬಾಳಲ್ಲಿ ಸಂಭ್ರಮ ತರಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.