ಆರೋಗ್ಯಾಧಿಕಾರಿಗೇ ಇಂಜೆಕ್ಷನ್‌


Team Udayavani, Feb 13, 2021, 8:07 PM IST

ಆರೋಗ್ಯಾಧಿಕಾರಿಗೇ ಇಂಜೆಕ್ಷನ್‌

ಗದಗ: ಆ್ಯಂಬುಲೆನ್ಸ್‌ಗಳ ಅಸಮರ್ಪಕನಿರ್ವಹಣೆ, ಪಿಎಚ್‌ಸಿ ಸಿಬ್ಬಂದಿ ವಸತಿ ಗೃಹಗಳದುರಸ್ತಿ ಹಾಗೂ ಹೈಟೆಕ್‌ ಆ್ಯಂಬುಲೆನ್ಸ್ ಗಳ ಪೂರೈಕೆ ಕುರಿತು ಜಿಪಂಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಜಿಪಂ ಸದಸ್ಯರು ಪಕ್ಷಾತೀತವಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಸತೀಶ್‌ ಬಸರಿಗಿಡದ ಅವರನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಜಿಪಂ ಸದಸ್ಯರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ಸ್ವತಃ ಜಿಪಂ ಅಧ್ಯಕ್ಷ ಈರಪ್ಪ ಈಶ್ವರಪ್ಪ ನಾಡಗೌಡ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಡಳಿತಭವನದ ಜಿಪಂ ಸಭಾಂಗಣದಲ್ಲಿ ನಡೆದಜಿಪಂ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ವೈಫಲ್ಯವನ್ನು ಸದಸ್ಯರು ಎಳೆಎಳೆಯಾಗಿ ಬಿಚ್ಚಿಟ್ಟರು. ಹೀಗಾಗಿ, ಸುಮಾರು ಒಂದು ಗಂಟೆ ಕಾಲ ಆರೋಗ್ಯಇಲಾಖೆ ಕುರಿತು ಸುದೀರ್ಘ‌ ಚರ್ಚೆನಡೆಯಿತು. ಈ ವೇಳೆ ಸದಸ್ಯರ ಪ್ರಶ್ನೆಗಳಿಗೆಉತ್ತರಿಸಲಾಗದೇ ತಡಬಡಾಯಿಸಿದ ಡಿಎಚ್‌ಒಗೆ ಕ್ಲಾಸ್‌ ತೆಗೆದುಕೊಂಡರು.

ಸದಸ್ಯೆ ಶೋಭಾ ಮೇಟಿ ಮಾತನಾಡಿ, ಹಮ್ಮಿಗಿಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ನೀಡಿದ್ದರೂ ಅದು ಮುಂಡರಗಿಯಲ್ಲೇ ಇರುತ್ತದೆ. ಎರಡು ವರ್ಷಗಳಿಂದ ವಿಷಯ ಪ್ರಸ್ತಾಪಿಸಿದರೂ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. 108 ಚಾಲಕನಿಗೆ ಹಮ್ಮಿಗಿಯಲ್ಲಿಕೆಲಸ ಮಾಡುವುದು ಇಷ್ಟವಿಲ್ಲದಿರುವುದೇ ಸಮಸ್ಯೆಗೆ ಕಾರಣ ಎಂದು ಗಮನ ಸೆಳೆದರು.

ಅದಕ್ಕೆ ಧ್ವನಿಗೂಡಿಸಿ ಎಸ್‌.ಪಿ.ಬಳಿಗಾರ, ಸಿದ್ದು ಪಾಟೀಲ, ಅಂತಹ ಚಾಲಕನನ್ನುಹೊರಗುತ್ತಿಗೆ ಸೇವೆಯಿಂದ ವಜಾಗೊಳಿಸಿ,ಸೇವೆಗೆ ಹಾಜರಾಗಿದ್ದರೂ, ವೇತನ ಬಿಡುಗಡೆ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಕೋವಿಡ್‌ ಸಂದರ್ಭದಲ್ಲಿ ಎಲ್ಲಆ್ಯಂಬುಲೆನ್ಸ್‌ಗಳನ್ನು ವಿವಿಧೆಡೆ ನಿಯೋಜಿಸಿತ್ತು.ಈಗ ಸೋಂಕು ಕಡಿಮೆಯಾಗಿ ದ್ದರಿಂದ ಅವುಗಳನ್ನು ಮೂಲ ಸ್ಥಾನಕ್ಕೆ ಕಳುಹಿಸುವಂತೆಸೂಚಿಸಿದರು.

ಶಿಗ್ಲಿ ಜಿಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಯ ಗೃಹಗಳನ್ನುತಮ್ಮ ಅನುದಾನದಲ್ಲಿ ದುರಸ್ತಿಗೊಳಿಸಲಾಗಿದೆ.ಆದರೆ, ಅದಕ್ಕೆ ಜಿಲ್ಲಾ ಆರೋಗ್ಯ ಇಲಾಖೆಎಂದು ಬೋರ್ಡ್‌ ಮಾತ್ರ ಬರೆದಿರುವುದುಭ್ರಷ್ಟಾಚಾರದ ವಾಸನೆ ಕಂಡು ಬರುತ್ತದೆ ಎಂದು ಆರೋಪಿಸಿದರು.

ಅದಕ್ಕೆ ಆರೋಗ್ಯಾಧಿಕಾರಿಗಳು ಸಮರ್ಪಕ ಉತ್ತರ ನೀಡದೇ, ಪ್ರತ್ಯೇಕ ಎರಡುಯೋಜನೆಯಡಿ 1 ಲಕ್ಷ ರೂ. ಹಾಗೂ 6 ಲಕ್ಷರೂ. ಮೊತ್ತದಲ್ಲಿ ಕಾಮಗಾರಿಯನ್ನು ನಿರ್ಮಿತಿಕೇಂದ್ರಕ್ಕೆ ವಹಿಸಲಾಗಿದೆ. ಹೆಚ್ಚಿನ ಮಾಹಿತಿಇನ್ನಷ್ಟೆ ಪಡೆಯುವುದಾಗಿ ಉತ್ತರಿಸಿದರು.ಇದರಿಂದ ಕೆರಳಿದ ಸದಸ್ಯರು, ಆರೋಗ್ಯಇಲಾಖೆ ಅನುದಾನ ನೀಡುವುದಾದರೆ,ಅದರ ಮೇಲುಸ್ತುವಾರಿ ನೋಡಿಕೊಳ್ಳಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ1 ಕೋಟಿ ರೂ. ಮೊತ್ತದಲ್ಲಿ ಅತ್ಯಾಧುನಿಕ ಆ್ಯಂಬುಲೆನ್ಸ್‌ಗಳ ಪೂರೈಕೆ ಬಗ್ಗೆಯೂ ಸದಸ್ಯರಗಮನಕ್ಕೂ ತರುವುದಿಲ್ಲ. ನಾವು ಅಮೆರಿಕದಿಂದ ಬರೋದಿಲ್ಲ. ಜಿಪಂನಲ್ಲೇ ಇರುತ್ತೇವೆ. ಬಂದು ಮಾಹಿತಿ ನೀಡಲು ಸಮಸ್ಯೆ ಏನು ಎಂದು ಜಿಪಂ ಅಧ್ಯಕ್ಷ ನಾಡಗೌಡ್ರ ಛಾಟಿ ಬೀಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ನಿರ್ಮಿತಿ ಕೇಂದ್ರದ ಶಿರೋಳ, ಕೆಲ ಪಿಎಚ್‌ಸಿಗಳಿಗೆ 6 ಲಕ್ಷ ರೂ. ಹಾಗೂ ಇನ್ನೂ ಕೆಲ ಆರೋಗ್ಯಕೇಂದ್ರಗಳಿಗೆ 1 ಲಕ್ಷ ರೂ. ಮಂಜೂರಾಗಿದೆಎಂದು ಕಾಮಗಾರಿಯನ್ನು ವಿವರಿಸಿ, ಚರ್ಚೆಗೆ ತೆರೆ ಎಳೆದರು.

ಡಿಡಿಪಿಐ ಬಸವಲಿಂಗಪ್ಪ ಮಾತನಾಡಿ,

ಜನೆವರಿಯಿಂದ 6, 7, 8 ನೇ ತರಗತಿವಿದ್ಯಾರ್ಥಿಗಳಿಗೆ ವಿದ್ಯಾಗಮ, 9 ಮತ್ತು 10ನೇ ತರಗತಿಗಳು ಆರಂಭವಾಗಿವೆ. ಜೂನ್‌16 ರಿಂದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಗಳನ್ನುನಡೆಸಲು ಪೂರ್ವಸಿದ್ಧತೆ ಆರಂಭವಾಗಿದೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಫಲಿತಾಂಶ ಸುಧಾರಣೆಗಾಗಿ ತೆಗೆದುಕೊಂಡಿರುವ ಕ್ರಮಗಳ ಕುರಿತು ಹಾಗೂಶಾಲೆಯ ಅಂಗನವಾಡಿಗಳಲ್ಲಿ ರಾತ್ರಿ ಅನೈತಿಕಚಟುವಟಿಕೆಗಳನ್ನು ತಪ್ಪಿಸಲು ಅದಕ್ಕೆ ಪೊಲೀಸ್‌ಗಸ್ತು ವ್ಯವಸ್ಥೆ ಮಾಡಬೇಕು ಎಂದು ಸದಸ್ಯರು ಗಮನ ಸೆಳೆದರು.

ಬಿಂಕದಕಟ್ಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 1.45 ಕೋಟಿ ರೂ. ವೆಚ್ಚದಲ್ಲಿ ಸೋಲಾರಅಳವಡಿಸಲಾಗಿದ್ದು, ಅವುಗಳು ಸರಿಯಾಗಿಕಾರ್ಯನಿರ್ವಹಿಸುತ್ತಿಲ್ಲ ಎಂದು ಜಿಪಂ ಸದಸ್ಯೆ ಶಕುಂತಲಾ ಮೂಲಿಮನಿ ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸಭೆಯ ಸದಸ್ಯರೆಲ್ಲರೂ ಆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸುವುದರೊಂದಿಗೆಮುಂಗಡ ಠೇವಣಿಯನ್ನು ಮುಟ್ಟುಗೋಲುಹಾಕಿಕೊಳ್ಳುವ ಮೂಲಕ ಅಳವಡಿಸಿದಸೋಲಾರ ದೀಪಗಳ ನಿರ್ವಹಣೆಗೆ ಪ್ರತ್ಯೇಕಟೆಂಡರ್‌ ಕೈಗೊಳ್ಳುವಂತೆ ತಿಳಿಸಿದರು.ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್‌.ಮಾತನಾಡಿ, ರೈತರಿಗೆಪರಿಹಾರ ವಿತರಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ಹಿಂಗಾರು ಕಡಲೆ ಖರೀದಿಗಾಗಿ ಖರೀದಿ ಕೇಂದ್ರದ ನೋಂದಣಿಕಾರ್ಯ ಫೆ. 15 ರಿಂದ ಆರಂಭವಾಗಲಿದ್ದು,ಪ್ರತಿ ಕ್ವಿಂಟಲ್‌ ಕಡಲೆಗೆ 5,110 ರೂ. ಅನ್ನು ಸರ್ಕಾರ ಬೆಂಬಲ ಬೆಲೆಯಾಗಿ ನೀಡಿಖರೀದಿಸಲಿದೆ. ಪ್ರತಿ ರೈತರಿಂದ 15 ಕ್ವಿಂಟಲ್‌ ಕಡಲೆ ಖರೀದಿಸಲಾಗುವುದು ಎಂದರು. ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಡಿಗದಗ ಜಿಲ್ಲೆಗೆ ಮೆಣಸಿನಕಾಯಿ ಬೆಳೆಯನ್ನು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ 20 ಸಂಸ್ಕರಣಾ ಘಟಕಗಳನ್ನು ತೆರೆಯಲು ಅವಕಾಶವಿದೆ. ಪ್ರತಿ ಯುನಿಟ್‌ಗೆ 10 ಲಕ್ಷ ರೂ. ಸಹಾಯಧನವನ್ನು ಸರ್ಕಾರ ಒದಗಿಸಲಿದೆ ಎಂದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಮಂಜುಳಾ ಹುಲ್ಲಣ್ಣವರ, ಜಿಪಂ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು, ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

4-mangaluru

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

pavitra lokesh and naresh starer matte maduve releasing on June 9

ಮದುವೆ ಓಡಾಟದಲ್ಲಿ ಪವಿತ್ರ-ನರೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

ಮುಂಡರಗಿ: ದ್ವಿ ಚಕ್ರ ವಾಹನ-ಬಸ್‌ ಅಪಘಾತ; ಸವಾರ ಸಾವು

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಹಾಲಿನ ದರ ಕಡಿತಕ್ಕೆ ಕಿಡಿ

ಹಾಲಿನ ದರ ಕಡಿತಕ್ಕೆ ಕಿಡಿ

tdy-13ಹಾಲು-ನೀರು ಹಗರಣ ಸಿಬಿಐ ತನಿಖೆಗೆ?

ಹಾಲು-ನೀರು ಹಗರಣ ಸಿಬಿಐ ತನಿಖೆಗೆ?