ಸರ್ಕಾರಿ ಶಾಲೆಯಲ್ಲಿ ಕೈತೋಟ-ಉದ್ಯಾನ ನಿರ್ಮಿಸಿ


Team Udayavani, Feb 27, 2021, 5:08 PM IST

ಸರ್ಕಾರಿ ಶಾಲೆಯಲ್ಲಿ ಕೈತೋಟ-ಉದ್ಯಾನ ನಿರ್ಮಿಸಿ

ಗದಗ: ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಸಮನ್ವಯತೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಸುಂದರ ಉದ್ಯಾನವನ ನಿರ್ಮಾಣ ಮಾಡಬೇಕು. ಮುಂಬರುವ ಮಳೆಗಾಲಕ್ಕೂ ಮುನ್ನವೇ ಅರಣ್ಯ ಇಲಾಖೆಯಿಂದ ಸಸಿ ನೆಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ನೀರಿನ ಸೌಕರ್ಯವಿರುವ ಹಾಗೂ ಕಾಂಪೌಂಡ ಇರುವ ಸರ್ಕಾರಿ ಶಾಲಾ ಕಟ್ಟಡಗಳ ಆವರಣದಲ್ಲಿ ಉದ್ಯಾನವನ ಹಾಗೂ ಕೈತೋಟಗಳನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಉಂದರವಾಗಿ ನಿರ್ಮಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕ್ರಿಯಾ ಯೋಜನೆಗಳ ಕುರಿತು ಸ್ಥಾಯಿ ಸಮಿತಿಗೆ ಮಾಹಿತಿ ನೀಡಬೇಕು. ನರೇಗಾ ಯೋಜನೆಯಡಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕೆಂದು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅ ಧಿಕಾರಿಗಳು ಆಸಕ್ತಿ ವಹಿಸಿ ಯಶಸ್ಸಿಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶದ ಅಗತ್ಯವಿರುವಲ್ಲಿಚೆಕ್‌ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ರಕ್ಷಣೆಗೆ ಮುಂದಾಗಬೇಕು. ಹಾಗೂ ಅನಾವಶ್ಯಕ ಪಲವತ್ತಾದ ಮಣ್ಣು ಸವಕಳಿಯನ್ನು ತಡೆಯಲು ಚೆಕ್‌ ಡ್ಯಾಂ ಗಳು ಸಹಕಾರಿಯಾಗಿವೆ. ರಸ್ತೆ ಕಾಮಗಾರಿಗೆ ಅಪಾರ ನೀಡಲಾಗಿದ್ದರು ಕೂಡ ಕಳಪೆ ರಸ್ತೆಗಳು ನಿರ್ಮಾಣಗೊಂಡಿವೆ. ಇದರ ಕುರಿತು ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಎಲ್ಲಾ ಇಲಾಖಾ ಅಧಿಕಾರಿಗಳು ಯೋಜನೆ ಕೈಗೊಂಡ ಕಾರ್ಯಗಳ ಬಗ್ಗೆ ಆಯಾ ಭಾಗದ ಜಿಪಂ ಸದಸ್ಯರ ಗಮನಕ್ಕೆ ತರಬೇಕು. ಶಿಷ್ಠಾಚಾರದನ್ವಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ 435 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದೆ. ಅವುಗಳಲ್ಲಿ 16 ದುರಸ್ತಿಯಲ್ಲಿವೆ ಎಂದು ಮಾಹಿತಿ ಒದಗಿಸಿದರು. ಜಿಲ್ಲೆಯಲ್ಲಿ ಗ್ರಾಮಗಳ ಪ್ರತಿ ಮನೆ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಜಲಜೀವನ್‌ ಮಿಷನ್‌ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್‌ ಎಸ್‌. ಮಾತನಾಡಿ, ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲೆ, ಅಂಗನವಾಡಿ ಮತ್ತು ಇತರೆ ಕಚೇರಿಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳವಂತೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಅಧಿಕಾರಿಗಳು ಮುಂದಾಗುವಂತೆ ಸೂಚಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಲ್ಲಿ ಪ್ರೇರಕ ಹಾಗೂ ಉಪ ಪ್ರೇರಕರಾಗಿ ಕೆಲಸ ಮಾಡಿದವರನ್ನು ಜಿಲ್ಲಾ ಪಂಚಾಯತಿಯಲ್ಲಿ ಗುತ್ತಿಗೆ ಆದಾರದಲ್ಲಿ ಕೆಲಸ ನೀಡುವ ಸಂದರ್ಭದಲ್ಲಿ ಅವರಿಗೆ ಆದ್ಯತೆ ನೀಡಬೇಕೆಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅವರು ಸಿಇಒ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಪ್ರಗತಿಯಕುರಿತು ಚರ್ಚೆ ನಡೆಸಿದರು. ಉಪಾಧ್ಯಕ್ಷೆ ಮಂಜುಳಾಹುಲ್ಲಣ್ಣವರ, ಸಿಇಒ ಭರತ ಎಸ್‌. ವೇದಿಕೆ ಮೇಲೆ ಉಪಸ್ಥಿತರಿದ್ದರು. ಸದಸ್ಯ ವಾಸಣ್ಣ ಕುರಡಗಿ, ಮಲ್ಲವ್ವ  ಬಿಚ್ಚಾರ, ಪಡಿಯಪ್ಪ ಪೂಜಾರ, ರೇಣುಕಾ ಅವರಾದಿ, ರೇಖಾ ಅಳವಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

5 ವರ್ಷಗಳಾದರೂ ಸಿಗದ ಮಾಹಿತಿ  :

ಅಧಿಕಾರವಧಿ ಮುಗಿಯುತ್ತಿದ್ದರೂ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿರುವ ಯೋಜನೆಗಳ ಮಾಹಿತಿಯನ್ನು ಜಿಪಂ ಸದಸ್ಯರಿಗೆ ನೀಡುತ್ತಿಲ್ಲ ಎಂದು ಸದಸ್ಯರು ಧ್ವನಿ ಎತ್ತಿದರು. ಅದಕ್ಕೆ ಧ್ವನಿಗೂಡಿಸಿದ ಅಧ್ಯಕ್ಷ ಈರಪ್ಪ ನಾಡಗೌಡರ, ಆದಷ್ಟು ಬೇಗ ಸದಸ್ಯಯರು ಕೋರುವ ಮಾಹಿತಿ ಒದಗಿಸುವಂತೆ ಆದೇಶಿಸಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.