ಕುತೂಹಲ ಕೆರಳಿಸಿದ ಚುನಾವಣಾ ಆಯೋಗ

ಜಿಪಂ 24 ಕ್ಷೇತ್ರಗಳು!7 ತಾಪಂಗಳ 79 ಮೀಸಲು ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪ್ರಾಬಲ್ಯ

Team Udayavani, May 2, 2021, 7:26 PM IST

jyutut6

ಗದಗ: ಇತ್ತೀಚೆಗಷ್ಟೇ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಸರಕಾರ ಎಲ್ಲ ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿಕೆ ಮಾಡಿ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಚುನಾವಣಾ ಆಯೋಗ ಜಿಪಂ-ತಾಪಂ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದೆ. ಇದರಿಂದ ಜಿಲ್ಲೆಯ ಚುನಾವಣಾ ಸ್ಪರ್ಧಾಕಾಂಕ್ಷಿಗಳು ಮತ್ತು ಸ್ಥಳೀಯ ರಾಜಕೀಯ ವಲಯಲ್ಲಿ ಕುತೂಹಲ ಕೆರಳಿಸಿದೆ.

ಎರಡು ತಿಂಗಳ ಹಿಂದೆಯೇ ಚುನಾವಣಾ ಆಯೋಗ ಜಿಪಂ, ತಾಪಂ ಚುನಾವಣೆಯ ಸಿದ್ಧತೆ ಆರಂಭಿಸಿತ್ತು. ಜಿಲ್ಲೆಯ ಜನಸಂಖ್ಯೆಗೆ ಅನುಸಾರವಾಗಿ ಕ್ಷೇತ್ರ ಪುನರ್‌ ವಿಂಗಡಣೆ ಪೂರ್ಣಗೊಳಿಸಲಾಗಿದೆ. ಜತೆಗೆ ಜಿಪಂನ ಐವರು ಸದಸ್ಯ ಬಲ ಹೆಚ್ಚಿಸಿದ್ದು, 19 ಸದಸ್ಯರಿಂದ 24ಕ್ಕೆ ಏರಿಕೆಯಾಗಿದೆ.

ನರಗುಂದ-ಗಜೇಂದ್ರಗಡ ತಾಲೂಕುಗಳನ್ನು ಹೊರತುಪಡಿಸಿ, ಇನ್ನುಳಿದ 5 ತಾಲೂಕುಗಳಿಗೆ ತಲಾ ಒಂದು ಜಿಪಂ ಕ್ಷೇತ್ರ ಹೆಚ್ಚಿಸಿದೆ. ಕೇತ್ರ ಪುನರ್‌ ವಿಂಗಡಣೆ ಬಳಿಕ ಗದಗ 15, ಮುಂಡರಗಿ 9, ನರಗುಂದ, ರೋಣ, ಗಜೇಂದ್ರಗಡ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿಗಳು ತಲಾ 11 ಸದಸ್ಯ ಬಲ ಹೊಂದಿವೆ. ಈ ಮೂಲಕ ಹಿಂದೆ ಇದ್ದ 79 ತಾಪಂ ಕ್ಷೇತ್ರಗಳಲ್ಲೇ ಎಲ್ಲ 7 ತಾಲೂಕುಗಳನ್ನು ಸರಿದೂಗಿಸಲಾಗಿದೆ.

ಮೀಸಲು ಕ್ಷೇತ್ರಗಳಲ್ಲಿ ನಾರಿಯರು: ಕ್ಷೇತ್ರ ಪುನರ್‌ ವಿಂಗಡಣೆ ಪೂರ್ಣಗೊಳಿಸಿರುವ ಬೆನ್ನಲ್ಲೇ ಇದೀಗ ರಾಜ್ಯ ಚುನಾವಣಾ ಆಯೋಗ ಜಿಪಂ, ತಾಪಂ ಒಟ್ಟು ಸ್ಥಾನಗಳನ್ನು ಸಾಮಾಜಿಕ ಮೀಸಲಾತಿ ಅನ್ವಯ ವರ್ಗೀಕರಿಸಿದೆ. ಪಂಚಾಯತ್‌ನ ಒಟ್ಟು ಸದಸ್ಯ ಸಂಖ್ಯೆ ಆಧರಿಸಿ ಮಹಿಳೆಯರಿಗೆ ಶೇ.50 ಸ್ಥಾನಗಳನ್ನು ನಿಗದಿಪಡಿಸಿದೆ. ಜತೆಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ “ಅ’, ಹಿಂದಳಿದ ವರ್ಗ “ಬ’ ಮತ್ತು ಸಾಮಾನ್ಯ ವರ್ಗದ ಸ್ಥಾನಗಳನ್ನು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಿದೆ. ಜಿಪಂ ಒಟ್ಟು 24 ಸ್ಥಾನಗಳಲ್ಲಿ 12 ಮಹಿಳೆಯರಿಗೆ ಮೀಸಲು ಕಲ್ಪಿಸಿದೆ.

ಅನುಸೂಚಿತ ಜಾತಿ 4(2), ಅನುಸೂಚಿತ ಪಂಗಡ 2(1), ಹಿಂದುಳಿದ ವರ್ಗ “ಅ’ 5(2), ಹಿಂದಳಿದ ವರ್ಗ “ಬ’ 1(1) ಮತ್ತು 12(6) ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೆ ನಿಗದಿಗೊಳಿಸಿದೆ. ಜಿಲ್ಲೆಯ 7 ತಾಪಂನ ಒಟ್ಟು 79 ಸ್ಥಾನಗಳಲ್ಲಿ 43 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಜಾತಿಗೆ ಮೀಸಲಿರುವ 15 ಸ್ಥಾನಗಳಲ್ಲಿ 10, ಅನುಸೂಚಿತ ಪಂಗಡಕ್ಕೆ ಸಿಕ್ಕಿರುವ 7 ಕ್ಷೇತ್ರಗಳು ಮಹಿಳಾ ಮೀಸಲಾಗಿವೆ. ಹಿಂದುಳಿದ ವರ್ಗ ಮೀಸಲು ಕ್ಷೇತ್ರದ 11ರಲ್ಲಿ 10 ಮಹಿಳೆಯರ ಪಾಲಾಗಿರುವುದು ವಿಶೇಷ. ಆದರೆ ಕ್ಷೇತ್ರವಾರು ಮೀಸಲಾತಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.