ವಿದ್ಯಾರ್ಥಿಗಳ ಪಾಠಕ್ಕೂ ನೆರೆ ಅಡ್ಡಿ

ಪ್ರವಾಹಕ್ಕೆ ಕೊಚ್ಚಿ ಹೋಗಿವೆ ಪಠ್ಯಪುಸ್ತಕ•50 ಸಾವಿರ ಪುಸ್ತಕಕ್ಕೆ ಬೇಡಿಕೆ ಸಲ್ಲಿಕೆ

Team Udayavani, Aug 29, 2019, 1:26 PM IST

29-Agust-27

ಗದಗ: ಹೊಳೆಹಡಗಲಿ ನವ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರಿಡಾರ್‌ನಲ್ಲೇ ಕುಳಿತು ಪಾಠ ಆಲಿಸುತ್ತಿರುವ ಮಕ್ಕಳು ಮತ್ತು ನೆರೆಯಿಂದ ಹಾನಿಗೊಳಗಾದ ವಸ್ತುಗಳನ್ನು ಹೊರಗೆ ಹಾಕಲಾಗಿದೆ.

ವೀರೇಂದ್ರ ನಾಗಲದಿನ್ನಿ
ಗದಗ:
ಮಲಪ್ರಭೆ ಹಾಗೂ ಬೆಣ್ಣಿಹಳ್ಳ ಸೃಷ್ಟಿಸಿದ್ದ ಪ್ರವಾಹ ನರಗುಂದ ಮತ್ತು ರೋಣ ತಾಲೂಕಿನ ವಿವಿಧ ಗ್ರಾಮಗಳ ಜನರ ಜೀವನದ ಮೇಲಷ್ಟೇ ಪರಿಣಾಮ ಬೀರಿಲ್ಲ. ಜೊತೆಗೆ ಈ ಭಾಗದ ಶಾಲಾ ಮಕ್ಕಳ ಶೈಕ್ಷಣಿಕ ಹಕ್ಕನ್ನೇ ಕಸಿದುಕೊಂಡಿದೆ. ವಿವಿಧೆಡೆ ಪ್ರವಾಹದಲ್ಲಿ ಮುಳುಗಡೆಯಾಗಿದ್ದ ಶಾಲೆಗಳು ಇಂದೋ-ನಾಳೆಯೋ ಬೀಳುವ ಹಂತಕ್ಕೆ ತಲುಪಿದ್ದು, ಸಾವಿರಾರು ವಿದ್ಯಾರ್ಥಿಗಳನ್ನು ಬೀದಿಗೆ ತಂದು ನಿಲ್ಲಿಸಿದೆ.

ಜಿಲ್ಲೆಯ ನರಗುಂದ ತಾಲೂಕಿನ 8 ಮತ್ತು ರೋಣ ತಾಲೂಕಿನ 16 ಗ್ರಾಮಗಳಲ್ಲಿ ಮಲಪ್ರಭಾ ನದಿ ಹಾಗೂ ಬೆಣ್ಣಿಹಳ್ಳದಿಂದ ಉಂಟಾಗಿದ್ದ ನೆರೆಯಿಂದ ಆದ ಹಾನಿ ಅಷ್ಟಿಷ್ಟಲ್ಲ. ಜಿಲ್ಲೆಯ 23 ಗ್ರಾಮಗಳ ನೂರಾರು ಮನೆಗಳೊಂದಿಗೆ ಆಯಾ ಗ್ರಾಮ ಶಾಲಾ ಕೊಠಡಿಗಳು ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಜನರನ್ನು ನವ ಗ್ರಾಮಗಳಿಗೆ ಸ್ಥಳಾಂತರಿಸಲಾಗಿದೆ. ಗ್ರಾಮಸ್ಥರೊಂದಿಗೆ ಶಾಲೆಗಳೂ ಸ್ಥಳಾಂತರವಾಗಿದ್ದರೂ ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಟ್ಟಡಗಳಿಲ್ಲ. ಹೀಗಾಗಿ ಒಂದೇ ತರಗತಿ ಕೊಠಡಿಯಲ್ಲಿ ಎರೆಡು-ಮೂರು ತರಗತಿಗಳು ನಡೆದರೆ, ಇನ್ನಿತರೆ ಶಾಲೆಗಳಲ್ಲಿ ಮಕ್ಕಳು ಕಾರಿಡಾರ್‌ನಲ್ಲೇ ಕುಳಿತು ಪಾಠ ಕೇಳುವ ಅನಿವಾರ್ಯತೆ ಸೃಷ್ಟಿಸಿದೆ.

ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ: ಆ ಪೈಕಿ ರೋಣ ತಾಲೂಕಿನ ಕುರುವಿನಕೊಪ್ಪ ನವ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 5ನೇ ತರಗತಿ ವರೆಗೆ ಒಟ್ಟು 27 ವಿದ್ಯಾರ್ಥಿಗಳಿಗೆ ಒಂದೇ ಕೊಠಡಿ. ಅದರಂತೆ ನಿ.ಎಸ್‌. ಬೇಲೇರಿ ಪ್ರೌಢಶಾಲೆಯ 8ರಿಂದ 10ನೇ ತರಗತಿ ವರೆಗೆ 56 ವಿದ್ಯಾರ್ಥಿಗಳಿದ್ದು, ಪ್ರಾಥಮಿಕ ಶಾಲೆಯ 104, ಹೊಳೆಹಡಗಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 89 ವಿದ್ಯಾರ್ಥಿಗಳು ತಲಾ ಎರಡು ಕೊಠಡಿಗಳಲ್ಲಿ ಕಲಿಯುವಂತಾಗಿದೆ.

ಅದರಲ್ಲೂ ಕೆಲ ಶಾಲೆಗಳ ಒಂದು ಕೊಠಡಿಯಲ್ಲೇ ಬಿಸಿಯೂಟದ ಸಾಮಗ್ರಿ, ಸಿಲಿಂಡರ್‌ಗಳನ್ನು ದಾಸ್ತಾನು ಮಾಡಲಾಗಿದೆ. ಮಕ್ಕಳಿಗೆ ನೈಸರ್ಗಿಕ ಕೆರೆಗೆ ಬಯಲೇ ಗತಿ. ಇನ್ನು, ಹೊಳೆಮಣ್ಣೂರು, ಹೊಳೆಆಲೂರು, ಬಸರಕೊಡ ನವ ಗ್ರಾಮಗಳ ಸರಕಾರಿ ಶಾಲೆಗಳ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ.

6 ಸಾವಿರ ಮಕ್ಕಳಿಗಿಲ್ಲ ಪಠ್ಯ ಪುಸ್ತಕ: ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕಿನಲ್ಲಿ ಉಂಟಾಗಿದ್ದ ಪ್ರವಾಹ ಆ ಭಾಗದ ಹೊಲ-ಮನೆ ಸೇರಿದಂತೆ ಸಾವಿರಾರು ಮುದ್ದು ಕಂದಮ್ಮಗಳ ಪಠ್ಯ ಪುಸ್ತಕಗಳೂ ಕೊಚ್ಚಿ ಹೋಗಿವೆ. ಮನೆ ಅಂಗಳದಲ್ಲೇ ನಿಂತಿದ್ದ ಯಮಸ್ವರೂಪಿ ನೆರೆ ನೀರಿನಿಂದ ರಕ್ಷಿಸಿಕೊಂಡರೆ ಸಾಕು ಎಂದು ಮನೆ ಮಂದಿಯೆಲ್ಲ ಇದ್ದ ಸ್ಥಿತಿಯಲ್ಲೇ ಸುರಕ್ಷಿತ ಸ್ಥಾನಕ್ಕೆ ಬಂದಿದ್ದರು. ಹೀಗಾಗಿ ಮನೆಯಲ್ಲಿದ್ದ ದಿನಬಳಕೆ ವಸ್ತುಗಳೊಂದು ಮಕ್ಕಳ ಶಾಲಾ ಪುಸ್ತಕಗಳೂ ಹರಿದು ಹೋಗಿವೆ.

ಆ ಪೈಕಿ ನರಗುಂದ ತಾಲೂಕಿನ 8 ಗ್ರಾಮಗಳ 21 ಸರಕಾರಿ ಪ್ರಾಥಮಿಕ, 3 ಅನುದಾನಿ ಹಾಗೂ 3 ಅನುದಾನ ರಹಿತ ಮತ್ತು ಪ್ರೌಢ ಶಾಲೆಗಳಲ್ಲಿ 3 ಸರಕಾರಿ, 4 ಅನುದಾನಿತ ಶಾಲೆಗಳು ಸೇರಿದಂತೆ 3,997 ಮಕ್ಕಳ ಪುಸ್ತಕಗಳು ಹಾನಿಯಾಗಿವೆ. ರೋಣ ತಾಲೂಕಿನ 16 ಗ್ರಾಮಗಳ 23 ಸರಕಾರಿ ಶಾಲೆಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳು ನೆರೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಕೆಲವರು ಪ್ರವಾಹ ಇಳಿದ ಬಳಿಕ ಮನೆಯಲ್ಲಿ ಅಳಿದುಳಿದ ಪುಸ್ತಕಗಳನ್ನು ತಂದು, ಬಿಸಿಲಿಗಿ ಒಣಗಿಸಿಕೊಂಡಿದ್ದಾರೆ. ಹೀಗಾಗಿ ಶಾಲೆಯ ಬೆರಳೆಣಿಕೆಯಷ್ಟು ಮಕ್ಕಳಲ್ಲಿ ಒಂದೆರಡು ಪಠ್ಯ ಪುಸ್ತಕಗಳಿದ್ದರೆ ಅದೇ ಹೆಚ್ಚು. ಪಠ್ಯ ಪುಸ್ತಕಗಳಿಲ್ಲದ ಮಕ್ಕಳು ಸಹಪಾಠಿಗಳಿಂದ ಪುಸ್ತಕಗಳನ್ನು ಪಡೆದು ಅಧ್ಯಯನ ನಡೆಸುವಂತಾಗಿದೆ. ಪುಸ್ತಕಗಳ ಕೊರತೆಯಿಂದ ತಾವು ಮಾಡುವ ಬೋಧನೆಯೂ ಪರಿಣಾಮಕಾರಿಯಾಗುತ್ತಿಲ್ಲ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಶಿಕ್ಷಕರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.