ಲಕ್ಷ್ಮೇಶ್ವರ ತಾಲೂಕಿಗಿಲ್ಲಸ್ವಾಯತ್ತತೆ

ಸ್ಥಳೀಯರ ಪಾಲಿಗೆ ಇದ್ದೂ ಇಲ್ಲದಂತಾದ ತಾಲೂಕು

Team Udayavani, Sep 28, 2019, 1:44 PM IST

28-Sepctember-17

ವೀರೇಂದ್ರ ನಾಗಲದಿನ್ನಿ
ಗದಗ: ನಮ್ಮ ಕಚೇರಿಯ ದಾಖಲೆಗಳಿಗೆ ರ್ಯಾಪರ್ ಬೇಕು. ಒಂದು ಬಂಡಲ್‌ ಬಿಳಿ ಹಾಳೆ, ಒಂದು ಗುಂಡು ಪಿನ್‌ ಬಾಕ್ಸ್‌ ಹಾಗೂ ಕಚೇರಿ ನಿರ್ವಹಣೆಗೆ ಒಂದಷ್ಟು ಅನುದಾನ ಕೊಡಿ!

ಇದು ಯಾವುದೋ ಖಾಸಗಿ ಸಂಸ್ಥೆ, ಚಾರಿಟೇಬಲ್‌ ಟ್ರಸ್ಟ್‌ನ ಕಥೆಯಲ್ಲ. 2017ರಲ್ಲಿ ಘೋಷಣೆಯಾದ ರಾಜ್ಯದ 49 ಹೊಸ ತಾಲೂಕುಗಳಲ್ಲಿ ಒಂದಾದ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ತಹಶೀಲ್ದಾರ್‌ ಕಚೇರಿಯ ವ್ಯಥೆ. ನೂತನ ತಾಲೂಕಾಗಿ ಅಸ್ಥಿತ್ವಕ್ಕೆ ಬಂದು ಬರೋಬ್ಬರಿ ಎರಡು ವರ್ಷಗಳು ಕಳೆದಿವೆ. ಆದರೆ, ಇಂದಿಗೂ ಎಲ್ಲದಕ್ಕೂ ಶಿರಹಟ್ಟಿ ತಾಲೂಕು ಬಳಿ ಕೈಯೊಡ್ಡುವ ಪರಿಸ್ಥಿತಿ ಇಲ್ಲಿಯದ್ದು. ಲಕ್ಷ್ಮೇಶ್ವರ ಒಂದೇ ಹೋಬಳಿಯೊಂದಿಗೆ ಘೋಷಣೆಯಾಗಿರುವ ಲಕ್ಷ್ಮೇಶ್ವರ ತಾಲೂಕು ನಾಮಕಾವಸ್ತೆ ಎಂಬಂತಿದೆ. ನೂತನ ತಾಲೂಕಾಗಿ ವರ್ಷಗಳು ಕಳೆದರೂ ಪರಿಪೂರ್ಣವಾಗಿ ಹೊಸ ತಾಲೂಕಾಗಿ ರಚನೆಯಾಗಿಲ್ಲ. ಸದ್ಯ ಸಬ್‌ ರೆಜಿಸ್ಟ್ರಾರ್‌, ಉಪಖಜಾನೆ ಹಾಗೂ ಪೊಲೀಸ್‌ ಠಾಣೆ ಹಾಗೂ ಕೋರ್ಟ್‌ ಹಾಗೂ ತಹಶೀಲ್ದಾರ್‌ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

2002ನೇ ಇಸ್ವಿಯ ನಂತರದ ಎಂ.ಆರ್‌., ರೈತರ ಪಹಣಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿ ಹಳೆ ದಾಖಲೆಗಳಲ್ಲಿ ಭಾಗಶಃ ವರ್ಗಾವಣೆಯಾಗಿವೆ. ಇನ್ನುಳಿದಂತೆ ತಾಲೂಕು ಮಟ್ಟದ ಕೃಷಿ ಇಲಾಖೆ, ತೋಟಗಾರಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಲೋಕೋಪಯೋಗಿ ಇಲಾಖೆಯ ಕಚೇರಿಗಳು ಕಾರ್ಯಾರಂಭಿಸಿಲ್ಲ. ಹೀಗಾಗಿ ಪ್ರತಿಯೊಂದಕ್ಕೂ ಸಾರ್ವಜನಿಕರು ಮತ್ತು ಅಧಿಕಾರಿಗಳು ಶಿರಹಟ್ಟಿ ತಾಲೂಕು ಕಚೇರಿಗಳಿಗೆ ಅಲೆದಾಡುವುದು ತಪ್ಪಿಲ್ಲ.

ತಹಶೀಲ್ದಾರ್‌ ಕಚೇರಿಗೆ ಆರ್ಥಿಕ ಸಂಕಷ್ಟ: ಜಿಲ್ಲೆಯ ಹೊಸ ತಾಲೂಕು ಎಂಬ ಗರಿಮೆ ಹೊಂದಿರುವ ಹೊಸ ತಾಲೂಕಿನ ತಹಶೀಲ್ದಾರ್‌ ಕಚೇರಿಗೆ ಆರ್ಥಿಕ ಸಂಕಷ್ಟ ಆವರಿಸಿದೆ. ಹಲವು ತಿಂಗಳಿಂದ ಬಿಎಸ್‌ ಎನ್‌ಎಲ್‌ ಸೇವಾ ಶುಲ್ಕ ಬಾಕಿ ಉಳಿಸಿಕೊಳ್ಳಲಾಗಿದೆ.

ಹೀಗಾಗಿ ಕಳೆದ ಎರಡ್ಮೂರು ತಿಂಗಳಿಂದ ಬಿಎಸ್‌ಎನ್‌ ಎಲ್‌ ದೂರವಾಣಿ ಮತ್ತು ಇಂಟರ್‌ ನೆಟ್‌ ಸೇವೆ ಕಡಿತಗೊಳಿಸಲಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಮುಖ್ಯಕಚೇರಿಯಿಂದ ಎಲ್ಲವೂ ಇ-ಮೇಲ್‌ ಮೂಲಕವೇ ಆದೇಶಗಳು ಬರುತ್ತವೆ. ಹಲವು ಕೆಲಸಕಾರ್ಯಗಳು, ಅರ್ಜಿಗಳ ವಿಲೇವಾರಿಗೆ ಇಂಟರ್‌ ನೆಟ್‌ ಬೇಕೇಬೇಕು. ಹೀಗಾಗಿ ಇಲ್ಲಿನ ತಮ್ಮ ವೈಯಕ್ತಿಕ ಮೊಬೈಲ್‌ಗ‌ಳಿಂದ ಹಾಟ್‌ಸ್ಪಾಟ್‌ ಮೂಲಕ ಇಂಟರ್‌ ನೆಟ್‌ ಬಳಸಿಕೊಳ್ಳುತ್ತಿದ್ದೇವೆ. ಸದ್ಯ ಹಳೇ ಎಪಿಎಂಸಿ ಕಟ್ಟಡದಲ್ಲಿ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಮಳೆ ಬಂದರೆ ಛಾವಣಿ ಸೋರುತ್ತಿದೆ. ಇದರ ಮಧ್ಯೆಯೇ ಕೆಲಸ ಮಾಡುವಂತಾಗಿದೆ ಎಂದು ಸ್ಥಳೀಯ ಸಿಬ್ಬಂದಿ ಅಸಹಾಯಕತೆ ತೋಡಿಕೊಂಡರು.

ನೂತನ ತಾಲೂಕು ಆಗಿ ಅಸ್ಥಿತ್ವಕ್ಕೆ ಬಂದ ಬಳಿಕ ಈ ವರೆಗೆ 15 ಲಕ್ಷ ಮಾತ್ರ ಬಿಡುಗಡೆಯಾಗಿದೆ. ತಾಲೂಕು ಘೋಷಣೆಯಾಗುತ್ತಿದ್ದಂತೆ ಸರಕಾರದಿಂದ 10 ಲಕ್ಷ ರೂ. ಮಂಜೂರಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಜಿಲ್ಲಾಡಳಿತದಿಂದ 5 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಇದೇ ಅನುದಾನದಲ್ಲಿ ತಲಾ ಎರಡು ಕಂಪ್ಯೂಟರ್‌ ಹಾಗೂ ಪ್ರಿಂಟರ್‌ಗಳನ್ನು ಖರೀದಿಸಿದ್ದು, ಕಚೇರಿ ನಿರ್ವಹಣೆಗೆ ಬಳಸಿಕೊಳ್ಳಲಾಗುತ್ತಿದೆ. ಅದನ್ನೂ ಶಿರಹಟ್ಟಿ ತಹಶೀಲ್ದಾರರ ಖಾತೆಗೆ ಮೂಲಕ ವರ್ಗಾಯಿಸಿಕೊಳ್ಳಲಾಗಿದೆ. ನೇರವಾಗಿ ಅನುದಾನ ಪಡೆಯುವ ಸ್ವತಂತ್ರವೂ ಹೊಸ ತಾಲೂಕುಗಳಿಗಿಲ್ಲ. ಲಕ್ಷ್ಮೇಶ್ವರ ಕಚೇರಿಗೆ ಏನೇ ಬೇಕಿದ್ದರೂ ಶಿರಹಟ್ಟಿ ತಹಶೀಲ್ದಾರರಲ್ಲಿ ಅರಿಕೆ ಮಾಡಿಕೊಳ್ಳುವುದು ಇಲ್ಲಿನ ಅನಿವಾರ್ಯತೆ ಹಿಡಿದ ಕನ್ನಡಿ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.