ರೋಗ ನಿರೋಧಕ ಸೋನಾ ಮಸೂರಿ ಭತ್ತ ತಳಿ ಅಭಿವೃದ್ಧಿ

ಗಂಗಾವತಿ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿಗಳ ಸಾಧನೆ

Team Udayavani, Sep 14, 2019, 11:04 AM IST

14-Spectember-2

ಗಂಗಾವತಿ: ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ಧಿಪಡಿಸಿದ ಸುಧಾರಿತ ಸೋನಾ ಮಸೂರಿ (ಆರ್‌.ಪಿ.ಬಯೋ-226) ಭತ್ತದ ಬೀಜದ ತಳಿ

ಕೆ.ನಿಂಗಜ್ಜ
ಗಂಗಾವತಿ:
ರೋಗ ನಿರೋಧಕ ಮತ್ತು ಅಧಿಕ ಇಳುವರಿ ನೀಡುವ ಸುಧಾರಿತ ಸೋನಾ ಮಸೂರಿ(ಆರ್‌ಪಿ ಬಯೋ-226) ಭತ್ತದ ತಳಿಯನ್ನು ಗಂಗಾವತಿ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.

ಈ ಮೊದಲು ಕೃಷಿ ಸಂಶೋಧನಾ ಕೇಂದ್ರದಲ್ಲೇ ಅಭಿವೃದ್ಧಿಪಡಿಸಿದ್ದ ಸೋನಾ ಮಸೂರಿ (5204) ಭತ್ತದ ತಳಿ ಇತ್ತೀಚಿನ ದುಂಡಾಣು ಅಂಗಮಾರಿ (ದೋಮಿ, ವೈರಲ್, ಬೆಂಕಿ)ರೋಗ ವ್ಯಾಪಕವಾಗಿತ್ತು. ಕಾಳು ಕಟ್ಟುವ ಸಮಯದಲ್ಲಿ ನಷ್ಟವಾಗುತ್ತಿತ್ತು. ವಿಪರೀತವಾದ ಔಷಧಿ ಸಿಂಪರಣೆಯಿಂದ ಈ ಅಕ್ಕಿಯನ್ನು ಊಟ ಮಾಡದಂತಹ ಸ್ಥಿತಿಯುಂಟಾಗುತ್ತಿತ್ತು. ವಿದೇಶಗಳಿಗೆ ರಫ್ತಾಗುತ್ತಿದ್ದ ಅಕ್ಕಿ ತಿರಸ್ಕಾರಕ್ಕೊಳಗಾಗಿತ್ತು. ಇಡೀ ಭತ್ತದ ಗದ್ದೆ ಒಣಗಿದಂತಾಗಿ ಭತ್ತದ ಕಾಳು ಜೊಳ್ಳಾಗಿ ಇಳುವರಿ ಎಕರೆಗೆ 10-20 ಚೀಲ ಕಡಿಮೆ ಇಳುವರಿ ಬರುತ್ತಿತ್ತು.

ಗಂಗಾವತಿ ಸೋನಾ ಮಸೂರಿ (ಬಿಪಿಟಿ-5204) ಭತ್ತದ ತಳಿಯಲ್ಲಿ ರೋಗ ನಿರೋಧಕ ಶಕ್ತಿ ಇರದೇ ಇರುವುದರಿಂದ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಭಾರತೀಯ ಭತ್ತ ಸಂಶೋಧನಾ ಸಂಸ್ಥೆ ಸಹಕಾರದಲ್ಲಿ ದುಂಡಾಣು ಅಂಗಮಾರಿ ರೋಗಕ್ಕೆ ನಿರೋಧಕತೆ ಹೊಂದಿರುವ ಎಕ್ಸ್‌ಎ21, ಎಕ್ಸ್‌ಎ13 ಮತ್ತು ಎಕ್ಸ್‌ಎ5 ಎಂಬ ಭತ್ತದ ವಂಶವಾಹಿನಿ(ಜಿನ್ಸ್‌)ಯಿಂದ ಸುಧಾರಿತ ಸೋನಾ ಮಸೂರಿ ಭತ್ತದ ತಳಿ ಕಂಡು ಹಿಡಿಯಲಾಗಿದೆ. ನೂತನ ಭತ್ತದ ತಳಿಯಿಂದ ಎಕರೆಗೆ 8-10 ಚೀಲ ಹೆಚ್ಚುವರಿ ಇಳುವರಿ ಬರುತ್ತದೆ. ಕನಿಷ್ಟ ಎರಡು ಬಾರಿ ಔಷಧಿ ಸಿಂಪರಣೆ ಖರ್ಚು (ಸುಮಾರು 12 ಸಾವಿರ ರೂ.) ಉಳಿತಾಯವಾಗಿ ಮೊದಲಿನ ಸೋನಾ ಮಸೂರಿಗಿಂತ 8 ದಿನ ಮುಂಚಿತವಾಗಿ ಕಟಾವಿಗೆ ಬರುತ್ತದೆ.

ಹಳೆಯ ಸೋನಾ ಮಸೂರಿ (ಬಿಪಿಟಿ-5204) ಭತ್ತದ ತಳಿಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣ ವಿನೂತನವಾಗಿ ರೋಗನಿರೋಧಕ ಸುಧಾರಿತ ಸೋನಾ ಮಸೂರಿ(ಆರ್‌.ಪಿ. ಬಯೋ-226)ಭತ್ತದ ತಳಿ ಅಭಿವೃದ್ಧಿಪಡಿಸಲಾಗಿದೆ. ಪ್ರತಿ ಎಕರೆಗೆ 8-10 ಸಾವಿರ ರೂ. ಔಷಧಿ ಸಿಂಪರಣೆ ಖರ್ಚು ಕಡಿಮೆಯಾಗುತ್ತದೆ. 8 ದಿನ ಮುಂಚಿತವಾಗಿ ಕಟಾವಿಗೆ ಬರುತ್ತದೆ. ಈಗಾಗಲೇ ಪ್ರಾಯೋಗಿಕವಾಗಿ ರೈತರ ಗದ್ದೆಯಲ್ಲಿ ಭತ್ತವನ್ನು ಬೆಳೆದು ಲಾಭ ತೋರಿಸಲಾಗಿದೆ.
ಡಾ| ಕೆ. ಮಹಾಂತಶಿವಯೋಗಯ್ಯ ತಳಿ ವಿಜ್ಞಾನಿ (ಭತ್ತ)

ಸುಧಾರಿಯ ಸೋನಾ ಮಸೂರಿ (ಆರ್‌ಪಿ ಬಯೋ-226)ಭತ್ತದ ತಳಿ ನಾಟಿ ಮಾಡುವುದರಿಂದ ರೈತರಿಗೆ ಅಧಿಕ ಲಾಭವಿದೆ. ಪ್ರಾಯೋಗಿಕವಾಗಿ ಕೃಷಿ ಸಂಶೋಧನಾ ಕೇಂದ್ರದ ಫಾರ್ಮ್ನಲ್ಲಿ ನಾಟಿ ಮಾಡಿ ಲಾಭ ತೆಗೆಯಲಾಗಿದ್ದು, ಬೀಜೋತ್ಪಾದನೆ ಕೂಡ ಇಲ್ಲೇ ಮಾಡಲಾಗಿದೆ. ಹಲವಾರು ರೈತರಿಗೆ ನಾಟಿ ಮಾಡಲು ನೂತನ ತಳಿ ಬೀಜಗಳನ್ನು ನೀಡಲಾಗಿದೆ.
• ಡಾ| ಎಸ್‌.ಬಿ. ಗೌಡರ್‌, ಕ್ಷೇತ್ರ ಅಧೀಕ್ಷಕರು ಕೃಷಿ ಸಂಶೋಧನಾ ಕೇಂದ್ರ ಗಂಗಾವತಿ

ಹೊಸ ಸೋನಾ ಮಸೂರಿ ತಳಿಯನ್ನು 5 ಎಕರೆ ಪ್ರದೇಶದಲ್ಲಿ ಕಳೆದ ವರ್ಷ ನಾಟಿ ಮಾಡಲಾಗಿತ್ತು. ಎಕರೆಗೆ 40 ಕ್ವಿಂಟಲ್ವರೆಗೆ ಇಳುವರಿ ಬಂದಿದೆ. ಅನ್ಯ ಭತ್ತದ ತಳಿಗಿಂತಲೂ 8 ದಿನ ಮುಂಚಿತವಾಗಿ ಕಟಾವಿಗೆ ಬಂದಿದೆ. ಖರ್ಚು ಸಹ ಕಡಿಮೆಯಾಗಿದ್ದು, ರೈತರು ಹೊಸ ಸೋನಾ ಮಸೂರಿ ತಳಿ ಭತ್ತದ ನಾಟಿ ಮಾಡಬೇಕು.
• ರುದ್ರಗೌಡ, ಆರ್‌ಪಿ ಬಯೋ-226 ಭತ್ತ ಬೆಳೆದ ರೈತ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.