ಪೋಲಾಗೋದು ನಿಂತಿಲ್ಲ ಕಾಲುವೆ ನೀರು

ಭತ್ತ ಕಟಾವು ಮಾಡಿದ ಗದ್ದೆಗೆ ಬೇಕಿಲ್ಲ ಎರಡು ತಿಂಗಳು ನೀರು

Team Udayavani, Dec 11, 2019, 3:22 PM IST

11-December-17

„ಕೆ.ನಿಂಗಜ್ಜ
ಗಂಗಾವತಿ:
ತುಂಗಭದ್ರಾ ಡ್ಯಾಂ ಎಡದಂಡೆ ಕಾಲುವೆ 27ನೇ ವಿತರಣಾ ಕಾಲುವೆ ವ್ಯಾಪ್ತಿಯ ಭತ್ತದ ಗದ್ದೆ ಕಟಾವು ಕಾರ್ಯ ನಡೆಯುತ್ತಿದ್ದರೂ,ಕಾಲುವೆ ಮೂಲಕ ನೀರು ಪೋಲಾಗುವುದು ನಿಂತಿಲ್ಲ.

ಭತ್ತದ ಕಟಾವು ಕಾರ್ಯ ನಡೆಯುತ್ತಿರುವ ಕಾಲುವೆ ವ್ಯಾಪ್ತಿಯಲ್ಲಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಇತ್ತೀಚೆಗೆ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಿದರೂ ಪ್ರಯೋಜನವಾಗುತ್ತಿಲ್ಲ. ಕಾಲುವೆ ಮೂಲಕ ತುಂಗಭದ್ರಾ ನದಿಗೆ ನೀರು ಹರಿದು ಆಂಧ್ರಪ್ರದೇಶ ಸೇರುತ್ತಿದೆ. ಮಿತವಾಗಿ ಬಳಸಿ ಉಳಿಸಿದ ನೀರನ್ನು ಬೇಸಿಗೆ ಬೆಳೆಗೆ ಬಳಸಲು ನೀರಾವರಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದರೂ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ನಿರ್ಲಕ್ಷéದಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕೊಪ್ಪಳ, ಗಂಗಾವತಿ, ಕಾರಟಗಿ ವ್ಯಾಪ್ತಿಯ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಕಟಾವಿಗೆ 10 ದಿನಗಳ ಮೊದಲು ಭತ್ತದ ಬೆಳೆಗೆ ನೀರು ಹರಿಸುವುದಿಲ್ಲ ಆದರೆ ಕಳೆದ 20 ದಿನಗಳಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಈ ಬಾರಿ ಜಲಾನಯನ ಪ್ರದೇಶದಲ್ಲಿ ಆಗಸ್ಟ್‌ ಕೊನೆಯ ವಾರ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿದೆ. ಸದ್ಯ ಡ್ಯಾಂನಲ್ಲಿ 86  ಎಂಸಿ ನೀರು ಸಂಗ್ರಹವಿದೆ.

ಎಡದಂಡೆ ಕಾಲುವೆ ವ್ಯಾಪ್ತಿಯ 27ನೇ ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಸುಮಾರು 1.60 ಲಕ್ಷ ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದೆ. ಭತ್ತ ಕಟಾವು ಮಾಡಿದ ಗದ್ದೆಗೆ ಇನ್ನೂ ಎರಡು ತಿಂಗಳು ನೀರಿನ ಅವಶ್ಯಕತೆ ಇಲ್ಲ. ಆದರೂ ಅಧಿಕಾರಿಗಳು ಕೆಲ ಒತ್ತಡದಿಂದ ವಿತರಣಾ ಕಾಲುವೆಗಳಲ್ಲಿ ನೀರು ನಿಲ್ಲಿಸದೇ ನದಿ ಮೂಲಕ ಆಂಧ್ರಕ್ಕೆ ನೀರು ಹರಿಸಲಾಗುತ್ತಿದೆ.

ಜನಪ್ರತಿನಿಧಿ ಗಳ ನಿರ್ಲಕ್ಷ್ಯ : ಕಳೆದ ನಾಲ್ಕೈದು ವರ್ಷಗಳಿಂದ ಮುಂಗಾರು ಬೆಳೆ ಮಾತ್ರ ಬೆಳೆದಿರುವ ಅಚ್ಚುಕಟ್ಟು ರೈತರು ಈ ಬಾರಿ ಡ್ಯಾಂ ಭರ್ತಿಯಾಗಿದ್ದರಿಂದ ಬೇಸಿಗೆ ಬೆಳೆ ಬೆಳೆಯಲೂ ಸಿದ್ಧರಾಗುವ ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಪೋಲು ಮಾಡುವ ಷಡ್ಯಂತ್ರ ನಡೆದಿದೆ. ಈ ಭಾಗದ ಶಾಸಕರು-ಸಂಸದರು ಮತ್ತು ಉಸ್ತುವಾರಿ ಸಚಿವರು ಇತ್ತ ಗಮನ ಹರಿಸುತ್ತಿಲ್ಲ.

ರೈತರು ಹೋರಾಟ ನಡೆಸುವ ಸಂದರ್ಭಗಳಲ್ಲಿ ಮಾತ್ರ ಸ್ಪರ್ಧೆಗೆ ಬಿದ್ದವರಂತೆ ಹೇಳಿಕೆ ಕೊಡುವ ಜನಪ್ರತಿನಿಧಿ ಗಳು ಕಳೆದ 25 ದಿನಗಳಿಂದ ನೀರು ವ್ಯರ್ಥವಾಗಿ ಹೋಗುತ್ತಿದ್ದರೂ ಮೌನ ವಹಿಸುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ.

ಬಲದಂಡೆ ಭಾಗದ ಮೇಲ್ಮಟ್ಟದ ಮತ್ತು ಕೆಳಮಟ್ಟದ ಕಾಲುವೆ ನೀರು ಹರಿಸುವ ಕೋಟಾ ಮುಗಿದಿದ್ದರೂ ಅಧಿಕಾರಿಗಳು ನೀರು ಹರಿಸುತ್ತಿದ್ದಾರೆ. ಎಡದಂಡೆ ಕಾಲುವೆಯ 27ನೇ ವಿತರಣಾ ಕಾಲುವೆಗಳ ವ್ಯಾಪ್ತಿಯವರೆಗೆ ಭತ್ತ ಕಟಾವಿಗೆ ಬಂದರೂ ನೀರು ಹರಿಸಲಾಗುತ್ತಿದೆ. ಡ್ಯಾಂನಲ್ಲಿರುವ ನೀರು ಖಾಲಿ ಮಾಡುವ ಮೂಲಕ ಬೇಸಿಗೆ ಬೆಳೆಗೆ ನೀರಿನ ಕೊರತೆಯಾಗುವಂತೆ ಷಡ್ಯಂತ್ರ್ಯ
ಮಾಡಲಾಗುತ್ತಿದೆ. ಭತ್ತದ ಬೆಳೆ ಕೈಗೆ ಬಂದ ಪ್ರದೇಶದಲ್ಲಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಅಚ್ಚಕಟ್ಟು ವ್ಯಾಪ್ತಿಯ ರೈತರು ಪಕ್ಷಭೇದ ಮರೆತು ಹೋರಾಟ ನಡೆಸಬೇಕಾಗುತ್ತದೆ. ತುಂಗಭದ್ರಾ ಯೋಜನೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ನೀರು ಬಂದ್‌ ಮಾಡಿಸಬೇಕು.
ಟಿ.ವಿ. ಸತ್ಯನಾರಾಯಣ,
ಅಧ್ಯಕ್ಷರು, 21ನೇ ವಿತರಣಾ ಕಾಲುವೆ ನೀರು ಬಳಕೆದಾರರ ಸಹಕಾರಿ ಸಂಘ 

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.