ಶಾಲೆಯಲ್ಲಿ ಊಟವಿಲ್ಲದೇ ಮಕ್ಕಳು ಅಸ್ವಸ್ಥ
ಸರ್ಕಾರಿ ಆಸ್ಪತ್ರೆಗೆ 50 ವಿದ್ಯಾರ್ಥಿಗಳು ದಾಖಲು•ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಮನ್ನಿಕೇರಿ
Team Udayavani, Jul 18, 2019, 1:04 PM IST
ಗೋಕಾಕ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ವಿದ್ಯಾರ್ಥಿಗಳ ಆರೋಗ್ಯದ ವಿಚಾರಿಸುತ್ತಿರುವ ಮೂಡಲಗಿ ಬಿಇಒ ಆಜಿತ್ ಮನ್ನಿಕೇರಿ.
ಗೋಕಾಕ: ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಸಿವಿನಿಂದ ತೀವ್ರ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.
ವಡೇರಹಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲೆಗೆ ಬಿಸಿಯೂಟದ ವ್ಯವಸ್ಥೆ ಸ್ಥಳೀಯ ಸ್ತ್ರೀ ಶಕ್ತಿ ಮಹಿಳಾ ಸಂಘಕ್ಕೆ ನೀಡಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸರಿಯಾಗಿ ಬಿಸಿಯೂಟ ನೀಡುವುದೇ ಇಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಶಾಲೆಯಿಂದ ಒಂದೂವರೆ ಕಿ.ಮೀ. ದೂರ ಇರುವ ಗ್ರಾಪಂ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಅಲ್ಲಿ ಯಾರೂ ಇಲ್ಲದರಿಂದ ವಿದ್ಯಾರ್ಥಿಗಳು ಅಲ್ಲಿಂದ ವಾಪಸ್ ಬಂದಿದ್ದಾರೆ. ನಂತರ ಖಾಲಿ ಹೊಟ್ಟೆಯಲ್ಲಿ ಚುರುಮರಿ ತಿಂದು ನೀರು ಕುಡಿದಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ನಂತರ ವಿದ್ಯಾರ್ಥಿಗಳ ಬಳಲಿಕೆಯನ್ನು ಕಂಡು ಸ್ಥಳೀಯರು ಆಂಬ್ಯುಲೆನ್ಸ್ ಹಾಗೂ ಖಾಸಗಿ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವ ವಿದ್ಯಾರ್ಥಿಯನ್ನು ನಗರದ ಕೆಎಲ್ಇ ಆಸ್ಪತ್ರೆಗೆ ಸೇರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ| ಆರ್.ಎಸ್. ಬೆಣಚಿನಮರಡಿ ತಿಳಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ಕೂಡಲೇ ಮೂಡಲಗಿ ತಹಶೀಲ್ದಾರ್ ಮುರಳೀಧರ ತಳ್ಳಿಕೇರಿ, ಉಪತಹಶೀಲ್ದಾರ್ ಎಲ್.ಎಚ್. ಭೋವಿ, ಬಿಇಒಗಳಾದ ಅಜಿತ್ ಮನ್ನಿಕೇರಿ ಹಾಗೂ ಜಿ.ಬಿ. ಬಳಗಾರ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು