ಮೂರು ದಶಕದ ರೈತರ ಕನಸು ಸಾಕಾರ

ರೈತರ ಜಮೀನಿಗೆ ನೀರುಣಿಸಲು ಗೊರೇಬಾಳ ಪಿಕಪ್‌ ಡ್ಯಾಮ್‌ ಸಜ್ಜು •ಜಮೀನಿಗೆ ನೀರು ಬರುವ ನಿರೀಕ್ಷೆಯಲ್ಲಿ ಅನ್ನದಾತರು

Team Udayavani, Sep 16, 2019, 6:32 PM IST

Sepctember-28

ಗೊರೇಬಾಳ: ರೈತರ ಹೊಲಗಳಿಗೆ ನೀರು ಹರಿಸಲು ಸಿದ್ಧಗೊಂಡ ಗೊರೇಬಾಳ ಪಿಕಪ್‌ ಡ್ಯಾಂ ಮತ್ತು ಕಾಲುವೆ.

ಗೊರೇಬಾಳ: ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮದ ಹತ್ತಿರ ನಿರ್ಮಿಸಿದ ಪಿಕಪ್‌ ಡ್ಯಾಂ ಕಾಮಗಾರಿ ಪೂರ್ಣಗೊಂಡಿದ್ದು, ರೈತರ ಹೊಲಗಳಿಗೆ ನೀರುಣಿಸಲು ಮುನ್ನುಡಿ ಬರೆಯುವ ಮೂಲಕ ಮೂರು ದಶಕಗಳ ರೈತರ ಕನಸು ಕೊನೆಗೂ ಸಾಕಾರಗೊಂಡಿದೆ.

ಬೂದಿವಾಳ ಕ್ಯಾಂಪ್‌, ಸಾಲಗುಂದಾ, ಬೂದಿಹಾಳ, ದಢೇಸುಗೂರು, ಉಪ್ಪಳ, ಸೋಮಲಾಪುರ, ಕೆಂಗಲ್, ಕನ್ನಾರಿ, ಬೆಳಗುರ್ಕಿ, ಕಾತರಕಿ ಗ್ರಾಮಗಳ ಸುಮಾರು 4,400 ಎಕರೆ ಜಮೀನಿಗೆ ನೀರು ಒದಗಿಸುವ ಜಲಸಂಪನ್ಮೂಲ ಇಲಾಖೆಯ ಈ ಪಿಕಪ್‌ ಡ್ಯಾಂ ಕಾಮಗಾರಿ ಪ್ರಾರಂಭದಿಂದ ಕುಂಟುತ್ತಲೇ ಸಾಗಿತ್ತು. 1979ರಲ್ಲಿ ಅಣೆಕಟ್ಟು, ಫೀಡರ್‌ ಹಾಗೂ ಚಾನಲ್ಗಳ ನಿರ್ಮಾಣಕ್ಕಾಗಿ 1.92 ಕೋಟಿ ಮಂಜೂರಾಗಿತ್ತು. ಭೂ ಪರಿಹಾರಕ್ಕಾಗಿ 89 ಲಕ್ಷ ರೂ. ಅನುದಾನ ಒದಗಿಸಲಾಗಿತ್ತು. ತುಂಗಭದ್ರಾ ಎಡದಂಡೆ ನಾಲೆಯ 36ನೇ ಉಪ ಕಾಲುವೆಯ ಕೊನೆ ಭಾಗದ ರೈತರಿಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ಕೈಗೊಂಡ ಯೋಜನೆ ಈಗ ಪೂರ್ಣಗೊಂಡಿದೆ. ತಮ್ಮ ಹೊಲಗಳಿಗೆ ನೀರು ಒದಗಬಹುದೆಂಬ ರೈತರ ಕನಸು ಕೊನೆಗೂ ಈಡೇರಿದೆ.

ಉದ್ಘಾಟನೆ ಆದರೂ ಹರಿಯಲಿಲ್ಲ ನೀರು: ಕಳೆದ ಮೂರು ದಶಕದಲ್ಲಿ ಕಾಂಗ್ರೆಸ್‌ ಪಕ್ಷದವರು ಎರಡು ಬಾರಿ ಉದ್ಘಾಟಿಸಿದರೆ, ಜೆಡಿಎಸ್‌ ಶಾಸಕರು ಒಂದು ಬಾರಿ ಉದ್ಘಾಟನೆ ಮಾಡಿದ್ದರು. ಉದ್ಘಾಟನೆಯಾದರೂ ರೈತರ ಹೊಲಗಳಿಗೆ ಮಾತ್ರ ನೀರು ಹರಿದು ಬರಲಿಲ್ಲ. ರಾಜಕೀಯ ನೇತಾರರಿಗೆ ಈ ಪಿಕಪ್‌ ಡ್ಯಾಂ ಅಕ್ಷಯಪಾತ್ರೆಯಂತಾಗಿತ್ತು. ಹೊಸ ಕಾಲುವೆಯಾಗಿದ್ದರಿಂದ ಹಾಗೂ ಕಳಪೆ ಕಾಮಗಾರಿಯಿಂದ ನೀರು ಹರಿಸಿದಾಗ ಕಾಲುವೆಗೆ ಬೋಂಗಾ ಬಿದ್ದು ಹೊಲಗಳಿಗೆ ನೀರು ನುಗ್ಗುತ್ತಿತ್ತು. ಆದರೂ ಬೆನ್ನು ಬಿಡದ ಬೇತಾಳದಂತೆ ಅಧಿಕಾರಿಗಳು ಮತ್ತೆ ಮತ್ತೆ ರಿಪೇರಿ ಮಾಡುತ್ತಾ ಕಾಲ ಕಳೆಯುತ್ತಿದ್ದರು. ಅಭಿವೃದ್ಧಿ ಹೆಸರಲ್ಲಿ ಬಿಡುಗಡೆಯಾದ ಕೋಟಿಗಟ್ಟಲೇ ಹಣ ಸಮರ್ಪಕ ಬಳಸದೇ ವ್ಯಯ ಮಾಡಲಾಗಿತ್ತು ಎಂಬ ಆರೋಪಗಳು ಕೇಳಿಬರುತ್ತಿದ್ದವು.

ಪೂರ್ಣ: ಗೊರೇಬಾಳ ಪಿಕಪ್‌ ಡ್ಯಾಂ ಆಧುನೀಕರಣಕ್ಕೆ ಕಳೆದ ಕಾಂಗ್ರೆಸ್‌ ಅಧಿಕಾರದ ಕೊನೆ ಅವಧಿಯಲ್ಲಿ ಶಾಸಕರಾಗಿದ್ದ ಹಂಪನಗೌಡ ಬಾದರ್ಲಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರ ಮನವೊಲಿಸಿ ಸುಮಾರು 15 ಕೋಟಿ ರೂ. ಮಂಜೂರು ಮಾಡಿಸಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಾಸಕರಾಗಿ ಸಚಿವರಾದ ವೆಂಕಟರಾವ್‌ ನಾಡಗೌಡ ಈ ಯೋಜನೆ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಿದ್ದರು. ಆದರೆ ಕಾಮಗಾರಿಯನ್ನು ತಮ್ಮ ಕಾರ್ಯಕರ್ತರಿಗೆ ನೀಡಿದ್ದರಿಂದ ಕಾಮಗಾರಿ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಸಹ ಕೇಳಿ ಬಂದವು. ಆದರೂ ಈಗ ಕಾಮಗಾರಿ ಪೂರ್ಣಗೊಂಡಿದೆ.

ಹೆಚ್ಚು ಮುತುವರ್ಜಿ ವಹಿಸಿ ಕಾಮಗಾರಿ ಪೂರ್ಣಗೊಳಿಸಿದ ಶಾಸಕ ನಾಡಗೌಡರೇ ಸದ್ಯ ಈ ಭಾಗದ ರೈತರಿಗೆ ಭಗೀರಥರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಾವಿರಾರು ಎಕರೆ ಪ್ರದೇಶಕ್ಕೆ ಈ ಪಿಕಪ್‌ ಡ್ಯಾಂ ನೀರು ಒದಗಿಸುವ ಮೂಲಕ ಅನ್ನದಾತರ ಬದುಕಿಗೆ ಆಶಾಕಿರಣವಾಗಲಿ ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.