ಬೆಂಗಳೂರು ಬಸ್‌ಗಾಗಿ ಪ್ರಯಾಣಿಕರ ಪರದಾಟ-ಪ್ರತಿಭಟನೆ

ಸಿಂಧನೂರು ಸಾರಿಗೆ ಘಟಕ ಅಧಿಕಾರಿಗಳ ನಿರ್ಲಕ್ಷ್ಯ

Team Udayavani, Jun 24, 2019, 11:02 AM IST

24-June-9

ಗೊರೇಬಾಳ: ಬೆಂಗಳೂರಿಗೆ ಬಸ್‌ ಇಲ್ಲದ್ದಕ್ಕೆ ಶನಿವಾರ ರಾತ್ರಿ ಸಿಂಧನೂರು ಬಸ್‌ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದ ಪ್ರಯಾಣಿಕರು.

ಗೊರೇಬಾಳ: ಶನಿವಾರ ರಾತ್ರಿ ಬೆಂಗಳೂರುಗೆ ತೆರಳಲು ಬಸ್‌ಗಳಿಲ್ಲದೇ ಪರದಾಡಿದ ಸುಮಾರು 500ಕ್ಕೂ ಹೆಚ್ಚು ಪ್ರಯಾಣಿಕರು ಆಕ್ರೋಶಗೊಂಡು ಸಿಂಧನೂರು ನಗರದ ಬಸ್‌ ನಿಲ್ದಾಣ ಎದುರುಗಡೆ ದಾವಣಗೆರೆ ಹಾಗೂ ತುಮಕೂರು ಮಾರ್ಗಕ್ಕೆ ತೆರಳುವ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಕಳೆದ ಅನೇಕ ತಿಂಗಳುಗಳಿಂದ ಬೆಂಗಳೂರಿಗೆ ಬಸ್‌ಗಳು ಕಡಿಮೆಯಾಗಿ ಪ್ರಯಾಣಿಕರು ಪರದಾಡು ವಂತಾಗಿದೆ. ಶನಿವಾರ ತಡರಾತ್ರಿ ಬೆಂಗಳೂರಿಗೆ ಗುಳೆ ಹೊರಟ ಜನರು ಸಿಂಧನೂರು ಬಸ್‌ ನಿಲ್ದಾಣದಲ್ಲಿ ಬೆಂಗಳೂರು ಬಸ್‌ಗಾಗಿ ಸಂಜೆ 6 ಗಂಟೆಯಿಂದಲೇ ಕಾಯುತ್ತಾ ಕುಳಿತಿದ್ದರು. ನಂತರ ರಾತ್ರಿ 9 ಗಂಟೆಗೆ ಒಂದು ಬಸ್‌ ಬಂದಿದ್ದು, ಅದರಲ್ಲಿ ಇಕ್ಕಟ್ಟಿನಲ್ಲಿ ತಮ್ಮ ಮಕ್ಕಳೊಂದಿಗೆ ಕುಳಿತು ಕೆಲವರು ಪ್ರಯಾಣ ಬೆಳೆಸಿದ್ದಾರೆ. ತದನಂತರ ಇನ್ನುಳಿದ ಸುಮಾರು 500ಕ್ಕೂ ಹೆಚ್ಚು ಜನರು ಬಸ್‌ ನಿಲ್ದಾಣದ ವಿಚಾರಣಾಧಿಕಾರಿಗಳಿಗೆ ಹಾಗೂ ಡಿಪೋ ಸಿಬ್ಬಂದಿಗೆ ಬೆಂಗಳೂರಿಗೆ ಬಸ್‌ ಬಿಡಲು ಮನವಿ ಮಾಡಿದ್ದಾರೆ. ಆದರೆ ಸಿಬ್ಬಂದಿ ಸಕಾರಾತ್ಮಕವಾಗಿ ಉತ್ತರಿಸಿಲ್ಲ. ಹೀಗಾಗಿ ಆಕ್ರೋಶಗೊಂಡ ಪ್ರಯಾಣಿಕರು ಬಸ್‌ ನಿಲ್ದಾಣ ಎದುರು ದಾವಣಗೆರೆ, ತುಮಕೂರು ಮಾರ್ಗವಾಗಿ ತೆರಳುವ ಬಸ್‌ಗಳನ್ನು ತಡೆದು ನಿರ್ವಾಹಕ ಹಾಗೂ ಚಾಲಕರೊಂದಿಗೆ ವಾಗ್ವಾದ ನಡೆಸಿದರು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ನಗರ ಠಾಣೆ ಪೇದೆಗಳು ಪ್ರಯಾಣಿಕರಿಗೆ ಸಮಜಾಯಿಷಿ ನೀಡಿ ಬಸ್‌ಗಳನ್ನು ಬಿಡುಗಡೆಗೊಳಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯ: ಕಳೆದ ಅನೇಕ ತಿಂಗಳುಗಳಿಂದ ನಗರದಲ್ಲಿ ಪ್ರಯಾಣಿಕರು ಇಂಥದ್ದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್‌ ಓಡಿಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಬಗ್ಗೆ ಅನೇಕರು ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲವೆಂದು ಪ್ರಯಾಣಿಕ ಶಿವಪ್ಪ ದೂರಿದ್ದಾರೆ.

ಶನಿವಾರ ಬೆಂಗಳೂರು ಮಾರ್ಗಕ್ಕೆ 5 ಬಸ್‌ಗಳನ್ನು ಬಿಡಲಾಗಿದೆ. ಅದರಂತೆ ಲಿಂಗಸೂಗುರು, ದೇವದುರ್ಗ ಇತರೆ ತಾಲೂಕುಗಳಿಂದಲೂ ಬಸ್‌ಗಳನ್ನು ಬಿಡಲಾಗಿದೆ. ಸಂಜೆ 6ಗಂಟೆಯಿಂದಲೇ ಬೆಂಗಳೂರಿಗೆ ಬಸ್‌ ಇರುತ್ತವೆ. ಆ ಸಮಯದಲ್ಲೇ ಅವರು ಪ್ರಯಾಣಿಸಬೇಕು. ಚಾಲಕರಿಗೆ ಒತ್ತಡ ಹೇರಿ ಬಸ್‌ಗಳ ವ್ಯವಸ್ಥೆ ಮಾಡಿದರೆ ನಂತರ ಅನಾಹುತ ಆದರೆ ಅದರ ಹೊಣೆ ನಾನು ಹೊರಬೇಕಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕು.
ಸಿದ್ಧಪ್ಪ,
ಸಿಂಧನೂರು ಡಿಪೋ ವ್ಯವಸ್ಥಾಪಕ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.