ಬಿತ್ತನೆ ಬೀಜ: ಖಾಸಗಿ ಸಂಸ್ಥೆ ಜೊತೆ ರೈತನ ಒಪ್ಪಂದ

ಬಿತ್ತನೆ ಬೀಜ ಬೆಳೆದು ಕೊಡುವ ಒಪ್ಪಂದ „ ಅಧಿಕ ಇಳುವರಿ „ ವಾರ್ಷಿಕ ನಾಲ್ಕು ಲಕ್ಷ ರೂಪಾಯಿ ಆದಾಯ

Team Udayavani, Nov 21, 2019, 5:49 PM IST

21-November-23

ಗೌರಿಬಿದನೂರು: ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಹಾಗೂ ಲಾಭ ತಂದು ಕೊಡುವ ಹುರಳಿಕಾಯಿ (ಬೀನ್ಸ್‌)ಬೆಳೆ ಬೆಳೆಯುವ ಮೂಲಕ ತಾಲೂಕಿನ ಮಂಚೇನಹಳ್ಳಿ ಹೋಬಳಿ ಹನುಮಂತಪುರ ಗ್ರಾಮದ ರೈತ ನಾರಾಯಣಗೌಡರ ಮಿಶ್ರಬೆಳೆ ಬೇಸಾಯ ಪದ್ಧತಿ ಗಮನ ಸೆಳೆದಿದೆ.

ತಾಲೂಕಿನಲ್ಲಿ ನದಿ-ನಾಲೆಗಳಿಲ್ಲದೇ ಇಲ್ಲಿನ ರೈತರು ಮಳೆಯಾಶ್ರಿತ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಕೊಳವೆ ಬಾವಿ 1500 ಅಡಿ ಕೊರೆಸಿದರೂ ನೀರು ಸಿಗದ ಪರಿಸ್ಥಿತಿಯಲ್ಲಿ ರೈತ ನಾರಾಯಣಗೌಡರು ಪ್ರತಿ ವರ್ಷ ಉತ್ತಮ (ಬೀನ್ಸ್‌) ಹುರಳಿಕಾಯಿ ಫ‌ಸಲು ಬೆಳೆಯಲು ಕಂಡುಕೊಂಡ ಮಾರ್ಗ ಮಿಶ್ರ ಬೇಸಾಯ ಪದ್ಧತಿ. ವ್ಯವಸಾಯಸ್ಥರ ಕುಟುಂಬದವರೇ ಆದ ನಾರಾಯಣಗೌಡರು ತಾಲೂಕಿನಲ್ಲಿ ಮಳೆ ಪರಿಸ್ಥಿತಿ ಅರಿತು ಇರುವ ಅಲ್ಪಸ್ವಲ್ಪ ನೀರಿನಲ್ಲಿ ಆರ್ಥಿಕ ತೋಟಗಾರಿಕೆ ಬೆಳೆಗಳಾದ ಟೊಮೆಟೋ ಹಾಗೂ ಕೋಸು, ಅಡಿಕೆ, ತೆಂಗು, ಹಲಸು ಕೃಷಿ ಬೆಳೆಯಾದ ಮೆಕ್ಕೆಜೋಳ, ಸಜ್ಜೆ, ರಾಗಿ ಮುಂತಾದವುಗಳನ್ನು ಮಿಶ್ರ ಬೆಳೆಯಾಗಿ ಬೆಳೆದರೂ ಉತ್ತಮ ಇಳುವರಿ ಪಡೆದರೂ ಬೆಳೆ ಕೈಗೆ ಬಂದ ಸಂದರ್ಭದಲ್ಲಿ ಬೆಲೆಯಿಲ್ಲದೇ ಲಕ್ಷಾಂತರ ರೂ. ನಷ್ಟವಾಗುತ್ತಿತ್ತು.

ವಾರ್ಷಿಕ 4 ಲಕ್ಷ ರೂ. ಆದಾಯ: ಇದರಿಂದ ಕಂಗಾಲಾಗಿದ್ದ ಇವರು ತಮ್ಮ 4ಎಕರೆ ಜಮೀನಿನಲ್ಲಿ ಖಾಸಗಿ ಕಂಪನಿಗೆ ಹುರಳಿಕಾಯಿಯ (ಬೀನ್ಸ್‌) ಬಿತ್ತನೆ ಬೀಜ ಬೆಳೆದು ಕೊಡುವ ಒಪ್ಪಂದ ಮಾಡಿಕೊಂಡು ಸರಬರಾಜು ಮಾಡುತ್ತಿದ್ದು, ಈಗ ಪ್ರತಿವರ್ಷ ನಿಗದಿತ ಬೆಲೆಯಲ್ಲಿ ಬೀಜವನ್ನು ಸರಬರಾಜು ಮಾಡಿ ಬೀನ್ಸ್‌ನಿಂದಲೇ ಖರ್ಚೆಲ್ಲಾ ಕಳೆದು ವಾರ್ಷಿಕ 4ಲಕ್ಷ ಆದಾಯ ಗಳಿಸುತ್ತಿದ್ದಾರೆ. ತೆಂಗು, ಅಡಕೆ, ಹಲಸು, ಟೊಮೆಟೋ ಬೆಳೆಗಳ ಫ‌ಸಲುಗಳು ಕೂಡ ಇವರ ಲಾಭಕ್ಕೆ ಸಹಕಾರಿಯಾಗಿದೆ.

ಬೀನ್ಸ್‌ಗೆ ನಿಗದಿತ ಬೆಲೆ: ತಮ್ಮ ಒಟ್ಟು 15 ಎಕರೆ ಜಮೀನಿನಲ್ಲಿ 4 ಎಕರೆಯಲ್ಲಿ ಬೀನ್ಸ್‌, 3ಎಕರೆಯಲ್ಲಿ ಸಜ್ಜೆ, ಮೆಕ್ಕೆಜೋಳ ಬೆಳೆಯುತ್ತಿದ್ದು, 6 ಎಕರೆಯಲ್ಲಿ ಅಡಕೆ, ತೆಂಗು ಬೆಳೆಯುತ್ತಿದ್ದು, ಅದರಲ್ಲಿಯೇ ಮಿಶ್ರ ಬೆಳೆಯಾಗಿ ಕೋಸು ಬೆಳೆಯಲಾಗುತ್ತಿದೆ. ಉಳಿದ ಎರಡು ಎಕರೆಯಲ್ಲಿ ತೊಗರಿ, ರಾಗಿ ಹಾಗೂ ಟೊಮೆಟೋ ಬೆಳೆಯುತ್ತಾರೆ. ಈ ಎಲ್ಲಾ ಬೆಳೆಗಳ ಆದಾಯವು ಅಂದಿನ ಮಾರುಕಟ್ಟೆಯ ಬೆಲೆಗನುಗುಣವಾಗಿ ಮಾತ್ರ ಲಾಭ ಗಳಿಸಬಹುದಾಗಿದೆ. ಆದರೆ ಬೀನ್ಸ್‌ಗೆ ಮಾತ್ರ ನಿಗದಿತ ಬೆಲೆ ಸಿಗುತ್ತಿದೆ.

ಬೀನ್ಸ್‌ ನಾಟಿ ಮಾಡುವ ವಿಧಾನ: ನಾಲ್ಕು ಎಕರೆ ಪ್ರದೇಶ ಉಳುಮೆ ಮಾಡಿ ಭೂಮಿ ಹದಮಾಡಿ 20 ರಿಂದ 25 ಟ್ರ್ಯಾಕ್ಟರ್‌ ಲೋಡು ಕೊಟ್ಟಿಗೆ ಗೊಬ್ಬರವನ್ನು ಹಾಕಿ ನಂತರ 3/3 ಅಡಿ ಅಂತರದ ಸಾಲುಗಳನ್ನು ಮಾಡಿ 2/1 (ಅರ್ಧಅಡಿ) ಗಿಡದಿಂದ ಗಿಡಕ್ಕೆ ಅಂತರದಲ್ಲಿ ಬೀಜ ನಾಟಿ ಮಾಡಲಾಗುತ್ತದೆ. ಆ ನಂತರ ಹನಿ ನೀರಾವರಿ ಮೂಲಕ ನೀರು ಹಾಯಿಸಿ ಭೂಮಿಯನ್ನು ನೆನೆಸಿ ಆ ನಂತರ ಬಿತ್ತನೆ ಮಾಡಲಾಗುತ್ತದೆ.

20 ದಿನಗಳ ನಂತರ ಬಳ್ಳಿ ಬರಲಾರಂಭಿಸಿದಾಗ ಅದಕ್ಕೆ ದಾರವನ್ನು ಕಟ್ಟಿ ಮೇಲಕ್ಕೆ ಬಿಡಲಾಗುತ್ತದೆ. ಒಂದೂವರೆ ತಿಂಗಳಿನಿಂದ 3 ತಿಂಗಳಲ್ಲಿ ಬೆಳೆ ಮುಗಿಯುತ್ತದೆ. 90 ದಿನಕ್ಕೆ ಫ‌ಸಲು ಬರಲಿದ್ದು, ಕಾಯಿಯನ್ನು ಕಿತ್ತು ಬೀಜ ಮಾಡಲಾಗುತ್ತದೆ. ವರ್ಷಕ್ಕೆ ಎಕರೆಗೆ 40 ರಿಂದ 45 ಕ್ವಿಂಟಲ್‌ ಬೀಜವು ಇಳುವರಿ ಬರುತ್ತದೆ. ಮೊದಲೇ ನಿಗದಿಯಾಗಿರುವ ಬೆಲೆಯಲ್ಲಿ ಕಂಪನಿಯವರಿಗೆ ಮಾರಾಟ ಮಾಡಲಾಗುತ್ತದೆ. ಪ್ರತಿ ಕ್ವಿಂಟಲ್‌ಗೆ 15 ಸಾವಿರದಂತೆ 40-45 ಕ್ವಿಂಟಲ್‌ಗೆ ವಾರ್ಷಿಕ 6.5 ಲಕ್ಷ ಲಾಭ ಬರಲಿದ್ದು, ಅದರಲ್ಲಿ 2.5 ಲಕ್ಷ ಖರ್ಚು ಹೋದರೂ 4 ಲಕ್ಷ ನಿವ್ವಳ ಲಾಭ ಬರುತ್ತದೆ ಎನ್ನುತ್ತಾರೆ ರೈತ ನಾರಾಯಣಗೌಡ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.