ಸುಸ್ಥಿರ ಅಭಿವೃದ್ಧಿ  ಹಸಿರು ಬಜೆಟ್‌ಗೆ ಪ್ರಸ್ತಾವನೆ?

ಕೆರೆಗಳ ಹೂಳೆತ್ತಿ ಪುನಃಶ್ಚೇತನಗೊಳಿಸಿ! ­ಹಸಿರು ವಲಯ ನಿರ್ಮಿಸಿ ವಾತಾವರಣ ಶುದ್ಧಗೊಳಿಸಿ

Team Udayavani, Feb 15, 2021, 5:22 PM IST

Anant hegade asisar

ಶಿರಸಿ: ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ,ಸಂವರ್ಧನೆ ಮತ್ತು ಸುಸ್ಥಿರ ಬಳಕೆ, ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ಅಡಿಪಾಯವಾಗಬಲ್ಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮುಂಬರುವ ಮುಂಗಡ ಪತ್ರದಲ್ಲಿ ಈ ಉದ್ದೇಶಗಳನ್ನು ಸಾಧಿಸಬಲ್ಲ ಕೆಲವು ಅಮೂಲ್ಯ ಹಸಿರು ಯೋಜನೆಗಳನ್ನು ಜಾರಿಗೆ ತರುವಂತೆ ಶಿಫಾರಸು ಸಲ್ಲಿಸಲಾಗುತ್ತಿದೆ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನತ ಹೆಗಡೆ ಅಶೀಸರ ತಿಳಿಸಿದ್ದಾರೆ.

ನೈಸರ್ಗಿಕ ಸಂಪನ್ಮೂಲಗಳ ವಾಣಿಜ್ಯಕ್ಕೆ ಬಳಕೆಯ ಲಾಭದಲ್ಲಿನ ಪಾಲನ್ನು ತಳಮಟ್ಟದಲ್ಲಿ ಅವನ್ನು ಸಂರಕ್ಷಿಸುತ್ತಿರುವ ಸಮುದಾಯಗಳಿಗೂ ನೀಡಬೇಕು. ಮಲೆನಾಡು, ಕರಾವಳಿ ಹಾಗೂ ಬಯಲುನಾಡಿನ ಒಟ್ಟು 10 ಗ್ರಾಪಂನಲ್ಲಿನ ಜೀವವೈವಿಧ್ಯ ನಿರ್ವಹಣೆ ಸಮಿತಿಗಳ ಮೂಲಕ ಮಾದರಿ ಲಾಭಾಂಶ ಹಂಚಿಕೆ ಯೋಜನೆ ಜಾರಿಗೆ ತರಬೇಕು. ಇದು ರಾಷ್ಟ್ರಕ್ಕೆ ಮಾದರಿಯಾಗಿ, ರಾಜ್ಯಕ್ಕೆ ಒಳ್ಳೆಯ ಹೆಸರು  ತಂದುಕೊಡಬಲ್ಲದು.

ರಾಜ್ಯ ಜೀವವೈವಿಧ್ಯ ಮಂಡಳಿ ಮೂಲಕ ಈ ಕೆಳಗಿನ ಮಹತ್ವದ ಜೀವವೈವಿಧ್ಯ-ವನ ಯೋಜನೆಗಳನ್ನು ಅನುಷ್ಠಾನ ಮಾಡಬೇಕು. ಹಾಸನದ ಗೆಂಡೆಕಟ್ಟೆಯಲ್ಲಿ ರಾಷ್ಟ್ರಮಟ್ಟದ ಜೀವವೈವಿಧ್ಯ ವನ, ತುಮಕೂರಿನಲ್ಲಿ, ಲಿಂ| ಶಿವಕುಮಾರ ಸ್ವಾಮಿಗಳ ನೆನಪಿನಲ್ಲಿ ಒಂದು ನೂರು ಎಕರೆ ಪ್ರದೇಶದಲ್ಲಿ ಸ್ಮೃತಿ ವನ, ಮುಕ್ತರಾಗಿರುವ ವಿಶ್ವೇಶ ತೀರ್ಥ ಪೇಜಾವರ ಶ್ರೀಗಳ ನೆನಪಿನಲ್ಲಿ ಸ್ಮೃತಿ ವನ ಉಡುಪಿ ಜಿಲ್ಲೆಯಲ್ಲಿ ನಿರ್ಮಿಸಬೇಕು. ಕೆರೆ ಪುನಶ್ಚೇತನ ಯೋಜನೆ: ರಾಜ್ಯಾದ್ಯಂತ ನೂರು ಸಣ್ಣ ಕೆರೆಗಳನ್ನು ಆಯ್ಕೆ ಮಾಡಿ, ಅವುಗಳ ಹೂಳೆತ್ತಿ, ಮಾಲಿನ್ಯ ಮುಕ್ತ ಮಾಡಿ, ಸುತ್ತಲೂ ಹಸಿರು-ವಲಯ (ಬಫರ್‌) ನಿರ್ಮಿಸಿ, ಅವುಗಳನ್ನು ಸ್ಥಳೀಯರ ಸಹಭಾಗಿತ್ವದೊಂದಿಗೆ ನಿರ್ವಹಿಸಿ ಮಾದರಿ ಕೆರೆ ಪುನಶ್ಚೇತನ ಯೋಜನೆಯನ್ನು ಜಾರಿಗೆ ತರಬೇಕು.

ಕರಾವಳಿ ಹಸಿರು ಕವಚ ಯೋಜನೆ: ಸಮುದ್ರ ತೀರದಲ್ಲಿ ಸ್ಥಳೀಯ ಪ್ರಭೇದಗಳ ಗಿಡ-ಮರಗಳನ್ನು ಬೆಳೆಸಿ ಹಸಿರು ತಡೆಗೋಡೆ ನಿರ್ಮಾಣ ಮಾಡಿ, ಸಮುದ್ರ ಕೊರೆತವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕರಾವಳಿ ಹಸಿರು ಕವಚ ಯೋಜನೆ ಜಾರಿ ಮಾಡಬೇಕು. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಯಲುನಾಡಿನ ಎಲ್ಲ ಜಿಲ್ಲೆಗಳಲ್ಲಿ, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಸಾವಿರ ಗಿಡನೆಟ್ಟು ಸಾಮೂಹಿಕ ಗ್ರಾಮ ಕಾಡು ಬೆಳೆಸುವ ವೃಕ್ಷಕೋಟಿ ಯೋಜನೆ ಜಾರಿಮಾಡಬೇಕು.

ನದಿಮೂಲ-ರಾಮಪತ್ರೆಜಡ್ಡಿ ಸಂರಕ್ಷಣಾ ಯೋಜನೆ: ರಾಜ್ಯದ ಮಲೆನಾಡು ಹಾಗೂ ಕರಾವಳಿಯಲ್ಲಿ ಒತ್ತಡಕ್ಕೆ ಸಿಲುಕಿರುವ ನದಿಮೂಲಗಳನ್ನು ಹಾಗೂ ಈ ಪ್ರದೇಶಗಳಲ್ಲಿರುವ ಅಮೂಲ್ಯ ಜೌಗು ದೇಶಗಳಾದ 10 ರಾಮಪತ್ರೆ-ಜಡ್ಡಿಗಳನ್ನು ಸಂರಕ್ಷಿಸುವ ಸೂಕ್ತ ಯೋಜನೆ ಜಾರಿಗೆ ತರಬೇಕು.

ದೇವರ-ಕಾಡು ಸಂರಕ್ಷಣಾ ಯೋಜನೆ: ಅರಣ್ಯ ಇಲಾಖೆಯಲ್ಲಿ ಈಗಾಗಲೇ ಯಶಸ್ವಿಯಾಗಿರುವ ಕಾನು ಸಂರಕ್ಷಣಾ ಯೋಜನೆಯನ್ನು ಮಲೆನಾಡು ಹಾಗೂ ಕರಾವಳಿ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಿ, ಅಲ್ಲಿರುವ ಅಪೂರ್ಣ ಕಾನು, ದೇವರಕಾಡು ಪ್ರದೇಶಗಳನ್ನು ಸಂರಕ್ಷಿಸುವ ಯೋಜನೆ ಜಾರಿಗೆ ತರಬೇಕು.

ಕಾಡುಪ್ರಾಣಿಗಳ ಹಾವಳಿ ತಡೆಗೆ ಸೌರ ವಿದ್ಯುತ್‌ ಬೇಲಿ: ಮಲೆನಾಡು ಹಾಗೂ ಕರಾವಳಿ ರೈತರ ಹೊಲ-ತೋಟಗಳಿಗೆ ಕಾಡುಪ್ರಾಣಿಗಳು ನುಗ್ಗಿ ಬೆಳೆ ನಾಶ ಮಾಡುವುದನ್ನು ತಡೆಯಲು, ಸುಸ್ಥಿರ ವಿಧಾನವೆಂದು ನಿರೂಪಿತವಾಗಿರುವ ಸೌರವಿದ್ಯುತ್‌ ಬೇಲಿ ನಿರ್ಮಿಸಿಕೊಳ್ಳಲು, ಇದರ ವೆಚ್ಚದ ಶೇ.75 ರಷ್ಟು ಸಹಾಯಧನ ರೈತರಿಗೆ ನೀಡುವ ಯೋಜನೆ ಜಾರಿಗೆ ತರಬೇಕು.

ಔಷಧ ಮೂಲಿಕಾ ಸಂರಕ್ಷಿತ ಪ್ರದೇಶ ಸಂರಕ್ಷಣೆ ಯೋಜನೆ: ಅರಣ್ಯ ಇಲಾಖೆಯು ರಾಷ್ಟ್ರಕ್ಕೆ ಮಾದರಿಯಾಗಿ ಗುರುತಿಸಿ, ಸಂರಕ್ಷಿಸುತ್ತಿರುವ ಔಷಧ  ಮೂಲಿಕಾ ಸಂರಕ್ಷಿತ ಪ್ರದೇಶಗಳ ಬಹು ಅಮೂಲ್ಯ ಸಸ್ಯಪ್ರಭೇದಗಳ ಭಂಡಾರವಾಗಿದೆ. ಈ ಪ್ರದೇಶಗಳನ್ನು ಸೂಕ್ತ ವಿಧಾನಗಳ ಮೂಲಕ ಸಂರಕ್ಷಿಸಿ ನಿರ್ವಹಿಸುವ ಯೋಜನೆ ವಿಸ್ತರಿಸಬೇಕು. ಬಿದಿರು ಮಿಶನ್‌ ಹಾಗೂ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯನ್ನು ಜಿಪಂ ಮೂಲಕ ಜಾರಿ ಮಾಡಬೇಕು.

ಬಯೋಗ್ಯಾಸ್‌ ಉತ್ಪಾದನಾ ಘಟಕ ಯೋಜನೆ: ನಗರಗಳ ಹಸಿತ್ಯಾಜ್ಯ ವಿಲೇವಾರಿಗೆ ಬಯೋಗ್ಯಾಸ್‌ ಘಟಕವು ಅತ್ಯಂತ ಕಡಿಮೆ ವೆಚ್ಚದ, ಸರಳ ಹಾಗೂ ಪರಿಸರಕ್ಕೆ ಪೂರಕವಾದ ಒಂದು ಮಾರ್ಗವಾಗಿದೆ. ಇದರಿಂದ ತ್ಯಾಜ್ಯದ ಸಮಸ್ಯೆಯೂ ತಗ್ಗಿ, ಅಡುಗೆಗೆ ಬಳಸಲು ಇಂಧನವೂ ದೊರಕುತ್ತದೆ. ಆದ್ದರಿಂದ, ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳು ಹಾಗೂ ನಗರ ಪಾಲಿಕೆಗಳಲ್ಲಿ ಹಸಿ ತ್ಯಾಜ್ಯದಿಂದ ಬಯೋಗ್ಯಾಸ್‌ ತಯಾರಿಸುವ ಘಟಕಗಳನ್ನುಖಾಸಗಿ, ಸಾರ್ವಜನಿಕ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಸ್ಥಾಪಿಸಿ, ನಿರ್ವಹಿಸುವ ಸೂಕ್ತ ಯೋಜನೆ ಜಾರಿ ಮಾಡಬೇಕು.

ಜೇನು ಸಾಕಣೆ ಪ್ರೋತ್ಸಾಹ ಯೋಜನೆ: ಜೇನು ಸಾಕಣೆಯಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಸಮುದಾಯಗಳು, ಸಂಸ್ಥೆಗಳಿಗೆ, ಸಹಾಯಹಸ್ತ ನೀಡಲು ಸರಳಿಕೃತ ಜೇನು ಸಾಕಣೆ ಪ್ರೋತ್ಸಾಹ ಯೋಜನೆ ಜಾರಿಮಾಡಿ ರಾಜ್ಯದ ಕನಿಷ್ಠ ಐವತ್ತು ಸಾವಿರ ರೈತರನ್ನು ಈ ಯೋಜನಾ ವ್ಯಾಪ್ತಿಗೆ ತರಬೇಕು.

ಸಾಂಬಾರು-ವೃಕ್ಷ ಯೋಜನೆ: ರೈತರಿಗೆ ಶೇ.50 ಸಹಾಯಧನ ನೀಡಿ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಪಾರ ಬೇಡಿಕೆಯಿರುವ ಹಾಗೂ ಆ ಪ್ರದೇಶಕ್ಕೆ ಸೂಕ್ತ ಸಾಂಬಾರ್‌ ಬೆಳೆ ವೃಕ್ಷಗಳು ಹಾಗೂ ಔಷಧ  ಮೂಲಿಕೆಗಳನ್ನು ಬೆಳೆಸಲು ಪ್ರೋತ್ಸಾಹ ನೀಡುವ ಯೋಜನೆ ಜಾರಿ ಮಾಡಬೇಕು.

ಸೋಲಾರ್‌ ಘಟಕ ಸಹಾಯ ಯೋಜನೆ: ರಾಜ್ಯದ ಸುಮಾರು 1 ಲಕ್ಷ ರೈತ ಕುಟುಂಬಗಳಿಗೆ ದೀಪ ಮತ್ತು ನೀರು ಕಾಯಿಸುವ ಉದ್ದೇಶದ ಸೋಲಾರ್‌ ಘಟಕ ಸ್ಥಾಪಿಸಲು ಅನುಕೂಲವಾಗುವಂತೆ, ಕನಿಷ್ಠ ಶೇ.50 ರಷ್ಟು ಸಹಾಯಧನ ನೀಡುವ ಸುಸ್ಥಿರ ಇಂಧನ ಅಭಿವೃದ್ಧಿ ಯೋಜನೆ ಜಾರಿಗೆ ತರಬೇಕು. ದೇಶೀ ಜಾನುವಾರು ತಳಿ ಸಂರಕ್ಷಣೆ ಅಭಿವೃದ್ಧಿ ಹಾಗೂ ರಾಜ್ಯದ ಅಮೃತ ಮಹಲ್‌ ಕಾವಲ್‌ಗ‌ಳ ಅಭಿವೃದ್ಧಿ ಉದ್ದೇಶದಿಂದ ಪಶು ಸಂಗೋಪನಾ ಇಲಾಖೆ ಮೂಲಕ 10 ಅಮೃತ ಮಹಲ ಕಾವಲ್‌ಗ‌ಳ ತಲಾ 100 ಎಕರೆ ಪ್ರದೇಶದಲ್ಲಿ ಒಟ್ಟು 1000 ಎಕರೆ ಪ್ರದೇಶದಲ್ಲಿ ಮಾದರಿ ಹಸಿರು ಮೇವು ವೃಕ್ಷಗಳನ್ನು ಬೆಳೆಸುವ ಯೋಜನೆ ಜಾರಿ ಮಾಡಬೇಕು. ಕೃಷಿ ಇಲಾಖೆ ಮೂಲಕ ಪ್ರತಿ ಜಿಲ್ಲೆಯಲ್ಲಿ 100 ರೈತರಿಗೆ ಬೇಳೆಕಾಳು, ಸಿರಿಧಾನ್ಯ ಮುಂತಾದ ವೈವಿಧ್ಯಮಯ ಕೃಷಿ ಬೆಳೆ ಪ್ರೋತ್ಸಾಹಿಸಲು ಮಾದರಿಕೃಷಿ ವೈವಿಧ್ಯ ಯೋಜನೆ ಜಾರಿ ಮಾಡಬೇಕು.

ಈಗಾಗಲೇ ಮೀನುಗಾರಿಕಾ ಇಲಾಖೆ ಮೂಲಕ ಅಪರೂಪದ ಮೀನು ವೈವಿಧ್ಯ ತಳಿ ಇರುವ 26 ಮತ್ಸಧಾಮ ಗುರುತಿಸಲಾಗಿದೆ. ಈ ಮತ್ಸಧಾಮಗಳ ಸಂರಕ್ಷಣೆ ಅಭಿವೃದ್ಧಿಗೆ ವಿಶೇಷ ಯೋಜನೆ ಜಾರಿ ಮಾಡಬೇಕು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.