ಗುರುಮಠಕಲ್ಗೆ ಸೇಡಂನ ಕೆಲ ಹಳ್ಳಿ ಸೇರಿಸಿ
ಸಾಲಮನ್ನಾಕ್ಕೆ ಚಾಲನೆ ನೀಡಿ ವರ್ಷ ಕಳೆದರೂ ರೈತರಿಗೆ ಲಾಭವಾಗಿಲ್ಲ
Team Udayavani, Jun 23, 2019, 3:29 PM IST
ಗುರುಮಠಕಲ್: ಸಾಲದ ಕುರಿತು ತನಿಖೆ ಮಾಡಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇಡಂ ಶಾಸಕ ರಾಜಕುಮಾರ ಪಾಟೀಲ ಅವರಿಗೆ ಭರವಸೆ ನೀಡಿದರು.
ಗುರುಮಠಕಲ್: ಸೇಡಂ ತಾಲೂಕಿನ ಹಲವು ಹಳ್ಳಿಗಳನ್ನು ಗ್ರಾಮಸ್ಥರ ಅನುಕೂಲದ ಹಿತದೃಷ್ಟಿಯಿಂದ ಗುರುಮಠಕಲ್ ತಾಲೂಕಿಗೆ ಸೇರ್ಪಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಚಂಡರಿಕಿಯಲ್ಲಿ ಮುಖ್ಯಮಂತ್ರಿಗಳ ಜನತಾದರ್ಶನ ನಡೆಸುತ್ತಿದ್ದ ವೇದಿಕೆ ಬಳಿ ಸೇಡಂ ಶಾಸಕ ರಾಜಕುಮಾರ ಪಾಟೀಲ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೇಡಂ ತಾಲೂಕು ಯಾನಾಗುಂದಿ ಗ್ರಾಮದಿಂದ ಗುರುಮಠಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ಸ್ಥಳದವರೆಗೆ ಪಾದಯಾತ್ರೆಯಲ್ಲಿ ತೆರಳಿ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಸೇಡಂನಲ್ಲಿ ಸಾಲ ಮನ್ನಾಕ್ಕೆ ಚಾಲನೆ ನೀಡಿ ವರ್ಷ ಕಳೆದರೂ ರೈತರಿಗೆ ಲಾಭ ಸಿಕ್ಕಿಲ್ಲ. ಸಾಲ ಮನ್ನಾ ಹಾಗೂ ಋಣಮುಕ್ತ ಪತ್ರದ ವಿತರಣೆ ಗೊಂದಲದಿಂದಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಋಣ ಮುಕ್ತ ಪತ್ರವಿಲ್ಲದೆ ಯಾವುದೇ ಬ್ಯಾಂಕ್ಗಳು ರೈತರಿಗೆ ಹೊಸ ಸಾಲ ನೀಡದಿರುವುದು ರೈತರಿಗೆ ನುಂಗಲಾರದ ತುತ್ತಾಗಿದೆ ಎಂದು ತಿಳಿಸಿದರು.
ಮರಳು ಸಾಗಾಣಿಕೆಗೆ ಸರಳ ನೀತಿ ಜಾರಿಗೊಳಿಸಬೇಕು. ಕಲಬುರ್ಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಸಂಪೂರ್ಣ ದಿವಾಳಿ ಹಂತಕ್ಕೆ ತಲುಪಿದ್ದು, ಅದನ್ನು ಬಲಪಡಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾಗಿಣಾ ನದಿ ಎರಡು ಬದಿಗಳಲ್ಲಿ ಸುಮಾರು 160 ಕಿ.ಮೀ ದೂರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಕಾಗಿಣಾ ನದಿ ನೀರು ಬಳಕೆಗೆ ಏತ ನೀರಾವರಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದರು.
ಈ ವೇಳೆ ಸೇಡಂ ವಿಧಾನಸಭಾ ಕ್ಷೇತ್ರದ ಕೆಲ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿ ಸಹಕಾರದ ಅವಶ್ಯಕತೆಯಿದೆ ಎಂದು ತೇಲ್ಕೂರ ಹೇಳಿದರು.
ಈ ವೇಳೆ ಸಿಎಂ ಕುಮಾರಸ್ವಾಮಿ ಮಾತನಾಡಿ, ಸಮಿತಿ ರಚಿಸಿ ಸಣ್ಣಪುಟ್ಟ ಬದಲಾವಣೆ ಸೇರಿದಂತೆ ಸೇಡಂನ ಹಳ್ಳಿಗಳನ್ನು ಸೇರಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ