ಗುರುಮಠಕಲ್ನಲ್ಲಿ ವಿಪರೀತ ಸೊಳ್ಳೆ ಕಾಟ
ಸರ್ಕಾರಿ-ಖಾಸಗಿ ಕಚೇರಿಯಲ್ಲಿ ಹಾವಳಿನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ
Team Udayavani, Oct 11, 2019, 1:12 PM IST
ಚೆನ್ನಕೇಶವುಲು ಗೌಡ
ಗುರುಮಠಕಲ್: ಪಟ್ಟಣದಲ್ಲಿ ಹೆಚ್ಚುತ್ತಿರುವ ಸೊಳ್ಳೆಗಳು. ನಿಯಂತ್ರಣಕ್ಕೆ ಮುಂದಾಗದ ಪುರಸಭೆ ಅಧಿಕಾರಿಗಳು.
ಪಟ್ಟಣದಲ್ಲಿ ಪ್ರತಿ ದಿನ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿವೆ. ಸೊಳ್ಳೆಗಳನ್ನು ನಿಯಂತ್ರಿಸಲು ಪುರಸಭೆ ಅಧಿಕಾರಿಗಳು ಫಾಗಿಂಗ್ ಬಳಸುತ್ತಿಲ್ಲ. ಕೆಲ ವರ್ಷಗಳ ಹಿಂದೆ ಪ್ರತಿ ಮನೆಗೂ ಬಂದು ಔಷಧಿ ಸಿಂಪಡಿಸುತ್ತಿದ್ದರು. ಈಗ ಪುರಸಭೆ ಯಾವುದೇ ಔಷಧಿ ಸಿಂಪಡಿಸುತ್ತಿಲ್ಲ. ಇದರಿಂದ ವಾರ್ಡ್ಗಳಲ್ಲಿನ ಜನರಿಗೆ ಡೆಂಘೀ ಜ್ವರದ ಭೀತಿ ಎದುರಾಗಿದೆ. ಜನರು ಭಯಭೀತರಾಗಿದ್ದಾರೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳು ಹಿಂಡು ಹಿಂಡಾಗಿ ಮನೆಗಳಿಗೆ ದಾಳಿ ಇಡುತ್ತಿವೆ. ಪುರಸಭೆ ವತಿಯಿಂದ ಪ್ರತಿ ವಾರ್ಡ್ಗಳಲ್ಲಿ ದಿನನಿತ್ಯ ಎರಡು ಸಮಯದಲ್ಲಿ ಫಾಗಿಂಗ್ ಮತ್ತು ಇತರ ಸೊಳ್ಳೆ ನಿಯಂತ್ರಣಕ್ಕೆ ಔಷಧಿ ಸಿಂಪಡಿಸುವಂತೆ ಸಾರ್ವಜನಿಕರು ಮನವಿ
ಮಾಡಿದ್ದಾರೆ.
ಪಟ್ಟಣದ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಸೊಳ್ಳೆ ಹಾವಳಿ ವಿಪರೀತವಾಗಿದೆ. ಹಿಂದೆಲ್ಲ ಸಂಜೆಯಾದರೆ ಹೆಚ್ಚು
ಕಾಣಿಸುತ್ತಿದ್ದ ಸೊಳ್ಳೆ ಹಾವಳಿ ಈಗ ಬೆಳಗಿನಿಂದಲೇ ಕಾಟ ಜೋರಾಗಿದೆ. ಇದರಿಂದಾಗಿ ಕೆಲಸ ಮಾಡಲು ತೊಂದರೆಯಾಗುತ್ತಿದೆ. ಇದರ ನಿಯಂತ್ರಣ ಕಷ್ಟ ಸಾಧ್ಯವಾಗಿದ್ದು, ದಿನನಿತ್ಯ ಕಚೇರಿಯಲ್ಲಿ ಫ್ಯಾನ್ ತಿರುಗುತ್ತಲೇ ಇರಬೇಕಿದೆ. ವಿದ್ಯುತ್
ವ್ಯತ್ಯಯವಾದರಂತೂ ದೇವರೇ ಗತಿ. ಸೊಳ್ಳೆಗಳು ಕಚೇರಿ ಉದ್ಯೋಗಿಗಳ ರಕ್ತ ಹೀರುವುದರ ಜತೆಗೆ ಹಲವು ಕಾಯಿಲೆಗೆ ಕಾರಣವಾಗಿವೆ.
ಈಗಾಗಲೇ ಹಲವು ಮಂದಿ ವಿವಿಧ ರೀತಿಯ ಕಾಯಿಲೆಗೆ ತುತ್ತಾಗುತ್ತಿದ್ದು, ಜ್ವರ ತಲೆನೋವು ಸಾಮಾನ್ಯವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಸೊಳ್ಳೆ ನಿಯಂತ್ರಣಕ್ಕೆ ಆದಷ್ಟು ಶೀಘ್ರವಾಗಿ ಪರಿಹಾರ ಹಾಗೂ ನಿಯಂತ್ರಣ ಕ್ರಮಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ