ಚಿತ್ತಾ ಮಳೆಗೆ ಅಪಾರ ಹಾನಿ
ಭತ್ತ ಹಾನಿ: ನಷ್ಟದಲ್ಲಿ ಬೆಳೆಗಾರರು ರೈತರ ಹೊಲಗಳಿಗೆ ರೈತ ಸಂಘದ ಪದಾಧಿಕಾರಿಗಳ ಭೇಟಿ
Team Udayavani, Oct 24, 2019, 1:18 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನ ಅಡವಿ ಆನಂದೇವನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಗೆ 20 ಎಕರೆಗೂ ಹೆಚ್ಚು ಭತ್ತ ಬೆಳೆ ಹಾನಿಯಾಗಿದೆ. ಕಟಾವಿನ ಹಂತಕ್ಕೆ ಬಂದಿರುವ ಭತ್ತ ಬೆಳೆ ನೆಲಕ್ಕಪ್ಪಳಿಸಿರುವುದರಿಂದ ಭತ್ತ ಬೆಳೆಗಾರರು ನಷ್ಟಕ್ಕೆ ತುತ್ತಾಗುವಂತಾಗಿದೆ.
ಬಿದ್ದ ಭತ್ತವನ್ನು ರೈತರು ಕಟ್ಟಿಸುವುದಕ್ಕೆ ಮುಂದಾಗಿದ್ದು ಮಳೆರಾಯನನ್ನು ಶಪಿಸುತ್ತಿದ್ದಾರೆ. ಈಗಾಗಲೇ ಭತ್ತ ಬೆಳೆಗೆ ಹೆಚ್ಚು ಖುರ್ಚು ಮಾಡಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹತ್ತಿ ಅಡಿವೆಪ್ಪ ನಷ್ಟಕ್ಕೊಳಗಾದ ಭತ್ತದ ಹೊಲಗಳಿಗೆ ಭೇಟಿ ನೀಡಿ ಸರಕಾರದಿಂದ ಪರಿಹಾರ ಕೊಡಿಸಬೇಕು. ಮಳೆಗೆ ನಷ್ಟವಾದ ಇತರೆ ಬೆಳೆಗಳಿಗೆ ಕೂಡ ವೈಜ್ಞಾನಿಕ ಪರಿಹಾರ ನೀಡಬೇಕು. ತಾಲೂಕಿನ ಬನ್ನಿಗೋಳ, ತಂಬ್ರಹಳ್ಳಿ ಭಾಗಗಳಲ್ಲಿ ಈರುಳ್ಳಿ ಬೆಳೆ ಕಟಾವಿಗೆ ಬಂದಿದ್ದು, ಅತಿಯಾದ ಮಳೆಯಿಂದ ಒಕ್ಕಣೆ ಕಷ್ಟದಾಯಕವಾಗಿದೆ. ಈರುಳ್ಳಿ ನೆಲದಲ್ಲಿ ಕೊಳೆತು ಹೋಗುತ್ತಿದ್ದು ಬೆಳೆಗಾರರು ನಷ್ಟಕ್ಕೆ ತುತ್ತಾಗುತ್ತಿರುವುದನ್ನು ತೋಟಗಾರಿಕೆ ಇಲಾಖೆ ಅದಿಕಾರಿಗಳು ಖುದ್ದಾಗಿ ರೈತರ ಹೊಲಗಳಿಗೆ ಭೇಟಿನೀಡಿ ಪರಿಶೀಲಿಸಬೇಕು.
ಕಳೆದ ಐದಾರು ವರ್ಷಗಳಿಂದ ಮಳೆಯಿಲ್ಲದೆ ಬರಗಾಲದ ಹೊಡೆತಕ್ಕೆ ತತ್ತರಿಸಿದ ರೈತರಿಗೆ ಈಬಾರಿ ಅತಿವೃಷ್ಟಿಯಿಂದ ಬೆಳೆಗಳನ್ನು ಒಕ್ಕಣಿಕೆ ಮಾಡಿಕೊಳ್ಳಲಾಗದೆ ನಷ್ಟಕ್ಕೆ ತುತ್ತಾಗುವಂತಾಗಿದೆ. ಮಳೆಗಳು ಉತ್ತಮವಾಗಿ ಫಸಲು ಕೈಸೇರುವ ಭರವಸೆಯಲ್ಲಿದ್ದ ರೈತರಿಗೆ ವರುಣರಾಯ ಹೆಚ್ಚು ಸುರಿಯುವುದರ ಮೂಲಕ ರೈತರ ಆಸೆಗಳಿಗೆ ತಣ್ಣೀರೆರಚಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಮಾಲವಿ ಗ್ರಾಮದಲ್ಲಿಯೂ ಕೂಡ ಭತ್ತದ ಬೆಳೆಗಳು ನೆಲಕ್ಕುರುಳಿದ್ದು ರೈತರು ನಷ್ಟದ ಬೀತಿಯಲ್ಲಿದ್ದಾರೆ. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಉಪ್ಪಾರ ಸಕ್ರಪ್ಪ, ಕಾರ್ಯಾಧ್ಯಕ್ಷ ರಮೇಶ್ ಪೂಜಾರ್, ಸಂಘದ ಹನುಮಂತಪ್ಪ, ಮುತುRರು ಲೋಕಪ್ಪ ಇದ್ದರು.
ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 1.56. ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆ ಕಂಪ್ಲಿ-ಕೋಟೆ ಸೇತುವೆ(ಎರಡನೇ ದಿನವು) ಮುಳುಗಡೆಯಾಗಿದ್ದು, ಸೇತುವೆ ಮೇಲೆ ಸುಮಾರು 5 ಅಡಿಗಳಷ್ಟು ನೀರು ಹರಿಯುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕಳೆದೆರಡು ಬಾರಿ ಪ್ರವಾಹ ಬಂದಾಗಲೂ ಕಂಪ್ಲಿ ತಾಲ್ಲೂಕಿನಲ್ಲಿ ಮಳೆ ಇರಲಿಲ್ಲ,ಆದರೆ ಈ ಭಾರಿ ಪ್ರವಾಹದ ಜೊತೆಗೆ ಮಳೆಯೂ ಸುರಿದಿದ್ದು ಜನಜೀವನ ಅಸ್ಯವ್ಯಸ್ತವಾಗಿದೆ.
ಕಂಪ್ಲಿ-ಕೋಟೆ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಕಂಪ್ಲಿ-ಕೋಟೆ, ಬೆಳಗೋಡ್ ಹಾಳ್, ಸಣಾಪುರ, ಇಟಗಿ, ನಂ.2 ಮುದ್ದಾಪುರ ಗ್ರಾಮದ ನದಿ ಪಾತ್ರದಲ್ಲಿರುವ ಭತ್ತ ಸೇರಿದಂತೆ ವಿವಿಧ ಬೆಳೆಗಳು ಜಲಬಂಧಿಯಾಗಿವೆ.
ಸಂಚಾರಕ್ಕೆ ಬ್ರೇಕ್: ಎರಡನೇ ದಿನವೂ ನದಿ ಪ್ರವಾಹ ಮುಂದುವರೆದ ಹಿನ್ನೆಲೆ ಕಂಪ್ಲಿ-ಕೋಟೆ ಸೇತುವೆ ನೀರಿನಲ್ಲಿ ಮುಳುಗಿದ ಪರಿಣಾಮ ಪಾದಚಾರಿ ಹಾಗೂ ವಾಹನ ಸವಾರರ ಓಡಾಟಕ್ಕೆ ತುಂಬ ತೊಂದರೆ ಉಂಟಾಗಿದೆ.
ಬುಧವಾರ ಸಂಜೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆ ಸುರಿದ ಪರಿಣಾಮ ಮತ್ತೇ ನದಿ ನೀರು ಹೆಚ್ಚಾಗುವ ಆತಂಕ ಜನರಲ್ಲಿ ಕಾಡತೊಡಗಿದೆ. ಕಂಪ್ಲಿ ಭಾಗದಲ್ಲಿ ಕಾರ್ಮೋಡ ಕವಿದಿದ್ದು, ಉತ್ತಮ ಮಳೆ ಸುರಿದಿದೆ. ಮಳೆಯಿಂದಾಗಿ ಜನರು ಹೊರಗಡೆ ಬರಲು ಹಿಂದೇಟು ಹಾಕಿದರು. ಮಳೆ, ನದಿ ಪ್ರವಾಹದಿಂದ ಮತ್ತಷ್ಟು ಸಂಕಷ್ಟ ಎದುರಾಗುವ ಮುನ್ಸೂಚನೆ ಜನರಲ್ಲಿ ಕಾಡತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ