ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಚಿಲುಗೋಡು ಗ್ರಾಮದಲ್ಲಿ ನೀರವ ಮೌನ-ಅಂತಿಮ ನಮನ

Team Udayavani, Nov 25, 2019, 4:19 PM IST

25-November-20

ಹಗರಿಬೊಮ್ಮನಹಳ್ಳಿ: ತಾಲೂಕಿನ ಚಿಲುಗೋಡು ಗ್ರಾಮದ ಯೋಧ ಮೌನೇಶ್‌ ಬಡಿಗೇರ್‌ ನಿಧನದ ಹಿನ್ನಲೆಯಲ್ಲಿ ಪಟ್ಟಣದ ಆಸ್ಪತ್ರೆಯಿಂದ ಬಸವೇಶ್ವರ ಬಜಾರಿನಲ್ಲಿ ವಿವಿಧ ಗ್ರಾಮಗಳ ಯುವಕರು ವಿಜೃಂಭಣೆಯ ಮೆರವಣಿಗೆ ಮೂಲಕ ಯೋಧನಿಗೆ ಗೌರವ ಸಲ್ಲಿಸಿದರು.

ಮೆರವಣಿಗೆಗೂ ಮುನ್ನ ಮೌನೇಶ್‌ ಪಾರ್ಥಿವ ಶರೀರಕ್ಕೆ ಶ್ರೀನಗರದ ಭೂಸೇನೆಯ ಲೆಪ್ಟಿನೆಂಟ್‌ ಕರ್ನಲ್‌ ಮನೀಶ್‌ ರಾಷ್ಟ್ರ ಧ್ವಜ ಹೊದಿಸಿ ಅಂತಿಮ ನಮನ ಸಲ್ಲಿಸಿದರು. ಸುಬೇದಾರ ನಾಗರಾಜ, ನವೀನ್‌, ಕರಿಬಸವರಾಜ, ಪ್ರತಾಪ್‌ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಚಿಲುಗೋಡು ಗ್ರಾಮಸ್ಥರು ಭಜನೆ ಮೂಲಕ ಯೋಧನಿಗೆ ಗೌರವ ಸಲ್ಲಿಸಿದರು.

ಯುವಕರು ದಾರಿಯುದ್ದಕ್ಕೂ ಬೈಕ್‌ರ್ಯಾಲಿ ಮೂಲಕ ಘೋಷಣೆಗಳನ್ನು ಕೂಗಿದರು. ಮೌನೇಶ್‌ ಬಡಿಗೇರ್‌ ಸಾವಿನಿಂದಾಗಿ ಚಿಲುಗೋಡು ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಗ್ರಾಮದ ಯುವಕರು, ಮಕ್ಕಳು ದೇಶದ ಪರ ವಿವಿಧ ಘೋಷಣೆಗಳನ್ನು ಕೂಗುತ್ತ ಗೌರವ ಸಮರ್ಪಿಸಿದರು.

ಮೌನೇಶ್‌ ಕುಟುಂಬದವರು ಬಿಕ್ಕಿಬಿಕ್ಕಿ ಅಳುತ್ತಿರುವುದು ಮನಕಲಕುವಂತಿತ್ತು.
ಅಂತ್ಯಕ್ರಿಯೆಯಲ್ಲಿ ಚಿಲುಗೋಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

ಚಿಲುಗೋಡು ಗ್ರಾಮಸ್ಥರು ಮಳಿಗೆಗಳ ಮೇಲೆ ಕುಳಿತು ಮೌನೇಶ್‌ ಶವದ ಮೆರವಣಿಯನ್ನು ಕುತೂಹಲದಿಂದ ದುಃಖತಪ್ತರಾಗಿ ವೀಕ್ಷಿಸಿದರು. ಜಿಲ್ಲಾ ಪೊಲೀಸ್‌ ಮೀಸಲು ಪಡೆ 3 ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ತಹಶೀಲ್ದಾರ್‌ ಆಶಪ್ಪ ಪೂಜಾರ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮೌನೇಶ್‌ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಮೌನೇಶ್‌ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿ ದೇವರು ನೀಡಲಿ. ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪುವಂತೆ ಕ್ರಮವಹಿಸಲಾಗುವುದು ಎಂದರು.

ಅಂತ್ಯಕ್ರಿಯೆಯಲ್ಲಿ ನಂದಿಪುರದ ಮಹೇಶ್ವರ ಸ್ವಾಮೀಜಿ, ಡಾ| ಬಂಡ್ರಿ ವಿಶ್ವನಾಥ, ನಿವೃತ್ತ ಯೋಧರಾದ ರಾಮರೆಡ್ಡಿ, ವೈ. ಕೊಟ್ರೇಶ, ಕೊಟ್ರಾಗೌಡ, ಬೋಗೇಶ್ವರಯ್ಯ, ಶಾಸಕರ ಆಪ್ತಸಹಾಯಕ ಗೆದ್ದಲಗಟ್ಟಿ ಸೋಮು, ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ, ವಕೀಲ ಕೋರಿ ಗೋಣಿಬಸಪ್ಪ, ನಂದಿಬಂಡಿ ರಾಮಣ್ಣ, ಬಡಿಗೇರ್‌ ಪ್ರಕಾಶ್‌, ಆನೇಕಲ್‌ ಸಂತೋಷ, ಮೈಲಾರ ಶಂಕ್ರಗೌಡ್ರು, ಮೋರಿಗೇರಿ ವೀರಣ್ಣ, ಮದುಸೂಧನ, ರಾಜು, ಉಗ್ಗಣ್ಣನವರ ಬಸವರಾಜ, ರೆಡ್ಡಿ ಮಂಜುನಾಥ ಪಾಟೀಲ್‌, ಸತೀಶ್‌, ಜೆಸ್ಕಾಂನ ಕರಿಬಸವರಾಜ, ಶರಣಪ್ಪ, ಯಮನೂರು, ಗೆಳೆಯರು ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.