ನೆರೆ ಸಂತ್ರಸ್ತರ ಸಂಕಷ್ಟಕ್ಕೆ ನೆರವಾಗಿ

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಬಕೊ ಅಧ್ಯಕ್ಷ ಶಾಸಕ ಭೀಮನಾಯ್ಕ ಕರೆ

Team Udayavani, Aug 16, 2019, 3:23 PM IST

16-Agust-35

ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಶಾಸಕ ಭೀಮನಾಯ್ಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು

ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಆವರಿಸಿದ ಭೀಕರ ನೆರೆ ಹಾವಳಿಯಿಂದಾಗಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ತತ್ತರಿಸಿವೆ. ಇದರಿಂದಾಗಿ ಸ್ವಾತಂತ್ರ ದಿನಾಚರಣೆಯನ್ನು ಆಡಂಬರಕ್ಕಿಂತಲೂ ಅರ್ಥಪೂರ್ಣವಾಗಿ ಅತ್ಯಂತ ಸರಳವಾಗಿ ಆಚರಿಸುವುದು ಸೂಕ್ತವಾಗಿದೆ ಎಂದು ರಾಬಕೊ ಅಧ್ಯಕ್ಷ ಶಾಸಕ ಭೀಮನಾಯ್ಕ ಹೇಳಿದರು.

ಪಟ್ಟಣದ ಗಂ.ಭೀ. ಪಪೂ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 73ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರಿಗೆ ಸರಕಾರದ ಪ್ರೊತ್ಸಾಹಧನದ ಜತೆಗೆ ಪ್ರತಿ ಲೀ.ಗೆ 1 ರೂ.ಹೆಚ್ಚುವರಿಯಾಗಿ ನೀಡಲಾಗುವುದು. ಮಾರ್ಚ್‌ ಅಂತ್ಯಕ್ಕೆ ರಾಬಕೋ ಒಟ್ಟು 1.28 ಕೋಟಿ ರೂ.ಲಾಭದಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ನೇರವಾಗಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಸ್ವಾತಂತ್ರೊತ್ಸವದ ವೇಳೆಗೆ ಮಾಲವಿ ಜಲಾಶಯದಿಂದ ರೈತರ ಜಮೀನಿಗೆ ಶಾಶ್ವತ ನೀರುಣಿಸುವ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.

ದಿನಾಚರಣೆ ಸಂಭ್ರಮಕ್ಕಿಂತಲೂ ಸಂತ್ರಸ್ತರ ನೆರವಿಗೆ ಚಾಚುವ ಕೈಗಳೇ ಹೆಚ್ಚು ಶಕ್ತಿಶಾಲಿ ಎಂಬ ಭಾವನೆ ನನ್ನದಾಗಿದೆ. ಮಿಡಿಯುವ ಮನಗಳಿಗಾಗಿ ನಮ್ಮ ನೆರೆ ಸಂತ್ರಸ್ತರು ತುಡಿಯುತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಹಗರಿಬೊಮ್ಮನಹಳ್ಳಿ ಸಮಸ್ತ ವರ್ತಕರು, ನಾಗರಿಕರು, ವಿದ್ಯಾರ್ಥಿಗಳು, ಹಲವು ಸಂಘಟನೆ ಪದಾಧಿಕಾರಿಗಳು ಉದಾರ ದಾನ ನೀಡಿ ಮಾನವೀಯತೆ ಮೆರೆದಿದ್ದಾರೆ. ನನಗೆ ನಿಮ್ಮ ರಕ್ತಕೊಡಿ, ನಾನು ಸ್ವಾತಂತ್ರ ಕೊಡುತ್ತೇನೆ ಎಂದ ಸುಭಾಷ್‌ಚಂದ್ರಬೋಸ್‌, ಸ್ವಾತಂತ್ರ ನನ್ನ ಜನ್ಮಸಿದ್ಧ ಹಕ್ಕು ಎಂದು ಪ್ರತಿಪಾದಿಸಿದ ಬಾಲಗಂಗಾಧರ ತಿಲಕ್‌, ಮಾಡು ಇಲ್ಲವೆ ಮಡಿ ಎಂದ ಮಹಾತ್ಮ ಗಾಂಧೀಜಿ ಅವರ ಧ್ಯೇಯವಾಕ್ಯಗಳು ನಮ್ಮ ರಕ್ತದ ಕಣಕಣಗಳಿಗೆ ನವ ಭಾರತ ನಿರ್ಮಿಸಲು ಪ್ರೇರಣಾಶಕ್ತಿಗಳಾಗಬೇಕಿದೆ ಎಂದರು.

ತಹಶೀಲ್ದಾರ್‌ ಆಶಪ್ಪ ಪೂಜಾರ್‌ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ಸ್ವಾತಂತ್ರ್ಯ ಪಡೆದಿದ್ದೇವೆ. ಇಂಥ ಮಹನೀಯರ ತ್ಯಾಗಬಲಿದಾನ ಸಾರ್ಥಕಗೊಳ್ಳಬೇಕಾದರೆ ದೇಶದ ಪ್ರಗತಿಗೆ ನಾವು ನೀವೆಲ್ಲರೂ ಜಾತಿಮತಪಂಥದ ಭೇದ ಎಣಿಸದೆ ಅಭಿವೃದ್ಧಿ ಮಂತ್ರ ಹೇಳಬೇಕಿದೆ. ನಾವು ಪಡೆದ ಸ್ವಾತಂತ್ರ ಸ್ವೇಚ್ಛಾಚಾರವಾಗದಿರಲಿ. ಅಭಿವೃದ್ಧಿಯೊಂದೆ ಮೂಲ ಮಂತ್ರವಾಗಬೇಕಿದೆ ಎಂದರು.

ಇದೇವೇಳೆ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿಯಲ್ಲಿ ಹೆಚ್ಚು ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಂಗವಿಕಲರಿಗೆ ಟ್ರೈಸಿಕಲ್ ವಿತರಣೆ ಮಾಡಲಾಯಿತು.

ತಾಪಂ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷೆ ಸುಶೀಲಮ್ಮ, ಜಿ.ಪಂ. ಸದಸ್ಯ ಆನಂದ್‌, ಮಾಜಿ ಸದಸ್ಯರಾದ ಅಕ್ಕಿ ತೋಟೇಶ್‌, ಹೆಗ್ಡಾಳ್‌ ರಾಮಣ್ಣ, ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಯು. ಬಾಬುವಲಿ, ಸದಸ್ಯರಾದ ಕಲ್ಪನಾ ಕೊಟ್ರೇಶ್‌, ಜಾಹಿದಾ ರಹೇಮಾನ್‌, ಕವಿತಾ ಹಾಳ್ದಾಳ್‌, ಹಂಚಿನಮನಿ ಹನುಂತಪ್ಪ, ಹುಡೇದ್‌ ಗುರುಬಸವರಾಜ, ಇಒ ಮಲ್ಲಾನಾಯ್ಕ, ಬಿಇಒ ಶೇಖರಪ್ಪ ಹೊರಪೇಟೆ,ಪುರಸಭೆ ಮುಖ್ಯಾಧಿಕಾರಿ ಕೃಷ್ಣನಾಯ್ಕ, ಲೋಕೋಪಯೋಗಿ ಎಇಇ ಪ್ರಭಾಕರಶೆಟ್ರಾ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ್‌, ಬನ್ನಿಗೋಳ ವೆಂಕಣ್ಣ, ಕನ್ನಿಹಳ್ಳಿ ಚಂದ್ರಶೇಖರ, ತುರಾಯಿನಾಯ್ಕ ಇತರರಿದ್ದರು. ಶಿಕ್ಷಕರಾದ ಪರಮೇಶ್ವರ ಸೊಪ್ಪಿಮಠ, ಬಿ.ಕೊಟ್ರಪ್ಪ, ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.