ನೂತನ ಶಿಕ್ಷಣ ನೀತಿ ಭರವಸೆ ಗೂಡು

ಚಿಂತನ-ಮಂಥನ ಕಾರ್ಯಕ್ರಮ•ಹಣಕಾಸು ನೆರವಿನ ಬಗ್ಗೆ ಪ್ರಸ್ತಾಪವಿಲ್ಲದ ಕರಡು

Team Udayavani, Jul 22, 2019, 11:32 AM IST

22-July-13

ಹಗರಿಬೊಮ್ಮನಹಳ್ಳಿ: ಪಟ್ಟಣದ ಗುರುಭವನದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಸಂಘಟಿಸಿದ್ದ ನೂತನ ಶಿಕ್ಷಣ ನೀತಿ 2019ರ ಕರಡಿನಲ್ಲಿನ ಅಂತರಾಳದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಟೀಚರ್‌ ಪತ್ರಿಕೆಯ ಸಂಪಾದಕ ರಾಮಕೃಷ್ಣ ಮಾತನಾಡಿದರು.

ಹಗರಿಬೊಮ್ಮನಹಳ್ಳಿ: ದೇಶದಲ್ಲಿ 2040ರ ವರೆಗಿನ ದೃಷ್ಟಿಕೋನವನ್ನು ಹೇಳಬೇಕಾಗಿರುವ ಹೊಸ ಶಿಕ್ಷಣ ನೀತಿಯು ಕೇವಲ ಭರವಸೆಗಳ ಗೂಡಾಗಿದ್ದು, ವಾಸ್ತವ ಅಂಶಗಳನ್ನು ನಿರ್ಲಕ್ಷಿಸಿದೆ ಎಂದು ಟೀಚರ್‌ ಪತ್ರಿಕೆಯ ಸಂಪಾದಕ ರಾಮಕೃಷ್ಣ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಭಾನುವಾರ ಸಂಘಟಿಸಿದ್ದ ನೂತನ ಶಿಕ್ಷಣ ನೀತಿ 2019ರ ಕರಡಿನಲ್ಲಿನ ಅಂತರಾಳದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೂತನ ಶಿಕ್ಷಣ ನೀತಿಯ ಬಗ್ಗೆ ಇನ್ನಷ್ಟು ವ್ಯಾಪಕ ಚರ್ಚೆಯಾಗಬೇಕಾದ ಅಗತ್ಯವಿದೆ. ಅದಕ್ಕೆ ಇನ್ನೂ ಮೂರು ತಿಂಗಳ ಕಾಲ ಅಂತಿಮ ಗಡುವನ್ನು ವಿಸ್ತರಿಸಬೇಕು. ಸ್ವಾತಂತ್ರ್ಯ ನಂತರದ ಎಲ್ಲಾ ಶಿಕ್ಷಣ ನೀತಿಗಳ ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳ ಸಿಂಹಾವಲೋಕನ ಮಾಡದೆ ಕೇವಲ ಏಕಮುಖವಾಗಿದೆ. ವಿಜ್ಞಾನಿಗಳ ಬದಲಾಗಿ ಶಿಕ್ಷಣ ತಜ್ಞರೊಬ್ಬರನ್ನು ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೆ ನೀತಿ ನಿರೂಪಣೆಗೆ ಇನ್ನೂ ಅರ್ಥ ಬರುತ್ತಿತ್ತು. ಸರ್ಕಾರಿ ಶಾಲಾ ವ್ಯವಸ್ಥೆ ಬಲಪಡಿಸಲು ಬೇಕಾದ ಹಣಕಾಸಿನ ನೆರವಿನ ಬಗ್ಗೆ ಎಲ್ಲಿಯೂ ಪ್ರಸ್ತಾಪವೇ ಇಲ್ಲ ಎಂದರು.

ಕಾನೂನು ಬಾಹಿರವಾದ ಕಡಿಮೆ ವೆಚ್ಚದ ಬಂಡವಾಳ ಹೂಡಿಕೆಯ ಖಾಸಗಿ ಶಾಲೆಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡು ಬಡವರಿಗೆ ಶಿಕ್ಷಣ ಗಗನ ಕುಸುಮವಾಗುವ ಸಾಧ್ಯತೆಗಳು ಹೆಚ್ಚಾಗುತ್ತವೆ. ನಮ್ಮ ಸಂವಿಧಾನದ ಆಶಯದಲ್ಲಿ ಶಿಕ್ಷಣ ಖಾಸಗೀಕರಣಕ್ಕೆ ಒಳಗಾಗಬಾರದು ಮತ್ತು ಕಾರ್ಪೊರೇಟ್‌ಗಳ ಕೈಯಲ್ಲಿ ಹೋಗಬಾರದು ಎಂಬ ಬಹುದೊಡ್ಡ ಆಶಯವಿದೆ. ಆದರೆ ಅದಕ್ಕೆ ಇದರಲ್ಲಿ ಯಾವುದೇ ಬೆಂಬಲ ಇಲ್ಲದಿರುವುದು ವಿಷಾದನೀಯ. ಶಿಕ್ಷಣ ಕ್ಷೇತ್ರ ವಿಕೇಂದ್ರೀಕರಣ ಅನ್ನಿಸಿದರೂ ಕೂಡ ಅದು ಕೇಂದ್ರೀಕರಣದತ್ತ ಒತ್ತು ಕೊಡುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಶಿಕ್ಷಣ ಪರ ಮನಸ್ಸುಗಳು ಒಂದುಗೂಡಿ ಇದರಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕಿದೆ ಎಂದರು.

ಡಯಟ್‌ನ ಹಿರಿಯ ಉಪನ್ಯಾಸಕ ತಾಲೂಕು ನೋಡಲ್ ಅಧಿಕಾರಿ ಬಸವರಾಜ ಉದ್ಘಾಟಿಸಿದರು. ಬಿಜಿವಿಎಸ್‌ನ ಅಧ್ಯಕ್ಷ ಮುಸ್ತಾಕ್‌ ಅಹ್ಮದ್‌ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಬಿಜಿವಿಎಸ್‌ ವತಿಯಿಂದ ಮಾಡಲಾಯಿತು.

ಕ್ಷೇತ್ರ ಸಮನ್ವಯಾಧಿಕಾರಿ ಬೋರಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯಂಕಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕೊಟ್ರಪ್ಪ, ಪ್ರಾಥಮಿಕ ಶಾಲಾ ಮುಖ್ಯಗುರುಗಳ ಸಂಘದ ವಿ ನಾಗೇಂದ್ರಪ್ಪ, ನೌಕರರ ಒಕ್ಕೂಟದ ಮಂಜುಳಾ ಹವಲ್ದಾರ್‌, ಎನ್‌.ಪಿ.ಎಸ್‌ ನೌಕರರ ಸಂಘದ ಅಧ್ಯಕ್ಷ ಗೋಣಿಬಸಪ್ಪ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಮಾರುತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಯು. ಓಬಯ್ಯ, ಶಿಕ್ಷಕರ ಸಂಘದ ಶಿವಲಿಂಗಸ್ವಾಮಿ, ಉಮೇಶ್‌ ಜೆಜ್ಜೂರಿ, ಐ.ಈರಣ್ಣ, ವೀರನಗೌಡ, ಪಂಚಪ್ಪ, ಪ್ರವೀಣ್‌ ಉಪಸ್ಥಿತರಿದ್ದರು.

ಜೆ.ಎಂ.ರಮೇಶ್‌, ಪರಮೇಶ್ವರಯ್ಯ ಸೊಪ್ಪಿಮಠ, ಕೊಟ್ರೇಶ್‌ ಸಾವಳಗಿ, ರಂಗನಾಥ ಹವಲ್ದಾರ್‌, ಕೆ.ರಾಮಣ್ಣ ನಿರೂಪಿಸಿದರು.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.