ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಅರಿವು ಅಗತ್ಯ

ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧಿಧೀಶ ಬಿ.ಸಿ. ಚಂದ್ರಶೇಖರ ಕರೆ

Team Udayavani, Aug 3, 2019, 3:31 PM IST

3-Agust-37

ಹಗರಿಬೊಮ್ಮನಹಳ್ಳಿ: ಗ್ರಾಮೀಣ ಕಾನೂನು ಸಾಕ್ಷರತಾ ರಥಯಾತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ್‌ ಚಾಲನೆ ನೀಡಿದರು.

ಹಗರಿಬೊಮ್ಮನಹಳ್ಳಿ: ಪ್ರತಿಯೊಬ್ಬರು ಕಾನೂನಿನ ಅರಿವು ಹೊಂದುವುದು ಅತ್ಯಗತ್ಯವಾಗಿದ್ದು ಕಾನೂನಿನ ಪ್ರಜ್ಞೆಯಿಂದ ಸಹಮತದಿಂದ ಬದುಕಬಹುದು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧಿಧೀಶ ಬಿ.ಸಿ. ಚಂದ್ರಶೇಖರ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೊಲೀಸ್‌ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಮತ್ತು ಕಾರ್ಮಿಕರ ಇಲಾಖೆಗಳ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಏರ್ಪಡಿಸಿದ್ದ ಕಾನೂನು ಸಾಕ್ಷರಥ ರಥ ಯಾತ್ರೆಗೆ ಚಾಲನೆ ನೀಡಿ ಅವರು ಶುಕ್ರವಾರ ಮಾತನಾಡಿದರು.

ಮನುಷ್ಯ ಬದುಕಿಗೆ ಕಾನೂನು ಒಂದು ಜೀವಾಳ, ನ್ಯಾಯ ಸಮ್ಮತ ರಕ್ಷಣೆಯನ್ನು ಒದಗಿಸುತ್ತದೆ. ಗ್ರಾಮೀಣ ಪ್ರದೇಶದ ಜನರು ನಿತ್ಯ ಜೀವನದ ಸಮಸ್ಯೆಗಳ ಪರಿಹಾರಕ್ಕೆ ಸಾಮಾನ್ಯ ಕಾನೂನು ಅರಿವು ಹೊಂದುವ ಅಗತ್ಯವಿದೆ. ಕಾನೂನು ರಥದ ಮೂಲಕ ತಾಲೂಕಿನ ವಿವಿಧೆಡೆ ಕಾನೂನು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಜೆಎಂಎಫ್‌ಸಿ ಕಿರಿಯ ಶ್ರೇಣಿ ನ್ಯಾಯಾಧೀಶ ವಿಜಯಕುಮಾರ ಜಟ್ಲಾ ಮಾತನಾಡಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಸಾಕ್ಷರಥಾ ರಥಯಾತ್ರೆ ಹಮ್ಮಿಕೊಂಡಿದ್ದು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ತಹಶೀಲ್ದಾರ್‌ ಅಶಪ್ಪ ಪೂಜಾರ್‌, ವಕೀಲರ ಸಂಘದ ಗೌರವ ಅಧ್ಯಕ್ಷ ಬಿ.ವಿ.ಶಿವಯೋಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ, ಎನ್‌ಆರ್‌ಇಜಿ ಸಹಾಯಕ ನಿರ್ದೇಶಕ ಎಚ್. ವಿಶ್ವನಾಥ, ಸಿಡಿಪಿಒ ಚನ್ನಪ್ಪ, ವಕೀಲರಾದ ಜಾಣ ಶಿವಾನಂದ, ಎಸ್‌. ಎಚ್.ವಿಶಾಲಾಕ್ಷಿ, ಎಸ್‌. ಲಿಂಗನಗೌಡ, ಸತ್ಯನಾರಾಯಣ, ಚಂದ್ರಶೇಖರ್‌, ಕೊಟ್ರೇಶ ಶೆಟ್ಟರ್‌, ರಮೇಶ, ಜಗದೀಶ, ಶರೀಫ್‌, ದೀಪಕ್‌, ಪ್ರಹ್ಲಾದ, ನಾಗರಾಜ, ಜಿ.ಗಂಗಾಧರ, ಯಾಸ್ಮೀನ್‌, ವಾಸಂತಿ ಸಾಲ್ಮನಿ ಶಿವಗಂಗಮ್ಮ, ಪರಮೇಶ್ವರ ಗೌಡ, ಟಿ ಶಿವಪ್ರಕಾಶ, ಹುಲುಗಪ್ಪ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.