ಬಾರದ ಮಳೆ: ಹಸಿರಾಗದ ಇಳೆ

ಅಂತರ್ಜಲವೂ ಕ್ಷೀಣ•ಹಿನ್ನೀರು ಪ್ರದೇಶದಲ್ಲಿ ಒಣಭೂಮಿ ದರ್ಶನ •ರೈತ ಕಂಗಾಲು

Team Udayavani, Jul 24, 2019, 10:27 AM IST

24-July-6

ಹಗರಿಬೊಮ್ಮನಹಳ್ಳಿ: ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದ ಹಿನ್ನೀರು ಪ್ರದೇಶಕ್ಕೆ ನೀರು ಬಾರದಿರುವುದರಿಂದ ಎಲ್ಲೆಡೆ ಒಣಭೂಮಿ ಕಾಣುತ್ತಿದೆ.

ಸುರೇಶ ಯಳಕಪ್ಪನವರ
ಹಗರಿಬೊಮ್ಮನಹಳ್ಳಿ:
ಕಳೆದ ವರ್ಷ ತುಂಗಾಭದ್ರಾ ನದಿ ತುಂಬಿದ್ದರಿಂದ ತಾಲೂಕಿನ ಹಿನ್ನೀರು ಪಾತ್ರದ ರೈತರು ಹರ್ಷ ವ್ಯಕ್ತಪಡಿಸಿದ್ದರು. ಆದರೆ ಈ ಬಾರಿ ಜುಲೈ ಕೊನೆ ವಾರವಾದರೂ ಹಿನ್ನೀರು ಬಹುದೂರವಿರುವುದರಿಂದ ಆತಂಕ ಹೆಚ್ಚಾಗಿದೆ.

ಈ ವರೆಗೂ ತಾಲೂಕಿನಲ್ಲಿ ಕೇವಲ 13262 ಹೆಕ್ಟೇರ್‌ ಬಿತ್ತನೆಯಾಗಿದ್ದು, ಕೃಷಿ ಇಲಾಖೆಯ 47 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿ ಕಷ್ಟಕರವಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಮಾರಾಟ ಸಪ್ಪೆಯಾಗಿದೆ. ಖುಷ್ಕಿ ಭೂಮಿಯ ರೈತರು ರಾಗಿ, ನವಣೆ, ಶೇಂಗಾ, ತೊಗರಿ ಬಿತ್ತನೆ ಮಾಡಿ ವರುಣನ ಬರುವಿಕೆಗೆ ಮುಗಿಲತ್ತ ದೃಷ್ಟಿ ನೆಟ್ಟಿದ್ದಾರೆ. ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ನೀರಾವರಿ ಪ್ರದೇಶ ಜೊತೆಗೆ ಖುಷ್ಕಿ ಭೂಮಿಯ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಮುಂಗಾರು ಮುನಿಸು:

ಜನವರಿಯಿಂದ ಜುಲೈ 20ರವರೆಗೆ ವಾಡಿಕೆ ಮಳೆ 223ಮಿಮೀ ಮಳೆ ಆಗಬೇಕಿತ್ತು. ಆದರೆ ಕೇವಲ 147 ಮಿಮೀ ಇಲ್ಲಿಯವರೆಗೂ ಮಳೆಯಾಗಿರುವುದು ದಾಖಲಾಗಿದೆ. ಒಟ್ಟು ಈವರೆಗೂ ಶೇ. 34ರಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆಯಿಂದಾಗಿ ನೀರಾವರಿ ಭಾಗದ ರೈತರು ಭೂಮಿಗೆ ಬೀಜ ಹಾಕಲು ಹಿಂದೇಟು ಹಾಕುವಂತಾಗಿದ್ದು, ಒಣ ಬೇಸಾಯ ನೆಚ್ಚಿ ಕೊಂಡವರು ಹೊಲದತ್ತ ಮುಖಮಾಡದಾಗಿದ್ದಾರೆ.

ಹಿನ್ನೀರು ಭಾಗದ ಬನ್ನಿಗೋಳ, ಕಿತ್ನೂರು, ಸಿಗೇನಹಳ್ಳಿ ರೈತರು ಪ್ರತಿವರ್ಷ ಅಧಿಕ ಪ್ರಮಾಣದಲ್ಲಿ ಈರುಳ್ಳಿ ಬಿತ್ತನೆಗೆ ಮುಂದಾಗುತ್ತಿದ್ದರೂ ಈ ಬಾರಿ ಬೀಜದ ಹಣ ಗಂಟು ಮಾಡೋದು ಕಷ್ಟ ಎಂದು ಈರುಳ್ಳಿ ತಂಟೆಗೆ ಹೋಗದೆ ಹಿಂಗಾರು ಮಳೆಯಾದರೂ ಉತ್ತಮವಾಗಿ ಬರಲಿ ಎಂದು ಕಾದು ಕುಳಿತಿದ್ದಾರೆ. ಅಲ್ಲಲ್ಲಿ ಕೊಳವೆ ಬಾವಿ ನೆಚ್ಚಿಕೊಂಡು ಹತ್ತಿ ಬೆಳೆ ಹಾಕಿದವರು ನಷ್ಟದ ಆತಂಕ ಎದುರಿಸುವಂತಾಗಿದೆ. ಮಳೆ ಕೊರತೆಯಿಂದ ಹತ್ತಿ ಬೆಳೆ ಪ್ರಮಾಣ ಕ್ಷೀಣಿಸಿದ್ದು ಬೀಜ ಗೊಬ್ಬರದ ಹಣ ಹಿಂದಿರುಗಿದರೆ ಸಾಕು ಎನ್ನುತ್ತಿದ್ದಾರೆ. ಹಿಂದಿನ ವರ್ಷ ಜುಲೈ ತಿಂಗಳವರೆಗೆ 1192 ಕ್ವಿಂಟಲ್ ಮೆಕ್ಕೆಜೋಳ ಬೀಜ ಬಿತ್ತನೆ ಮಾಡಲಾಗಿತ್ತು. ಆದರೆ, ಈ ಬಾರಿ ಕೇವಲ 762 ಕ್ವಿಂಟಾಲ್ ಮೆಕ್ಕೆಜೋಳ ಬೀಜ ಮಾರಾಟವಾಗಿದ್ದು, ಕೆಲ ರೈತರು ಬೀಜವನ್ನು ಕೊಂಡೊಯ್ದು ಮಳೆ ನಿರೀಕ್ಷೆಯಲ್ಲಿದ್ದಾರೆ.

ರೈತರಿಗೆ ಮಾಹಿತಿ
ಮಳೆ ಕೊರತೆಯಿಂದ ಪರ್ಯಾಯ ಬೆಳೆಗಳಾದ ಉರುಳಿ, ನವಣೆ, ರಾಗಿ ಮೊರೆ ಹೋಗುವುದು ಸೂಕ್ತ. ಮೆಕ್ಕೆಜೋಳ ಬೆಳೆಗೆ ವಿಮೆ ಪಾವತಿಸಲು ಜು. 31ವರೆಗೆ ಅವಕಾಶವಿದೆ. ಪಾಲ್ ಆರ್ಮಿ ವಾರ್ಮ, ಕೆಮಿಕಲ್ ಸ್ಪ್ರೇ ತೆಗೆದುಕೊಂಡು ಇರುವ ಬೆಳೆ ಉಳಿಸಿಕೊಳ್ಳಲು ರೈತರಿಗೆ ಮಾರ್ಗದರ್ಶನ ನೀಡಲಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ರೈತಸಂಪರ್ಕ ಕೇಂದ್ರಗಳ ಎಒಗಳ ಮೂಲಕ ರೈತರಿಗೆ ಸಮರ್ಪಕ ಮಾಹಿತಿ ನೀಡಲಾಗುತ್ತಿದೆ.
ಜೀವನ್‌ಸಾಬ್‌,
ಕೃಷಿ ಸಹಾಯಕ ನಿರ್ದೇಶಕರು, ಹಗರಿಬೊಮ್ಮನಹಳ್ಳಿ
ಬಿತ್ತನೆ ತಂಟೆಗೆ ಹೋಗಿಲ್ಲ
ನೀರಾವರಿ ಇದೆ ಎಂದು ಹೊಲಕ್ಕೆ ಬೀಜ ಹಾಕಿದರೆ ನಷ್ಟ ಗ್ಯಾರಂಟಿ ಎಂಬಂತಾಗಿದೆ. ಮಳೆ ಇಲ್ಲದೆ ಇರುವುದರಿಂದ ನೀರು ಯಾವಾಗ ಹೋಗುತ್ತದೆ ಎಂಬುವ ಆತಂಕ ಇದೆ. ಅಂತರ್ಜಲ ಪ್ರಮಾಣ ಸಾಕಷ್ಟು ಕುಸಿದಿದೆ. ಹಾಗಾಗಿ ಬಿತ್ತನೆ ತಂಟೆಗೆ ಹೋಗಿಲ್ಲ. ಹಿಂದೆ ಮಳೆ ಪ್ರಾರಂಭವಾದರೆ ಹಳ್ಳ ಕೊಳ್ಳ ತುಂಬುತ್ತಿದ್ದವು. ಈಗಿನ ಮಳೆಗೆ ಒಂದು ಟವಲ್ ಪೂರ್ಣ ತೊಯ್ಯೋದು ಕಷ್ಟವಾಗಿದೆ. ಜನಜೀವನ ಜೊತೆಗೆ ದನಕರುಗಳನ್ನು ಸಾಕೋದು ತುಂಬಾ ತೊಂದರೆಯಾಗಿದೆ.
ಪೂಜಾರ್‌ ಜಯ ರಾಮೇಶ್ವರ ಬಂಡಿ ರೈತ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.