ಹಕ್ಯಾಳದಲ್ಲಿ ನೀರಿಗಾಗಿ ಪರದಾಟ

ಬತ್ತಿದ ಕೆರೆ-ಗ್ರಾಮದಲ್ಲಿರುವ ಕೊಳವೆಬಾವಿಗಳ ಕುಸಿದ ಅಂತರ್ಜಲ

Team Udayavani, May 8, 2019, 1:00 PM IST

8-May-15

ಕಮಲನಗರ: ಹಕ್ಯಾಳ ಗ್ರಾಮದಲ್ಲಿ ಮಹಿಳೆಯರು ನೀರಿಗಾಗಿ ಪರದಾಡುತ್ತಿರುವುದು.

ಕಮಲನಗರ: ತಾಲೂಕಿನ ಹಕ್ಯಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಮಹಿಳೆಯರು ನಿತ್ಯ ಕೊಡ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಹತ್ತಿರವಿರುವ ಕೆರೆಯಲ್ಲಿ ನೀರು ಬತ್ತಿ ಹೋಗಿರುವುದರಿಂದ ಗ್ರಾಮದಲ್ಲಿರುವ ಕೊಳವೆ ಬಾವಿ, ತೆರೆದ ಬಾವಿಗಳಲ್ಲಿ ನೀರಿಲ್ಲದಂತಾಗಿದೆ. ಮುರ್ಕಿ ಗ್ರಾ.ಪಂ. ವ್ಯಾಪ್ತಿಯ ಈ ಗ್ರಾಮದಲ್ಲಿ 1200 ಕ್ಕೂ ಹೆಚ್ಚು ಜನ ಸಂಖ್ಯೆಯಿದ್ದು, 4 ಕೊಳವೆ ಬಾವಿ, 1 ತೆರೆದ ಬಾವಿ ಇದೆ.

ಇದರಲ್ಲಿ 2 ಕೊಳವೆ ಬಾವಿ ಬತ್ತಿ ಹೋಗಿದ್ದು, 2 ಕೊಳವೆ ಬಾವಿ, 1 ತೆರೆದ ಬಾವಿಯಿಂದ ನೀರು ಅಲ್ಪ-ಸ್ವಲ್ಪ ಬರುತ್ತಿದ್ದರಿಂದ ನೀರಿನ ಸಮಸ್ಯೆ ಉಂಟಾಗಿದೆ.

ಪ್ರಸಕ್ತ ಎಸ್‌.ಸಿ. ಬಡಾವಣೆಯಲ್ಲಿ 1 ಕೊಳವೆ ಬಾವಿ, ಹನುಮಾನ ಮಂದಿರದ ಹತ್ತಿರವಿರುವ 1 ಕೊಳವೆ ಮತ್ತು ಗ್ರಾಮದ ಹೊರವಲಯದಲ್ಲಿರುವ 1 ತೆರೆದ ಬಾವಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಅಂತರ್ಜಲದ ಮಟ್ಟ ಕುಸಿದ ಕಾರಣ ಗ್ರಾಮಸ್ಥರಿಗೆ ನೀರು ಸಾಕಾಗುತ್ತಿಲ್ಲ. ಸುಮಾರು ಒಂದು ತಿಂಗಳಿನಿಂದ ಗ್ರಾಮದಲ್ಲಿ ನೀರಿಗಾಗಿ ಮನೆಯ ಕೆಲಸಗಳನ್ನೆಲ್ಲ ಬಿಟ್ಟು ಮಹಿಳೆಯರು, ಮಕ್ಕಳು, ವೃದ್ಧರು ಕೊಡಗಳನ್ನು ಹಿಡಿದುಕೊಂಡು ಅಕ್ಕ-ಪಕ್ಕದ ಹೊಲ, ಗದ್ದೆಗಳಿಗೆ ಹೋಗಿ ನೀರು ತಂದು ಬಳಸಿಕೊಳ್ಳುತ್ತಿದ್ದಾರೆ. ಈ ಮಧ್ಯದಲ್ಲಿ ವಿದ್ಯುತ್‌ ಕೈಕೊಡುತ್ತಿದೆ. ಆಗ ಗಂಟೆಗಟ್ಟಲೇ ಕಾಯ್ದು ನೀರು ತರಬೇಕಿದೆ ಎಂದು ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ನೀರಿನ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಗ್ರಾಮ ಪಂಚಾಯತ್‌ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಚುನಾಯಿತರು, ಅಧಿಕಾರಿಗಳು ಕೂಡಲೇ ಗ್ರಾಮದಲ್ಲಿ ಟ್ಯಾಂಕರ್‌ ನೀರಿನ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಸದ್ಯ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಸಂಬಂಧಿತ ಅಧಿಕಾರಿಗಳು ಟ್ಯಾಂಕರ್‌ ವ್ಯವಸ್ಥೆ ಮಾಡಿಸಿ ನೀರಿನ ಸಮಸ್ಯೆ ಬಗೆಹರಿಸಬೆಕು.
• ನಾಗೇಂದ್ರ ಬಿರಾದಾರ, ಗ್ರಾಮಸ್ಥ.

ನೀರಿನ ಬರ ನಿಗಿಸಲು ಖಾಸಗಿಯವಾಗಿ ಕಿರಣ ಪಾಟೀಲ್ ಅವರ ಹೊಲದ ಕೊಳವೆ ಬಾವಿಯಿಂದ ಉಚಿತ ನೀರು ಕೊಡುತ್ತಿದ್ದಾರೆ. ಮತ್ತೂಬ್ಬ ಖಾಸಗಿ ಅವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಜನರಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
ಹಣಮಂತರಾಯ ಕೌಟಗೆ,
ಮುರ್ಕಿ ಪಿಡಿಒ.

ಗ್ರಾಮದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ನಮ್ಮ ಹೊಲದಲ್ಲಿರುವ ಕೊಳವೆಯಿಂದ ಉಚಿತವಾಗಿ ನೀರನ್ನು ಪೂರೈಸುತ್ತಿದ್ದೇನೆ. ಮುಂದೆಯೂ ಕೂಡಾ ನೀರಿನ ಸಮಸ್ಯೆ ಬಗೆಹರಿಸಲು ಉಚಿತವಾಗಿ ನೀರನ್ನು ಕೊಡಲು ಸಿದ್ಧ.
ಕಿರಣ ಪಾಟೀಲ್, ಗ್ರಾಮಸ್ಥ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.