ಇಂದ್ರಮ್ಮನ ಕೆರೆ ಒಡೆದರೆ ಹಾನಿ

ಅಳ್ನಾವರ ತಾಲೂಕು ಹುಲಿಕೇರಿಯ 700 ಎಕರೆ ವಿಸ್ತೀರ್ಣದ ಕೆರೆ

Team Udayavani, Aug 12, 2019, 2:42 PM IST

12-Agust-33

ಹಳಿಯಾಳ: ಹುಲಿಕೇರಿ ಇಂದ್ರಮ್ಮನ ಕೆರೆ ಎದುರು ಪ್ರವಾಹದಿಂದ ದೊಡ್ಡ ಹಳ್ಳ ಸೃಷ್ಟಿಯಾಗಿದೆ.

ಹಳಿಯಾಳ: ಹಳ್ಳಗಳಲ್ಲಿ ಪ್ರವಾಹ ಸೃಷ್ಠಿಗೆ ಕಾರಣವಾದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದ ಇಂದ್ರಮ್ಮನ ಕೆರೆ ಮಳೆರಾಯನ ಬಿಡುವಿನಿಂದ ಸದ್ಯ ಶಾಂತವಾಗಿದೆ. ಅಲ್ಲದೇ ಕೆರೆ ಒಡೆಯುತ್ತೆ ಎನ್ನುವ ಭೀತಿ ದೂರವಾಗಿದೆ.

ಪಟ್ಟಣದಿಂದ ಕೇವಲ 20 ಕಿಮೀ ಅಂತರದಲ್ಲಿರುವ ಅಳ್ನಾವರ ತಾಲೂಕು ಹುಲಿಕೇರಿ ಗ್ರಾಮದ ಪಕ್ಕದಲ್ಲೇ ವಿಶಾಲ ಗುಡ್ಡ-ಬೆಟ್ಟಗಳ ಮಧ್ಯ ಸುಮಾರು 700 ಎಕರೆ ವಿಶಾಲವಾದ ಪ್ರದೇಶದಲ್ಲಿದೆ ಇಂದ್ರಮ್ಮನ ಕೆರೆ. ಇಲ್ಲಿಂದಲೇ 3 ದಿನ ಹಳಿಯಾಳದ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ, ಕೃಷಿ ಸಲಕರಣೆಗಳು, ಪಂಪ್‌ಸೆಟ್‌ಗಳು, ಮನೆಗಳು, ಕೊಟ್ಟಿಗೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಅಪಾರ ನಷ್ಟ ಸಂಭವಿಸಿತ್ತು.

ವಿಶಾಲವಾದ ಕೆರೆ ತನ್ನ ಸಾಮರ್ಥ್ಯಕ್ಕಿಂತ ಅಧಿಕ ನೀರು ಶೇಖರಣೆಯಾಗಿ ತಡೆಗೊಡೆ ಮುಂದಿನ ಸುಮಾರು 50 ಮೀಟರ್‌ಗೂ ಹೆಚ್ಚು ಸುತ್ತಳತೆ ಪ್ರದೇಶವನ್ನು ಕೊಚ್ಚಿಕೊಂಡು ದೊಡ್ಡ ಕಂದಕ ಸೃಷ್ಠಿಸಿ ಅಪಾರ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ಹೊಸ ಹಳ್ಳವೇ ಇಲ್ಲಿ ನಿರ್ಮಾಣವಾಗಿದೆ.

ಇನ್ನೂ ಈ ಕೆರೆಗೆ ಇರುವ ತಡೆಗೊಡೆ ಎದುರಿಗೆ ಮಧ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಅಲ್ಲದೇ ಸಿಮೆಂಟಿನ ಗಟ್ಟಿಮುಟ್ಟಾದ ತಡೆಗೊಡೆಯೊಂದೆ ಈ ನೀರಿಗೆ ಹಾನಿಗೊಳಗಾಗದೆ ಹಿಡಿದಿಟ್ಟುಕೊಂಡಿದೆ. ಆದರೆ ಈ ಕೆರೆ ಮೇಲೆ ಇರುವ ತಡೆಗೊಡೆ 3 ಅಡಿ ಮೇಲ್ಮೈನಲ್ಲಿ ನೀರು ಗೊಡೆ ಒಳಗಿಂದ ಹರಿಯುತ್ತಿದೆ ಆದರೆ, ಕೆಳಭಾಗದಲ್ಲಿ ಬಲಿಷ್ಠ 20 ಮೀಟರ್‌ಗೂ ಅಧಿಕ ದೊಡ್ಡ ಕಾಂಕ್ರಿಟ್ ತಡೆಗೊಡೆ ಇರುವುದು ಕೆರೆ ಒಡೆಯದಂತೆ ತಡೆದಿರುವುದು ಜನರ ಅದೃಷ್ಠ.

ಮಿನಿ ಅಣೆಕಟ್ಟಿನಂತಿರುವ ಈ ಕರೆಯ ಗೇಟಗಳು ಭಾರಿ ಮಳೆಯ ಸಂದರ್ಭದಲ್ಲಿ ತೆರೆಯಲಾಗದೆ ಸಮಸ್ಯೆ ಎದುರಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತ ಕೂಡಲೇ ಸಂಬಂಧಿಸಿದ ಇಲಾಖೆ ಇಂಜೀನಿಯರಗಳು ಹಾಗೂ ನುರಿತ ತಂತ್ರಜ್ಞರಿಂದ ಸಲಹೆ ಪಡೆದು ಸದ್ಯ ಒಂದು ಗೇಟ್ ತೆರೆದಿದೆ. ಪಕ್ಕದಲ್ಲಿ ದೊಡ್ಡ ಟ್ರೆಂಚ್ ತೊಡಿ ನೀರು ಹೊರಬಿಡಲಾಗುತ್ತಿದ್ದು ಕೆರೆಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ.

ಸದ್ಯ ಕೆರೆ ಸುರಕ್ಷಿತವಾಗಿದ್ದು ಒಂದುವೇಳೆ ತಡೆಗೊಡೆ ಒಡೆದರು ಹಳ್ಳಗಳು ತುಂಬಿ ಹರಿಯಲಿವೆ. ದೊಡ್ಡ ಪ್ರಮಾಣದ ಹಾನಿ ಸಂಭವಿಸುವುದಿಲ್ಲ ಎಂದು ಅನುಭವಿ ರೈತರು ಹೇಳುತ್ತಾರೆ. ಆದರೂ ಕೂಡ ಕೆರೆಯ ತಡೆಗೊಡೆಗೆ ಆಗಿರುವ ಹಾನಿ ಸರಿಪಡಿಸುವವರೆಗೆ ನದಿ ಪಾತ್ರದ ಜನರು ಕಟ್ಟೆಚ್ಚರದಿಂದ ಇರಲು ತಾಲೂಕಾಡಳಿತ ಸೂಚಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.