ಶಾಂತಿಯುತವಾಗಿ ನಡೆದ ಸ್ಥಳೀಯ ಚುನಾವಣೆ

ಹನೂರು ಪಪಂ: ಶೇ.80.13 ಮತದಾನ • ಯಳಂದೂರು ಪಪಂ: ಶೇ. 86.31 ಮತದಾನ

Team Udayavani, May 30, 2019, 11:59 AM IST

30-May-20

ಪಟ್ಟಣದ 2ನೇ ವಾರ್ಡಿನ ಮತಗಟ್ಟೆಯಲ್ಲಿ ಮತ ಚಲಾಯಿಸಲು ಸರದಿಯಲ್ಲಿ ನಿಂತಿರುವ ಮತದಾರರು.

ಹನೂರು: ಪಟ್ಟಣ ಪಂಚಾಯಿತಿಯ 13 ವಾರ್ಡುಗಳಿಗೆ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಜರುಗಿದ್ದು 9,024 ಮತದಾರರ ಪೈಕಿ 7231 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದು ಶೇ.80.13 ಮತದಾನವಾಗಿದೆ.

ಹನೂರು ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 13 ವಾರ್ಡುಗಳಿದ್ದು 41 ಅಭ್ಯರ್ಥಿಗಳು ಕಣದಲ್ಲಿದ್ದರು. 13 ವಾರ್ಡುಗಳ ಚುನಾವಣೆಗಾಗಿ 4 ಮತಕೇಂದ್ರಗಳಲ್ಲಿ 13 ಮತಗಟ್ಟೆಗಳನ್ನು ತೆರೆಯಲಾಗಿತ್ತು. 1, 2, 3, 4ನೇ ವಾರ್ಡಿನ ಮತದಾರರಿಗೆ ಬಿ.ಮುನಿಯಪ್ಪಗೌಡ ಪ್ರೌಢ ಶಾಲೆ 5, 6, 7, 8ನೇ ವಾರ್ಡಿನ ಮತದಾರರಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, 9, 10, 11ನೇ ವಾರ್ಡಿನ ಮತದಾರರಿಗೆ ಕ್ರಿಸ್ತರಾಜ ವಿದ್ಯಾಸಂಸ್ಥೆ ಮತ್ತು 12 ಮತ್ತು 13ನೇ ವಾರ್ಡುಗಳ ಮತದಾರರಿಗೆ ಆರ್‌.ಎಸ್‌.ದೊಡ್ಡಿ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಗಳನ್ನು ತೆರೆದು ಮತದಾರರಿಗೆ ಅವಕಾಶ ಕಲ್ಪಿಸಲಾಗಿತ್ತು. 7230 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮತದಾರರಿಗೆ ಡಿಮ್ಯಾಂಡ್‌: ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಇನ್ನಿತರೆ ಯಾವುದೇ ಚುನಾವಣೆಗಳಲ್ಲಿ ನಡೆಯದ ಬಿರುಸಿನ ಮತದಾನ ಪಪಂ ಚುನಾವಣೆಯಲ್ಲಿ ಜರುಗಿತು. ಮತದಾರರು ಸಾಲಿನಲ್ಲಿ ನಿಂತು ಮತಚಲಾಯಿಸಿದರು. ಮತಗಟ್ಟೆ ಹೊರಗಡೆ ಆಯಾ ಪಕ್ಷಗಳ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಪಕ್ಷದ ಚಿಹ್ನೆಯುಳ್ಳ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಕೈ ಮುಗಿದು ಮನವಿ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ವೃದ್ಧರಿಗೆ ಸಹಾಯ: ತಮ್ಮನ್ನು ಬೆಂಬಲಿಸಲಿ ಎಂಬ ಕಾರಣದಿಂದ ಪಟ್ಟಣದ ತೋಟದ ಮನೆಗಳಲ್ಲಿ ವಾಸವಿದ್ದ ಹಾಗೂ ನಡೆದು ಬರಲು ಸಾಧ್ಯವಾಗದ ವಯೋವೃದ್ಧರು, ಅಂಗವಿಕಲರನ್ನು ಬೈಕ್‌-ಆಟೋ ಕಾರು ಇನ್ನಿತರ ವಾಹನಗಳ ಮೂಲಕ ಕರೆ ತಂದು ಮತದಾರರನ್ನು ಪುನಃ ಅವರ ಸ್ಥಳಕ್ಕೆ ತಲುಪಿಸುತ್ತಿದ್ದು ಕಂಡು ಬಂದಿತು.

ಕಾಳಜಿಯಿಂದ ಮಾಹಿತಿ: ಹನೂರು ಪಪಂ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಮತದಾನ ಮಾಡುವ ಹಕ್ಕನ್ನು ಹೊಂದಿರುವ ಬೆಂಗಳೂರು-ಮೈಸೂರು ಸೇರಿದಂತೆ ವಿವಿಧ ನಗರ ಪಟ್ಟಣಗಳಿಗೆ ವಲಸೆ ಹೋಗಿ ನೆಲೆಸಿರುವ ಮತದಾರರನ್ನು ಕರೆ ತರುವ ನಿಟ್ಟಿನಲ್ಲಿಯೂ ಕೂಡ ಆಯಾ ಪಕ್ಷಗಳ ಅಭ್ಯರ್ಥಿಗಳು ಗಮನಹರಿಸಿರುವುದು ಕಂಡು ಬಂದಿತು. ಗುರುತಿನ ಚೀಟಿ, ಮತಗಟ್ಟೆ ಸಂಖ್ಯೆ ಇನ್ನಿತರೆ ಮಾಹಿತಿ ತಿಳಿಯದೇ ಪರದಾಡು ತ್ತಿದ್ದವರಿಗೆ ರಾಜಕೀಯ ಮುಖಂಡರು ಅತ್ಯಂತ ಕಾಳಜಿಯಿಂದ ಮಾಹಿತಿ ನೀಡುತ್ತಿದ್ದರು. ಮತದಾರರ ಮನವೊಲಿಸುವಲ್ಲಿ ಕುರುಡು ಕಾಂಚಾಣ ಕೂಡ ಸದ್ದು ಮಾಡಿದೆ ಎನ್ನಲಾಗಿದ್ದು, ಪಟ್ಟಣದ ಪಂಚಾಯಿತಿಯ 8 ಮತ್ತು 9ನೇ ವಾರ್ಡಿನಲ್ಲಿ ಕುರುಡು ಕಾಂಚಾಣ ನರ್ತನ ಮಾಡಿದೆ ಎನ್ನಲಾಗಿದೆ.

ಪಟ್ಟಣದಲ್ಲಿ ಹಬ್ಬದ ವಾತಾವರಣ: ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಟ್ಟಣದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. 4 ಮತಗಟ್ಟೆಗಳ ಮುಂದೆಯೂ ಜನಜಂಗುಳಿಯೇ ನಿರ್ಮಾಣವಾಗಿದ್ದು ಎಲ್ಲಾ ಮತಗಟ್ಟೆಗಳ ಮುಂದೆ ಆಯಾ ಪಕ್ಷಗಳ ಅಭ್ಯರ್ಥಿಗಳು ಶಾಮಿಯಾನ ಹಾಕಿಸಿ, ಕಿರ್ಚಿಗಳನ್ನು ಹಾಕಿಸಿ ಮತದಾರರಿಗೆ ಅವಶ್ಯಕವಾದ ಮಾಹಿತಿಗಳನ್ನು ನೀಡುತ್ತಾ ಮತಚೀಟಿ ದೊರೆಯದೆ ಇದ್ದ ಮತದಾರರಿಗೆ ಪಟ್ಟಿಯಲ್ಲಿ ಅವರ ಕ್ರಮ ಸಂಖ್ಯೆಗಳನ್ನು ಹುಡುಕುತ್ತಾ ಕೊಡುತ್ತಿದ್ದುದು ಸಾಮಾನ್ಯವಾಗಿತ್ತು. ಒಟ್ಟಾರೆ ಇಂದಿನ ಚುನಾವಣೆ ಹಬ್ಬದ ಮಾದರಿಯಲ್ಲಿ ಜರುಗಿದ್ದ ಜನ ಅಲ್ಲಲ್ಲಿ ಗುಂಪು ಗುಂಪಾಗಿ ಚುನಾವಣಾ ವಿಚಾರಗಳನ್ನು ಚರ್ಚಿಸುತ್ತಿದ್ದುದು ಸಾಮಾನ್ಯವಾಗಿತ್ತು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.