ಅರ್ಚಕರಿಗೆ 6ನೇ ವೇತನ ಆಯೋಗ ಶೀಘ್ರ ಜಾರಿ

ತಹಶೀಲ್ದಾರ್‌ ಗ್ರೇಡ್‌ನ‌ ಪ್ರತ್ಯೇಕ ಕಾರ್ಯನಿರ್ವಾಹಕ ಅಧಿಕಾರಿ ನೇಮಕ

Team Udayavani, Jun 19, 2019, 4:40 PM IST

19-June-34

ಹರಪನಹಳ್ಳಿ: ಕೋಟೆ ಆಂಜನೇಯ ದೇವಾಲಯ ಸುತ್ತ ಕಾಂಪೌಂಡ್‌ ನಿರ್ಮಿಸಲು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಸ್ಥಳ ಪರಿಶೀಲಿಸಿದರು.

ಹರಪನಹಳ್ಳಿ: ರಾಜ್ಯದ ದೇವಾಲಯಗಳ ಅರ್ಚಕರ ಹಾಗೂ ಸಿಬ್ಬಂದಿಗೆ 5ನೇ ಆಯೋಗದ ಶಿಫಾರಸಿನಂತೆ ಈಗಾಗಲೇ ವೇತನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ 6ನೇ ವೇತನ ಆಯೋಗದ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.

ಪಟ್ಟಣದ ಗೋಕಣೇಶ್ವರ ಮತ್ತು ಕೋಟೆ ಆಂಜನೇಯ ದೇವಾಲಯಗಳಿಗೆ ಮಂಗಳವಾರ ಭೇಟಿ ನೀಡಿದ ನಂತರ ಮಾತನಾಡಿದ ಅವರು, ತಾಲೂಕಿನ ಐತಿಹಾಸಿಕ ಉಚ್ಚಂಗಿದುರ್ಗ ಗ್ರಾಮದ ಉಚ್ಚಂಗೆಮ್ಮ ದೇವಾಲಯ, ಕೂಲಹಳ್ಳಿ ಗ್ರಾಮದ ಗೋಣಿಬಸವೇಶ್ವರ ದೇವಾಲಯ, ಪಟ್ಟಣದ ಗೋಕರ್ಣೇಶ್ವರ ದೇವಾಲಯ ಸೇರಿ ಒಟ್ಟು 3 ದೇವಾಲಯಗಳ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ತಹಶೀಲ್ದಾರ್‌ ಗ್ರೇಡ್‌ನ‌ ಪ್ರತ್ಯೇಕ ಕಾರ್ಯನಿರ್ವಾಹಕ ಅಧಿಕಾರಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಪಟ್ಟಣದ ಪುರಾತನ ಕಾಲದ ಗೋಕಣೇಶ್ವರ ದೇವಾಲಯ ಅಭಿವೃದ್ಧಿ ಮತ್ತು ಮೇಲ್ಛಾವಣಿ ದುರಸ್ತಿಗಾಗಿ ಸುಮಾರು 20 ಲಕ್ಷ ರೂ. ಅನುದಾನ ನೀಡಲಾಗುವುದು. ಈ ಕುರಿತು ಕ್ರಿಯಾ ಯೋಜನೆ ತಯಾರಿಸುವಂತೆ ಹಾಗೂ ಗೋಕರ್ಣೇಶ್ವರ ದೇವಾಲಯಕ್ಕೆ ಆರ್ಚಕರ ನೇಮಕ ಮಾಡಿಕೊಂಡು ಆದೇಶ ಪತ್ರ ವಿತರಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಮಹೇಶ್‌ ಅವರಿಗೆ ಸೂಚಿಸಿದರು. ದೇವಾಲಯ ಹೊರಗೆ ನೀರಿನ ತಟ್ಟಿ ನಿರ್ಮಾಣ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಾಳೇಗಾರ ಸಾಮ್ರಾಜ್ಯದ ಪ್ರಮುಖ ದೇವಾಲಯ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ದೇವಾಲಯ ಸುತ್ತಲೂ ಕಾಂಪೌಂಡ್‌ ಮತ್ತು ಮೇಲ್ಛಾವಣಿ ನಿರ್ಮಾಣಕ್ಕೆ ಈಗಿರುವ ಕಾಣಿಕೆ ಹುಂಡಿ ಹಣ ಮತ್ತು ದೇವಸ್ಥಾನ ಉಳಿತಾಯ ನಿಧಿ 20ಲಕ್ಷ ರೂ.ಸೇರಿ ಒಟ್ಟು ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಅಂದಾಜು ಪಟ್ಟಿ ಸಲ್ಲಿಸುವಂತೆ ದೇವಾಲಯ ಸಮಿತಿ ಪದಾಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಚಂದ್ರಶೇಖರಭಟ್, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವಯೋಗಿ, ಜಿಪಂ ಸದಸ್ಯ ಎಚ್.ಬಿ.ಪರುಶುರಾಮಪ್ಪ, ಮುಖಂಡರಾದ ಶಶಿಧರ ಪೂಜಾರ, ಎಂ.ರಾಜಶೇಖರ್‌, ಎಚ್.ಕೆ.ಹಾಲೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ, ಎಂ.ಟಿ.ಬಸವನಗೌಡ, ಚಿರಸ್ತಹಳ್ಳಿ ಮರಿಯಪ್ಪ, ಎನ್‌.ಮಜೀದ್‌, ಬಾಣದ ಅಂಜಿನಪ್ಪ, ಆರ್‌.ಜಾಕೀರ, ಪಟ್ನಾಮದ ನಾಗರಾಜ, ಪುರಸಭೆ ಸದಸ್ಯರಾದ ಎಸ್‌.ಜಾಕೀರಹುಸೇನ್‌, ಗೊಂಗಡಿ ನಾಗರಾಜ್‌, ಭರತೇಶ್‌, ಗಣೇಶ್‌, ತಹಶೀಲ್ದಾರ್‌ ಡಾ.ನಾಗವೇಣಿ, ಮುಖ್ಯಾಧಿಕಾರಿ ನಾಗರಾಜ ನಾಯ್ಕ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.