ಲೋಕಾ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

•ಕ್ರಿಯಾಯೋಜನೆ ಅನುಮೋದನೆಗೆ ಸಿಇಒ ಪ್ರತಿಕ್ರಿಯೆ ನೀಡುತ್ತಿಲ್ಲ: ತಾಪಂ ಸದಸ್ಯರ ದೂರು

Team Udayavani, Sep 6, 2019, 5:26 PM IST

6-Septecember-26

ಹರಪನಹಳ್ಳಿ: ಪಟ್ಟಣದ ತಾಪಂ ರಾಜೀವಗಾಂಧಿ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿತು.

ಹರಪನಹಳ್ಳಿ: ಪಟ್ಟಣದ ತಾಲೂಕು ಕಚೇರಿ ರಾಜೀವಗಾಂಧಿ ಸಭಾಂಗಣದಲ್ಲಿ ಗುರುವಾರ ಲೋಕಾಯುಕ್ತ ಸಿಪಿಐ ವಂಸತ್‌ ವಿ.ಅಸೋದೆ ಮತ್ತು ಏರಿಸ್ವಾಮಿ ನೇತೃತ್ವದ ಅಧಿಕಾರಿಗಳ ತಂಡ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ನಂತರ ಸಭೆ ನಡೆಸಿದರು.

ಹಾರಕನಾಳು, ಗುಂಡಗತ್ತಿ ಗ್ರಾಮ ಪಂಚಾಯಿತಿ, ಪುರಸಭೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 10 ದೂರು ಸಲ್ಲಿಕೆಯಾದವು. ಹಗರಿಗಜಾಪುರ ಗ್ರಾಮದ ರೈತ ಸುರೇಶ್‌ 1968ರಿಂದಲೂ ನಾನು ಭೂಮಿ ಉಳಿಮೆ ಮಾಡುತ್ತ ಬಂದಿದ್ದೇನೆ. ಆದರೆ ಈಗ ಏಕಾಏಕಿ ಬೇರೆಯವರ ಹೆಸರಿಗೆ ಬದಲಾವಣೆಯಾಗಿದೆ ಎಂದು ದೂರಿದಾಗ ನಾವು ಕಾನೂನು ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಿದ್ದೇವೆ. ನಿಮಗೆ ಯಾವುದೇ ರೀತಿ ಅನುಮಾನಗಳು ಇದ್ದಲ್ಲಿ ಮೇಲಧಿಕಾರಿಗಳಿಗೆ ದೂರು ನೀಡಬಹುದು ಎಂದು ಉಪವಿಭಾಗಾಧಿಕಾರಿ ವಿ.ಕೆ.ಪ್ರಸನ್ನಕುಮಾರ್‌ ಸಮಜಾಯಿಷಿ ನೀಡಿದರು.

ಹಾರಕನಾಳು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ತಾಪಂ ಸದಸ್ಯ ಹುಲಿಕಟ್ಟಿ ಚಂದ್ರಪ್ಪ, ಮುಖಂಡರಾದ ಶಶಿಕುಮಾರನಾಯ್ಕ, ಗ್ರಾಪಂ ಉಪಾಧ್ಯಕ್ಷ ನಾಗರಾಜ್‌ ಅವರು, ಹಾರಕನಾಳು ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರದ 14ನೇ ಹಣಕಾಸು ಯೋಜನೆಯ 23ರಿಂದ 24ಲಕ್ಷರೂ. ಕ್ರಿಯಾಯೋಜನೆಗೆ ಅನುಮೋದನೆಗೆ ಕಳಿಸಿದ್ದೇವೆ. ಆದರೆ ಇಲ್ಲಿಯವರಿಗೂ ಬಳ್ಳಾರಿ ಜಿಲ್ಲೆಯ ಸಿಇಓ ನಮಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೇ ಚುನಾಯಿತ ಪ್ರತಿನಿಧಿಗಳನ್ನು ಹಾಗೂ ಸಾರ್ವಜನಿಕರನ್ನು ಅನುಮಾನಸ್ಪದವಾಗಿ ನೋಡುತ್ತಾರೆ ಎಂದು ದೂರಿದರು.

ನೀವು ನಮಗೆ ದೂರು ನೀಡಿ, ನಾವು ಸಿಇಓ ಅವರ ಜೊತೆ ಮಾತನಾಡುತ್ತೇವೆ. ನೀವು ಯಾವುದೇ ಕೆಲಸ ಕಾರ್ಯಕ್ರಮಗಳನ್ನು ಮಾಡಿದರೂ ಸಾರ್ವಜನಿಕರಿಗೆ ಅನುಕೂಲವಾಗುವಂಥ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ ಎಂದು ಲೋಕಯುಕ್ತ ಸಿಪಿಐ ವಸಂತ ವಿ. ಅಸೋಧೆ ಪ್ರತಿಕ್ರಿಯೆ ನೀಡಿದರು. ಮಧ್ಯ ಪ್ರವೇಶಿಸಿದ ತಾಪಂ ಇಓ ಮಮತ ಹೊಸಗೌಡರ್‌ ಅವರು, 14ನೇ ಹಣಕಾಸು ಅನುದಾನ ಈ ಹಿಂದೆ ಹರಪನಹಳ್ಳಿ ತಾಲೂಕು ದಾವಣಗೆರೆ ಜಿಲ್ಲೆಯಲ್ಲಿದ್ದಾಗ ವರ್ಷಕ್ಕೆ ಒಂದು ಭಾರಿ ಹಣ ಬಿಡುಗಡೆ ಆಗುತ್ತಿತ್ತು. ಆದರೆ ಈಗ ತಾಲೂಕು ಮರಳಿ ಬಳ್ಳಾರಿ ಜಿಲ್ಲೆಗೆ ಸೇರಿರುವುದರಿಂದ 14ನೇ ಹಣಕಾಸು ಅನುದಾನ ವರ್ಷಕ್ಕೆ ಎರಡು ಭಾರಿ ಬಿಡುಗಡೆಯಾಗುತ್ತಿದೆ. ಆ ಅನುದಾನದಲ್ಲಿ ಗ್ರಾಮೀಣ ಭಾಗದಲ್ಲಿರುವ ಚರಂಡಿಗಳ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ತೋಗರಿಕಟ್ಟಿ ಗ್ರಾಮ ಪಂಚಾಯಿತಿ ಗೋವೇರಹಳ್ಳಿ ರಮೇಶ್‌ ಅವರು ನಮ್ಮ ಗ್ರಾಮದ ರುದ್ರಭೂಮಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಲಿಖೀತವಾಗಿ ದೂರು ನೀಡಿದರೆ ಮಾತ್ರ ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ. ಇಲ್ಲವಾದಲ್ಲಿ ಏನು ಮಾಡಲು ಸಾಧ್ಯವಾಗಲ್ಲ ಎಂದು ಲೋಕಾಯುಕ್ತ ಸಿಪಿಐ ವಸಂತ ವಸೋದೆ ತಿಳಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್‌, ಲೋಕಾಯುಕ್ತ ಸಿಪಿಐ ಏರಿಸ್ವಾಮಿ, ಇಓ ಮಮತ ಹೊಸಗೌಡರ್‌, ಉಪತಹಶೀಲ್ದಾರ್‌ ರವಿ, ಹನುಮಂತಪ್ಪ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.