ಬೆಳಕಿನ ಹಬ್ಬದ ಸಂಭ್ರಮವೋ ಸಂಭ್ರಮ..

ತಾಂಡಾಗಳಲ್ಲಿ ವಿಶೇಷ ದೀಪಾವಳಿ ಆಚರಣೆಕಾಡಿಗೆ ತೆರಳಿ ಹೂ ತರುವ ಯುವತಿಯರುನೃತ್ಯ ಮಾಡಿ ವಿಶಿಷ್ಟಆಚರಣೆ

Team Udayavani, Oct 30, 2019, 12:24 PM IST

30-October-6

ಹರಪನಹಳ್ಳಿ: ಎಲ್ಲ ತಾಂಡಗಳಲ್ಲಿ ಮಂಗಳವಾರ ದೀಪಾವಳಿ ಹಬ್ಬದ ಅಂಗವಾಗಿ ಯುವತಿಯರು ಕಾಡಿಗೆ ತೆರಳಿ ಹೂ ತಂದು ನಂತರ ನೃತ್ಯ ಮಾಡುವ ಮೂಲಕ ವಿಶಿಷ್ಟವಾಗಿ ದೀಪಾವಳಿ ಹಬ್ಬವನ್ನು ಆಚರಿಸಿದರು.

ಅಮಾವಾಸ್ಯೆ ದಿನದಂದು ತಾಂಡಗಳಲ್ಲಿರುವ ಎತ್ತುಗಳನ್ನು ಶುಭ್ರವಾಗಿಟ್ಟು, ವಿವಿಧ ಅಕರ್ಷಕ ಬಣ್ಣಗಳಿಂದ ಅಲಂಕಾರ ಮಾಡಿದರು. ನಂತರ ಪ್ರತಿಯೊಂದು ಎತ್ತಿನ ಕೊರಳಲ್ಲಿ ಒಣ ಕೊಬ್ಬರಿ ಕಟ್ಟಿ ಬೆದರಿಸಿ ಓಡಿಸಲಾಯಿತು.

ಅದನ್ನು ಪಳಗಿಸಿ ಹಿಡಿದುಕೊಂಡು ಬಂದ ಯುವಕರಿಗೆ ಗ್ರಾಮಸ್ಥರು,ಹಿರಿಯರು ಬಹುಮಾನ ನೀಡಿ ಎಲ್ಲರೆದುರು ಪುರಸ್ಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳವಾರ ಯುವತಿಯರು ಮತ್ತು ಮಹಿಳೆಯರು ಮಡಿಯಿಂದ ಸಿಹಿ ಅಡುಗೆ ತಯಾರಿಸಿದ ನಂತರ ಡಲ್ಯ (ಮಾಹಿತಿದಾರ) ಊರಿನ ಗೌಡರ ಸೂಚನೆಯಂತೆ ಹಲಗೆ ಬಡಿಯುವ ಮೂಲಕ ಪ್ರತಿಯೊಂದು ಮನೆಗಳಿಂದ ಅವಿವಾಹಿತ ಯುವತಿಯರು ಹಟ್ಟಿ ನಾಯಕರ ಮನೆ ಹತ್ತಿರ ಬರಬೇಕು ಎಂದು ಡಂಗೂರ ಸಾರಿದರು. ಯುವತಿಯರು ಹಟ್ಟಿ ನಾಯಕರ ಮನೆ ಬಳಿ ಸೇರಿ ಲಂಬಾಣಿ ಭಾಷೆಯಲ್ಲಿ ಹಾಡು ಹೇಳುತ್ತ ಕುಣಿದು ಸಂಭ್ರಮಿಸಿದರು. ನಂತರ ಸಂಜೆ ವೇಳೆ ಹಟ್ಟಿ ಗೌಡರ ಹೆಂಡತಿ ಹಾಗೂ ತಾಂಡದ ಹಿರಿಯರು ಸೇರಿಕೊಂಡು ತಾಂಡದ ಕೊನೆಯ ಭಾಗಕ್ಕೆ ಬಂದು ಹೂವುಗಳನ್ನು ತರಲು ಕಾಡಿಗೆ ತೆರಳುವ ಯುವತಿಯರಿಗೆ ಬೀಳ್ಕೊಟ್ಟರು.

ಕಾಡಿನಲ್ಲಿ ಸಿಗುವ ಕಣಗಲು (ವಲಾಣ್ಯ) ಹೂ ಕಿತ್ತುಕೊಂಡು ಬುಟ್ಟಿಯಲ್ಲಿಟ್ಟುಕೊಂಡು ಸಾಂಪ್ರದಾಯಿಕ ನೃತ್ಯ ಮಾಡುತ್ತ ಶ್ಯಾಲು(ಛಾಟ್ಯಾ) ಹೊದ್ದು ಬುನಃ ತಾಂಡಕ್ಕೆ ಆಗಮಿಸಿದಾಗ ಬುನಃ ಹಿರಿಯರು ಮತ್ತು ಹಟ್ಟಿ ಗೌಡರು ತಾಂಡ ಗಡಿ ಬಳಿ ಬಂದು ಸ್ವಾಗತಿಸಿಕೊಂಡರು. ಹೂವಿನ ಬುಟ್ಟಿಗಳನ್ನು ಹೊತ್ತುಕೊಂಡ ಯುವತಿಯರ ಗುಂಬು ತಾಂಡದ ಪ್ರತಿಯೊಂದು ಮನೆಗೂ ತೆರಳಿ ಸಗಣಿಯ ಗುರ್ಚಿಯಲ್ಲಿ ಹೂಗಳನ್ನು ಇಟ್ಟು ಬಂದರು.

ಸಂಜೆ ಸಮಯದಲ್ಲಿ ಮನೆಗೊಬ್ಬ ಯುವತಿಯರು ದೀಪ ಹಿಡಿದುಕೊಂಡು ಗ್ರಾಮದ ದೇವಾಲಯ ಬಳಿಯಿಟ್ಟು ಪೂಜೆ ಸಲ್ಲಿಸಿ ನಂತರ ಅವರಿಗೆ ಇಷ್ಟವಾದಂಥ ಮನೆಗಳಿಗೆ ತೆರಳಿ ಮನೆ ಹಾಗೂ ಅವರ ಹೆಸರು ಸೇರಿಸಿಕೊಂಡು
ಹಾಡು ಹೇಳುವ ಮೂಲಕ ಶುಭಾಶಯ ಕೋರಿದರು.

ಚಿಕ್ಕವರಿಗೂ-ಹಿರಿಯರು ಎಲ್ಲರಿಗೂ ನಮನಗಳು. ಈ ತುಂಬಿದ ಮನೆ ಸದಾ ಹಸಿರಾಗಿರಾಗಿರುವಂತೆ ಸದಾ ನೋಡಿಕೋ ಎಂದು ಯುವತಿಯರು ದೇವರಲ್ಲಿ ಪ್ರಾರ್ಥಿಸಿದರು.

ಬುಟ್ಟಿಯಲ್ಲಿ ಹೂವುಗಳನ್ನಿಟ್ಟುಕೊಂಡು ಮಂಡಕ್ಕಿ, ಬಲೂನ್‌, ರಿಬ್ಬನ್‌ಗಳನ್ನು ಕಟ್ಟಿ ಅಲಂಕಾರ ಮಾಡಿಕೊಂಡಿದ್ದರು. ಸಾಂಪ್ರದಾಯಿಕ ಲಂಬಾಣಿ ಸಮುದಾಯದ ಬಟ್ಟೆ ಧರಿಸಿ ತಲೆ ಮೇಲೆ ಬುಟ್ಟಿ ಹೊತ್ತುಕೊಂಡು ನೃತ್ಯ ಮಾಡಿದರು.

ನಂತರ ಪ್ರಸ್ತಕ ವರ್ಷ ಮದುವೆಯಾಗಿ ತೆರಳುವಂಥ ಯುವತಿಯರಿಗೆ ಬಳೆ ಬಳುವಳಿಯಾಗಿ ನೀಡುವ ಕಾರ್ಯ ನಡೆಯುವುದರೊಂದಿಗೆ ದೀಪಾವಳಿ ಹಬ್ಬಕ್ಕೆ ತೆರೆ ಬಿತ್ತು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.