ಪ್ರಾಮಾಣಿಕ ಸೇವೆಯಿಂದ ಜನಮನದಲ್ಲಿ ನೆಲೆ

ವರ್ಗಾವಣೆಗೊಂಡ ಸಿಪಿಐ ಡಿ. ದುರುಗಪ್ಪಗೆ ಬೀಳ್ಕೊಡುಗೆ

Team Udayavani, Aug 5, 2019, 4:28 PM IST

5-AGUST-36

ಹರಪನಹಳ್ಳಿ: ವರ್ಗಾವಣೆಗೊಂಡ ಸಿಪಿಐ ಡಿ.ದುರುಗಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಹರಪನಹಳ್ಳಿ:ಪಟ್ಟಣದ ಪೊಲೀಸ್‌ ಉಪವಿಭಾಗದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ವರ್ಗಾವಣೆಗೊಂಡ ಸಿಪಿಐ ಡಿ. ದುರುಗಪ್ಪ ಅವರಿಗೆ ಬೀಳ್ಕೊಡುಗೆ ಮತ್ತು ನೂತನ ಸಿಪಿಐ ಕೆ. ಕುಮಾರ್‌ ಅವರ ಸ್ವಾಗತ ಸಮಾರಂಭ ನಡೆಯಿತು.

ವರ್ಗಾವಣೆಗೊಂಡ ಸಿಪಿಐ ಡಿ. ದುರುಗಪ್ಪ ಸನ್ಮಾನ ಸ್ವೀಕರಿಸಿ, ಪ್ರತಿಯೊಬ್ಬ ಅಧಿಕಾರಿ ಶಿಸ್ತುಬದ್ಧವಾಗಿ, ಕಾನೂನಾತ್ಮಕವಾಗಿ ಸೇವೆ ಸಲ್ಲಿಸಿದರೆ ಅವರ ಅಧಿಕಾರವಧಿಯ ನಂತರವೂ ಗೌರವಗಳು ದೊರೆಯುತ್ತವೆ. ಇಲಾಖೆಗಳ ನಡುವಿನ ಸಂಬಂಧಗಳು ಉತ್ತಮವಾಗಿದ್ದರೆ ಕರ್ತವ್ಯ ನಿರ್ವಹಿಸುವುದು ಸುಲಭ. ನಾನು ಹರಪ್ಪನಹಳ್ಳಿಯೇ ಅಭ್ಯಾಸ ಮಾಡಿದ್ದು, ನಂತರ ಇಲ್ಲಿಯೇ 3 ವರ್ಷ ಪಿಎಸ್‌ಐ ಆಗಿ ಸೇವೆ ಸಲ್ಲಿಸಿದ್ದರಿಂದ ದಕ್ಷತೆಯಿಂದ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿದೆ. ಹರಪನಹಳ್ಳಿಯ ಜನರು ಸಹೃದಯಿಗಳಾಗಿದ್ದು, ಸರ್ವಧರ್ಮ ದವರು ಹೊಂದಾಣಿಕೆಯಿಂದ ಕಾನೂನಿಗೆ ತಲೆಬಾಗಿ ನಡೆಯುತ್ತಾರೆ. ಹೀಗಾಗಿ ಸಮಸ್ಯೆಗಳನ್ನು ಕುಳಿತು ಬಗೆಹರಿಸಿದರೆ ಎಲ್ಲವೂ ಸಾಧ್ಯ ಎಂದರು.

ನೂತನ ಸಿಪಿಐ ಕೆ.ಕುಮಾರ್‌ ಮಾತನಾಡಿ, ಡಿ. ದುರುಗಪ್ಪ ಅವರ ಕಾರ್ಯವೈಖರಿ ಮೆಚ್ಚಿಕೊಂಡು ಅಭಿಮಾನದಿಂದ ಬೀಳ್ಕೊಡುಗೆ ಸಮಾರಂಭಕ್ಕೆ ಇಷ್ಟೊಂದು ಜನಗಳು ಆಗಮಿಸಿರುವುದನ್ನು ನೋಡಿ ತುಂಬಾ ಸಂತೋಷವಾಯಿತು. ಇದರಿಂದಾಗಿ ನನ್ನ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ದುರುಗಪ್ಪ ಅವರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿರದೇ ಸರ್ವಧರ್ಮಿಯ ಪ್ರೀಯರಾಗಿದ್ದರು ಎಂಬುದು ಇದರಿಂದ ತಿಳಿಯುತ್ತದೆ. ಹರಪನಹಳ್ಳಿಯ ನಾಗರಿಕರು ಅವರ ಕಾರ್ಯಗಳಿಗೆ ಸಹಕಾರ ನೀಡಿದ್ದಿರೋ ಹಾಗೆ ನನಗೂ ಸಹ ಸಹಕಾರ ನೀಡಿದರೆ ದುರುಗಪ್ಪ ಅವರ ಸ್ಥಾನ ತುಂಬುತ್ತೇನೆ ಎಂದು ವಿನಂತಿಸಿಕೊಂಡರು.

ಡಿವೈಎಸ್ಪಿ ನಾಗೇಶ್‌ ಐತಾಳ್‌ ಮಾತನಾಡಿ, ಸರಕಾರಿ ಸೇವೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ. ವರ್ಗಾವಣೆ ಹೊಂದಿರುವ ಸಿಪಿಐ ಡಿ. ದುರುಗಪ್ಪ ಅವರು ಸರಕಾರಿ ಸೇವೆಯಲ್ಲಿ ಸಮಾಜದಲ್ಲಿ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದಾಗ ಸಮಾಜ ತನ್ನಿಂತಾನೆ ಅಧಿಕಾರಿಗಳನ್ನು ಗುರುತಿಸುತ್ತದೆ ಎಂಬುವುದಕ್ಕೆ ಇವರೇ ಸಾಕ್ಷಿ ಎಂದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು, ನಾಗರೀಕರು ಜಗಳೂರು ತಾಲೂಕಿಗೆ ವರ್ಗಾವಣೆಗೊಂಡ ಸಿಪಿಐ ಡಿ.ದುರುಗಪ್ಪ ಅವರಿಗೆ ಸನ್ಮಾನಿಸಿದರು ಮತ್ತು ಹರಪನಹಳ್ಳಿ ಆಗಮಿಸಿರುವ ಸಿಪಿಐ ಕೆ.ಕುಮಾರ್‌ ಅವರನ್ನು ಸ್ವಾಗತಿಸುವ ಮೂಲಕ ಬರಮಾಡಿಕೊಂಡರು.

ಹರಪನಹಳ್ಳಿ ಠಾಣೆ ಪಿಎಸ್‌ಐ ಕೆ. ಶ್ರೀಧರ್‌, ಹಲುವಾಗಲು ಪಿಎಸ್‌ಐ ಸಿ.ಪ್ರಕಾಶ್‌, ಅರಸೀಕೆರೆ ಪಿಎಸ್‌ಐ ಎಂ.ಡಿ.ಸಿದ್ದೇಶ್‌ ಮತ್ತು ಪೊಲೀಸ್‌ ಇಲಾಖೆಯ ಮತ್ತು ಗೃಹ ರಕ್ಷಕ ದಳ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.