ನಿಮ್ಮೊಂದಿಗೆ ನಾವಿದ್ದೇವೆ; ಧೃತಿಗೆಡಬೇಡಿ

•ನೆರೆಪೀಡಿತ ಪ್ರದೇಶಕ್ಕೆ ಶಾಸಕರು, ಜಿಲ್ಲಾಧಿಕಾರಿ, ಸಿಇಒ, ಎಸ್ಪಿ ನೇತೃತ್ವದ ತಂಡ ಭೇಟಿ

Team Udayavani, Aug 11, 2019, 11:17 AM IST

11-Agust-12

ಹರಪನಹಳ್ಳಿ; ತಾಲೂಕಿನ ತುಂಗಭದ್ರಾ ನದಿಪಾತ್ರದ ಹಳ್ಳಿಗಳಾದ ಹಲುವಾಗಲು, ನಿಟ್ಟೂರು, ಗರ್ಭಗುಡಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ ಶನಿವಾರ ಶಾಸಕ ಜಿ.ಕರುಣಾಕರರೆಡ್ಡಿ, ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ.ಬಾಬು, ಜಿ.ಪಂ. ಸಿ.ಇಒ ಕೆ.ನಿತೀಶ್‌ಕುಮಾರ್‌, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾರತಿ ತಿಮ್ಮರೆಡ್ಡಿ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ತಂಡ ಭೇಟಿ ನೀಡಿ ನೆರೆಸಂತ್ರಸ್ತರಿಗೆ ಸಂತ್ವಾನ ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಶಾಸಕ ಜಿ.ಕರುಣಾಕರರೆಡ್ಡಿ ಮಾತನಾಡಿ, ನದಿ ಪಾತ್ರದ ಒಟ್ಟು 9 ಹಳ್ಳಿಗಳು ಪ್ರವಾಹಕ್ಕೆ ತುತ್ತಾಗಿದ್ದು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್‌ ಇಲಾಖೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಪಂಚಾಯ್ತಿಯಲ್ಲಿಯೇ ವಾಸ್ತವ್ಯ ಹೂಡಿ ಗ್ರಾಮಗಳ ಪರಿಸ್ಥಿತಿ ಅವಲೋಕಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಗಂಜಿ ಕೇಂದ್ರಗಳಲ್ಲಿ ನೆರ ಸಂತ್ರಸ್ತರಿಗೆ ಶುದ್ಧ ನೀರಿನಲ್ಲಿ ಅಡುಗೆ ತಯಾರಿಸಬೇಕು ಮತ್ತು ಕುಡಿಯಲು ಶುದ್ಧ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಹಲುವಾಗಲು, ನಿಟ್ಟೂರು, ಕಡತಿ ಮೂರು ಪಂಚಾಯ್ತಿಗಳಿಗೆ ಮೂರು ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಿ ವೀಕ್ಷಣೆಗೆ ನಿಯೋಜಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾನಿಗೊಳಗಾದ ಜಮೀನುಗಳ ಬಗ್ಗೆ ಮಾಹಿತಿ ಪಡೆದು ಹಾನಿ ಕುರಿತು ವರದಿ ಸಿದ್ಧಪಡಿಸಬೇಕು. ಪಶು ಇಲಾಖೆಯ ವೈದ್ಯರು ಜಾನುವಾರುಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಹಲುವಾಗಲು ಗ್ರಾಮದ ಆರೋಗ್ಯ ಕೇಂದ್ರದ ವಾಹನವನ್ನು ತುರ್ತು ಸೇವೆಗಾಗಿ ನೇರೆ ಪೀಡಿತ ಹಳ್ಳಿಗಳಿಗೆ ಮೀಸಲಿಡಲಾಗಿದೆ ಎಂದರು.

ಇದಕ್ಕೂ ಮೊದಲು ಶಾಸಕರು ಮತ್ತು ಅಧಿಕಾರಿಗಳ ಬಳಿ ನೆರೆಸಂತ್ರಸ್ತರು, ಜನರು ಮನೆ ಇಲ್ಲ, ಸಾಲ ಮಾಡಿ ಬಿತ್ತನೆ ಮಾಡಿದ್ದ ಹೊಲ, ಗದ್ದೆಗಳೆಲ್ಲಾ ನೀರು ಪಾಲಾಗಿವೆ. ನಾವು ಬದುಕುತ್ತೀವೋ, ಇಲ್ಲವೋ ಎಂಬಂತಹ ಪರಿಸ್ಥಿತಿ ಬಂದಿದೆ. ನದಿ ನೀರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಮ್ಮನ್ನು ನೀವೇ ಕಾಪಾಡಬೇಕು ಎಂದು ಮನವಿ ಮಾಡಿದರು. ಹಾನಿಯಾಗಿರುವ ಪ್ರತಿಯೊಬ್ಬ ರೈತರಿಗೂ ಸರ್ಕಾರದ ಸಹಾಯ ಧನ ನೀಡುತ್ತೇವೆ. ಯಾರು ಆಂತಕಪಡುವ ಅಗತ್ಯವಿಲ್ಲ, ನಿಮ್ಮೊಂದಿಗೆ ನಾವೀದ್ದೇವೆ ಎಂದು ರೈತರಿಗೆ ಶಾಸಕರು, ಅಧಿಕಾರಿಗಳು ಧೈರ್ಯ ತುಂಬಿದರು.

ಜಿ.ಪಂ ಸದಸ್ಯೆ ಕೆ.ಆರ್‌.ಜಯಶೀಲ, ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್‌, ತಹಶೀಲ್ದಾರ್‌ ಡಾ.ನಾಗವೇಣಿ, ತಾ.ಪಂ ಇ.ಒ ಮಮತಾ ಹೊಸಗೌಡರ್‌, ಡಿವೈಎಸ್ಪಿ ನಾಗೇಶ್‌ ಐತಾಳ್‌, ಸಿಪಿಐ ಕೆ.ಕುಮಾರ್‌, ತಾ.ಪಂ ಉಪಾಧ್ಯಕ್ಷ ಮಂಜ್ಯನಾಯ್ಕ, ತಾಲೂಕು ಬಿಜೆಪಿ ಅಧ್ಯಕ್ಷ ಸತ್ತೂರ್‌ ಹಾಲೇಶ್‌, ಮುಖಂಡರಾದ ಎಂ.ಪಿ.ನಾಯ್ಕ, ಆರ್‌.ಲೋಕೇಶ್‌, ಸಣ್ಣ ಹಾಲಪ್ಪ, ದ್ಯಾಮಜ್ಜಿ ರೊಕ್ಕಪ್ಪ, ಎಂ.ಕೆ.ಜಾವೀದ್‌, ಬಿ.ಮಾಹಬೂಬ್‌ಸಾಬ್‌, ಬಾಗಳಿ ಕೊಟ್ರಪ್ಪ, ರಾಘವೇಂದ್ರಶೆಟ್ಟಿ, ಎಸ್‌.ಪಿ.ಲಿಂಬ್ಯಾನಾಯ್ಕ, ಎಂ.ಮಲ್ಲೇಶ್‌, ಪಿಎಸ್‌ಐ ಶ್ರೀಧರ್‌, ಪ್ರಕಾಶ್‌, ಅಧಿಕಾರಿಗಳಾದ ಭೀಮಾನಾಯ್ಕ, ಆನಂದ ಡೋಳ್ಳಿನ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.