ಹಬ್ಬಗಳು ಬಾಂಧವ್ಯ ಬೆಸೆಯುವ ಸೇತುವೆ
•ಐದು ಗ್ರಾಮಗಳ ಜನರ ಮನೆಗಳಿಗೆ ಹಬ್ಬದ ಸಿಹಿ ತಲುಪಿಸಿದ ಎಂ.ಪಿ. ಲತಾ ಮಲ್ಲಿಕಾರ್ಜುನ
Team Udayavani, Sep 4, 2019, 4:10 PM IST
•ಐದು ಗ್ರಾಮಗಳ ಜನರ ಮನೆಗಳಿಗೆ ಹಬ್ಬದ ಸಿಹಿ ತಲುಪಿಸಿದ ಎಂ.ಪಿ. ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ: ಎಂ.ಪಿ.ರವೀಂದ್ರ ಪ್ರತಿಷ್ಠಾನ, ರವಿ ಯುವ ಶಕ್ತಿ ಪಡೆ ಹಾಗೂ ಎಂ.ಪಿ.ಪ್ರಕಾಶ್ ಮತ್ತು ಎಂ.ಪಿ.ರವೀಂದ್ರ ಅಭಿಮಾನಿ ಬಳಗದ ಸಹಯೋಗದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ತಾಲೂಕಿನ 5 ಗ್ರಾಮದ ಹಳ್ಳಿಯ ಜನರ ಮನೆ ಮನೆಗೆ ತೆರಳಿ ಸಿಹಿ ವಿತರಿಸಿದರು.
ತಾಲೂಕಿನ ಕಡಬಗೆರೆ, ಹಿಕ್ಕಿಂಗೇರೆ, ಜೋಷಿ ಲಿಂಗಾಪುರ, ಕಸವನಹಳ್ಳಿ, ಪಾವನಪುರ ಗ್ರಾಮಗಳ ಒಟ್ಟು 1500ಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಗೌರಿ-ಹಬ್ಬದ ಅಂಗವಾಗಿ ಕಡೂಬು ಮತ್ತು ಬಟ್ಟಲು ಉಡುಗೊರೆಯಾಗಿ ನೀಡಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹಬ್ಬಗಳು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೇ ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಉಂಟು ಮಾಡಲು ಶಕ್ತವಾಗುತ್ತದೆ. ವ್ಯಕ್ತಿ ಕೇವಲ ಬಾಹ್ಯ ಬದಲಾವಣೆಯಿಂದ ಅಭಿವೃದ್ಧಿ ಸಾಧಿಸಿದರೆ ಸಾಲದು ಪರಸ್ಪರ ಗೌರವಿಸುವ, ಪ್ರೀತಿಸುವ, ಆದರಿಸುವ, ಸತ್ಕರಿಸುವ ಮನೋಭಾವ ರೂಢಿಸಿಕೊಳ್ಳುವುದು ಅಗತ್ಯ. ಇದು ಸಾಧ್ಯವಾಗಬೇಕಿದ್ದಲ್ಲಿ ಇಂಥ ಹಬ್ಬಗಳಿಂದ ಮಾತ್ರ ಸಾಧ್ಯ ಎಂದರು.
ತಾಪಂ ಮಾಜಿ ಅಧ್ಯಕ್ಷೆ ಭಾಗ್ಯಮ್ಮ ಮಲ್ಲಿಕಾರ್ಜುನ್, ಬಸವರಾಜ್, ಕವಿತಾ ಸುರೇಶ್, ಶಮೀವುಲ್ಲಾ, ನೇತ್ರಾವತಿ, ಉದಯಶಂಕರ್, ಮತ್ತೂರು ಬಸವರಾಜ್, ಹಿಕ್ಕಿಂಕೇರಿ ಕೆಂಚಪ್ಪ, ಪಾವನಪುರ ತಿಮ್ಮಣ್ಣ, ಜೋಶಿಲಿಂಗಾಪುರ ಲಕ್ಷ್ಮಣ, ಏಕಾಂತಪ್ಪ, ಬುಳ್ಳಪ್ಪ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’