ಅಭ್ಯರ್ಥಿಗಳ ಭವಿಷ್ಯ ಬರೆದ ಮತದಾರ

ಕಾರು, ಬೈಕ್‌, ಆಟೋದಲ್ಲಿ ಮತಗಟ್ಟೆಗೆ ಕರೆ ತಂದು ಮತದಾನ•ಪುರಸಭೆ ಚುನಾವಣೆಗೆ ಶಾಂತಿಯುತ ಮತದಾನ

Team Udayavani, May 30, 2019, 1:17 PM IST

30-May-30

ಹರಪನಹಳ್ಳಿ: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿರುವ ಮತದಾರರು.

ಹರಪನಹಳ್ಳಿ: ಪುರಸಭೆ ಚುನಾವಣೆಗೆ ಹರಪನಹಳ್ಳಿ ಪಟ್ಟಣದಲ್ಲಿ ಬುಧವಾರ ಶಾಂತಿಯುತ ಮತದಾನ ನಡೆಯಿತು. ಮತದಾರರು ಮುಂಜಾನೆ 7ರಿಂದ ಸಂಜೆ 5 ಗಂಟೆವರೆಗೆ ನಿರ್ಭಯವಾಗಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಕೆಲವು ಮತಗಟ್ಟೆಗಳಲ್ಲಿ ಮಂದಗತಿಯಲ್ಲಿ ಮತದಾನ ನಡೆದರೆ, ಮತ್ತೆ ಕೆಲವು ಕಡೆಗಳಲ್ಲಿ ಬಿರುಸಿನ ಮತ ಚಲಾವಣೆ ನಡೆಯಿತು.

ಪುರಸಭೆ ಚುನಾವಣೆಗೆ ಪುರುಷರು 19,464, ಹೆಣ್ಣು-19,686, ಇತರೆ 6 ಸೇರಿ ಒಟ್ಟು 39,156 ಮತದಾರರಿದ್ದಾರೆ. ಇದರಲ್ಲಿ ಪುರುಷ 14,356, ಹೆಣ್ಣು-14,160 ಸೇರಿ ಒಟ್ಟು 28,516 ಮತದಾರರು ಹಕ್ಕು ಚಲಾಯಿಸಿದ್ದಾರೆ. ಒಟ್ಟು 72.83ರಷ್ಟು ಮತದಾನವಾಗಿದೆ.

ಪಟ್ಟಣ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತ ಚಲಾವಣೆಗೆ ಜನ ಉತ್ಸಾಹದಿಂದ ಬಂದಿದ್ದರು. ಯುವಕ, ಯುವತಿಯರು ಮತ್ತು ಮಹಿಳೆಯರು ಮಾತ್ರವಲ್ಲದೆ, ಇಳಿವಯಸ್ಸಿನ ಹಿರಿಯರು, ಅಂಗವಿಕಲರು ತಮ್ಮ ಹಕ್ಕು ಚಲಾಯಿಸಿ ಗಮನ ಸೆಳೆದರು. ನಡೆಯಲು ಬಾರದಿದ್ದರೂ ಮತ ಚಲಾಯಿಸಲೇಬೇಕೆಂಬ ತವಕದಿಂದ ಹಿರಿಯರು ಮತಗಟ್ಟೆಗೆ ಕಾಲಿಟ್ಟಿದ್ದು ವಿಶೇಷವಾಗಿತ್ತು. ಅವರನ್ನು ವೀಲ್ಚೇರ್‌ಗಳ ನೆರವಿನಿಂದ ಮತಗಟ್ಟೆಯೊಳಗೆ ಅವರನ್ನು ಕರೆದೊಯ್ದ ಮತದಾನ ಮಾಡಿಸಲಾಯಿತು.

ಸುಮಾರು 9 ಗಂಟೆವರೆಗೆ ಬಿರುಸಿನ ಮತದಾನ ನಡೆಯಿತು. ನಂತರ ಮಧ್ಯಾಹ್ನ 12 ಗಂಟೆ ನಂತರ ಸುಡು ಬಿಸಿಲು ಇದ್ದಿದ್ದರಿಂದ ಮಂದಗತಿಯಲ್ಲಿ ಮತದಾನ ಸಾಗಿತ್ತು. ಸಂಜೆ 4 ಗಂಟೆ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸಿದರು. ಪಟ್ಟಣದ ಬಾಲಕಿಯರ ಶಾಲೆಯಲ್ಲಿ ತೆರೆಯಲಾದ ಮತಗಟ್ಟೆಯಲ್ಲಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ವರಸದ್ಯೋಜಾತ ಸ್ವಾಮೀಜಿ, ಕಾರ್ಯದರ್ಶಿ ಟಿ.ಎಂ.ಚಂದ್ರಶೇಖರಯ್ಯ ಮತದಾನ ಮಾಡಿದರು. ಪಟ್ಟಣದ ಉಪ್ಪಾರಗೇರಿಯಲ್ಲಿ 9ನೇ ವಾರ್ಡ್‌ ಮತಗಟ್ಟೆಗೆ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಲಿರುವ ಚಲವಾದಿ ಪರುಶುರಾಮ ಅವರು ಹರಿಷಿಣ ಶಾಸ್ತ್ರ ಮುಗಿಸಿಕೊಂಡು ನೇರವಾಗಿ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ಮೆರೆದರು.

ಅಭ್ಯರ್ಥಿಗಳ ಬೆಂಬಲಿಗರು ಕಾರು, ಬೈಕ್‌, ಆಟೋದಲ್ಲಿ ಮತದಾರರನ್ನು ಮತಗಟ್ಟೆವರೆಗೆ ಕರೆ ತಂದು ಮತದಾನ ಮಾಡಿಸಿದರು. ಮತಗಟ್ಟೆಯಿಂದ 200 ಮೀಟರ್‌ ದೂರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ತಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರ ಮನವೊಲಿಸುತ್ತಿದ್ದ ದೃಶ್ಯ ಎಲ್ಲಾ ಮತಗಟ್ಟೆಗಳ ಬಳಿ ಸಾಮಾನ್ಯವಾಗಿತ್ತು. ಮತಯಂತ್ರ ದೋಷ ಸೇರಿದಂತೆ ಯಾವ ಮತಗಟ್ಟೆಯಲ್ಲಿ ಗೊಂದಲ, ಗದ್ದಲವಿರಲಿಲ್ಲ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ಐಜಿಪಿ ಸೋಮೇಂದ್ರ ಮುಖರ್ಜಿ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪುರಸಭೆಯ 27 ವಾರ್ಡ್‌ಗಳಿಗೆ ಸ್ಪರ್ಧೆ ಮಾಡಿದ್ದ ಒಟ್ಟು 75 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 31ರಂದು ನಡೆಯುವ ಮತ ಎಣಿಕೆ ನಂತರ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮಧ್ಯ ನೇರ ಸ್ಪರ್ಧೆ ಏರ್ಪಟ್ಟಿದ್ದು, ಫಲಿತಾಂಶದ ಮೇಲೆ ಎಲ್ಲರ ಗಮನವಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.