ಕಡ್ಡಾಯ ಮನೆ ನಿರ್ಮಿಸಿ ಕೊಡಿ

ನೆರೆ ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಿರಲಿ•ಮನೆ ನಿರ್ಮಿಸಲು ಪಟ್ಟಿ ತಯಾರಿಸಿ

Team Udayavani, Aug 23, 2019, 12:07 PM IST

23-April-14

ಹರಪನಹಳ್ಳಿ: ಪಟ್ಟಣದ ಪ್ರವಾಸಿ ಮುಂದಿರದಲ್ಲಿ ಸಂಸದ ವೈ. ದೇವೇಂದ್ರಪ್ಪ ವಿವಿಧ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು

ಹರಪನಹಳ್ಳಿ: ಬಸವ ವಸತಿ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಕಡ್ಡಾಯವಾಗಿ ಗ್ರಾಮ ಸಭೆ ಮೂಲಕವೇ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಮನೆ ನಿರ್ಮಿಸಿ ಕೊಡಬೇಕು ಎಂದು ಸಂಸದ ವೈ. ದೇವೇಂದ್ರಪ್ಪ ತಾಪಂ ಇಒ ಅವರಿಗೆ ತಾಕೀತು ಮಾಡಿದರು.

ಪಟ್ಟಣದ ಪ್ರವಾಸಿ ಮುಂದಿರದಲ್ಲಿ ಗುರುವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಅವರು, ಸರ್ಕಾರದಿಂದ ಅನೇಕ ಸೌಲಭ್ಯಗಳು ಪಂಚಾಯ್ತಿ ವ್ಯಾಪ್ತಿಗೆ ನೇರವಾಗಿ ಬರುತ್ತಿವೆ. ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶವಿದೆ. ಪಂಚಾಯ್ತಿ ವ್ಯಾಪ್ತಿಯ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಖಾತ್ರಿ ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಿಬೇಕು ಮತ್ತು ಗ್ರಾಮ ಸಭೆಗೆ ಹಾಜರಿರಬೇಕು. ಗೈರು ಹಾಜರಾಗುವ ಅಕಾರಿಗಳಿಗೆ ನೋಟಿಸ್‌ ನೀಡುವಂತೆ ಸೂಚನೆ ನೀಡಿದರು.

ದಾವಣಗೆರೆ ಜಿಲ್ಲೆಯಿಂದ ಹರಪನಹಳ್ಳಿ ಬೇರ್ಪಟ್ಟ ನಂತರ ಉದ್ಯೋಗ ಖಾತ್ರಿ ಯೋಜನೆಯಡಿ ಅವ್ಯವಹಾರ ಆರೋಪದಡಿಯಲ್ಲಿ 9 ಗ್ರಾಪಂ ಕಾಮಗಾರಿಗಳ ತನಿಖೆ ನಡೆದಿದೆ. ವೈಯಕ್ತಿಕ ಕಾಮಗಾರಿ ಹೊರತುಪಡಿಸಿ ಯಾವುದೇ ಕಾಮಗಾರಿಗಳ ಹಣ ಪಾವತಿಯಾಗುತ್ತಿಲ್ಲ. ಮುಂದೇನು ಎಂದು ಇಒ ಅವರನ್ನು ಪಶ್ನಿಸಿದಾಗ ದಾವಣಗೆರೆ ಜಿಲ್ಲೆಯಲ್ಲಿದ್ದಾಗ ಮಾಡಿರುವ ಯಾವುದೇ ಕಾಮಗಾರಿಗೆ ಹಣ ಪಾವತಿಸಬೇಡಿ ಎಂದು ಸಿಇಒ ನಿರ್ದೇಶನ ನೀಡಿದ್ದಾರೆ. ಮಾರ್ಚ್‌ ತಿಂಗಳ ಒಳಗೆ ಆಗಿರುವ ಕಾಮಗಾರಿಗಳಿಗೆ ಪೇಮೆಂಟ್ ಆಗಿದೆ ಇಒ ಉತ್ತರಿಸಿದರು. ಕೂಲಿಕಾರರು ನಮ್ಮ ಅಕೌಂಟ್‌ಗೆ ಹಣ ಬಂದಿಲ್ಲವೆಂದು ಒತ್ತಾಯಿಸುತ್ತಿದ್ದು ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಂಸದರು ಸಲಹೆ ನೀಡಿದರು.

ತಾಲೂಕಿನಲ್ಲಿ ನೆರೆ ಹಾವಳಿಯಿಂದ ಒಟ್ಟು 388 ಮನೆಗಳು ಜಕಂ ಆಗಿವೆ. ಅದರಲ್ಲಿ 1 ಮನೆ ಸಂಪೂರ್ಣ ಹಾಳಾಗಿದ್ದು ಪರಿಹಾರ ವಿತರಿಸಲಾಗಿದೆ ಎಂದು ತಹಶೀಲ್ದಾರ್‌ ರವಿ ತಿಳಿಸಿದಾಗ ಕೇವಲ 1 ಮನೆ ಅಲ್ಲ ಹಲವಾರು ಮನೆಗಳು ಸಂಪೂರ್ಣವಾಗಿ ಬಿದ್ದಿರುವ ಮಾಹಿತಿಯಿದೆ. ಸರಿಯಾಗಿ ಸಮೀಕ್ಷೆ ಮಾಡಬೇಕು. ನೆರೆಸಂತ್ರಸ್ತರು ಪರಿಹಾರದಿಂದ ವಂಚಿತರಾಗಬಾರದು. ಸರಿಯಾಗಿ ಕರ್ತವ್ಯ ನಿರ್ವಹಿಸಿ, ನೊಂದವರಿಗೆ ಮನೆ ನಿರ್ಮಾಣ ಮಾಡಲು ಪಟ್ಟಿ ತಯಾರಿಸಿ ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

ಒಟ್ಟು 21 ಟನ್‌ ಒಣ ಮೇವು ಖರೀದಿಗೆ ಅನುಮೋದನೆ ಸಿಕ್ಕಿದೆ. ಈಗಾಗಲೇ 4-5 ಟನ್‌ ಮೇವು ಖರೀದಿಸಲಾಗಿದೆ. ನಜೀರ್‌ ನಗರದಲ್ಲಿ ಗೋ-ಶಾಲೆ ತೆರೆಯಲು ಉದ್ದೇಶಿಸಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿದಾಗ ಸದ್ಯದ ಪರಿಸ್ಥಿತಿಯಲ್ಲಿ ಮೇವಿನ ಸಮಸ್ಯೆಯಿಲ್ಲ. ಮಳೆಯಿಂದ ಹುಲ್ಲು ಹಸಿರಾಗಿದೆ. ತ್ವರಿತವಾಗಿ ಮನೆ ಕಟ್ಟಿಕೊಳ್ಳಲು ನೆರವು ನೀಡಿ ಎಂದರು.

ಸಿಂಗ್ರಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ 8 ಬೋರ್‌ವೆಲ್ ಬಂದ್‌ ಆಗಿವೆ. ಸದ್ಯ ಎರಡು ಬೋರ್‌ವೆಲ್ ಕೊರೆಸಿ ಕೊಡಿ ಎಂದು ಗ್ರಾಮಸ್ಥರು ಸಂಸದರಲ್ಲಿ ಮನವಿ ಮಾಡಿದಾಗ ಆದಷ್ಟು ಗ್ರಾಮದಲ್ಲಿಯೇ ಪಾಯಿಂಟ್ ಮಾಡಿ ಕೊಳವೆಬಾವಿ ಕೊರೆಸಬೇಕು. ಗ್ರಾಮದಿಂದ ದೂರದಲ್ಲಿ ಕೊರೆದರೆ ಅನಾವಶ್ಯಕವಾಗಿ ಪೈಪ್‌ ಅಳವಡಿಕೆ ಮಾಡಬೇಕು. ಗ್ರಾಮದಲ್ಲಿ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕ ರಿಪೇರಿ ಮಾಡಿಸಿ ಗ್ರಾಮದಲ್ಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಜರುಗಿಸಿ ಎಂದು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಜಯ್ಯಪ್ಪ ಅವರಿಗೆ ಸೂಚಿಸಿದರು.

ನಾನು ಬಿಸಿಎಂ ಹಾಸ್ಟೆಲ್ಗೆ ದಿಢೀರ್‌ ಭೇಟಿ ನೀಡಿ ಊಟ ಮಾಡುತ್ತೀನಿ. ಗುಣಮಟ್ಟದ ಊಟ ಮಕ್ಕಳಿಗೆ ಕೊಡಬೇಕು ಎಂದು ಬಿಸಿಎಂ ಅಧಿಕಾರಿ ಭೀಮನಾಯ್ಕ ಅವರಿಗೆ ಸೂಚಿಸಿದ ಸಂಸದರು ಬಿಸಿಎಂ ಹಾಸ್ಟೆಲ್ಗೆ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸಿದರೆ ಅನುಮೋದನೆ ಕೊಡಿಸಲಾಗುವುದು ಎಂದರು. ಹೊಸಪೇಟೆ ಆರ್‌ಟಿಒ ಅವರಿಗೆ ಹರಪನಹಳ್ಳಿ ಪಟ್ಟಣದಲ್ಲಿ ವಾಹನಗಳ ನೋಂದಣಿಗೆ ಕ್ಯಾಂಪ್‌ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಸಿಂಗ್ರಿಹಳ್ಳಿ ಗ್ರಾಮದಲ್ಲಿ ಸ್ಮಶಾನ ಅಭಿವೃದ್ಧಿಗೆ ಗ್ರಾಮಸ್ಥರು ಮತ್ತು ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟಿನ್‌ ಉಸ್ತುವಾರಿಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ(ತೃತೀಯ ಲಿಂಗಿಗಳು) ನೀಡಬೇಕೆಂದು ಸಂಸದರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್‌ ರವಿ, ತಾಪಂ ಇಒ ಮಮತಾ ಹೊಸಗೌಡರ್‌, ಲೋಕೋಪಯೋಗಿ ಇಲಾಖೆ ಎಇಇ ಲಿಂಗಪ್ಪ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಜಯ್ಯಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.